ಗುಜರಾತ್ನಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಳವಾಗುತ್ತಿದ್ದಂತೆ ಕಾಣಿಸಿಕೊಂಡಿದೆ ಆಂಟಿಫಂಗಸ್ ಔಷಧಿ ಕೊರತೆ
ಗುಜರಾತ್, ಮೇ 19: ಕೊರೊನಾ ಸೋಂಕು ದೇಶದಲ್ಲಿ ಹೆಚ್ಚಳವಾಗುತ್ತಿರುವ ನಡುವೆ ಕಾಣಿಸಿಕೊಂಡಿರುವ ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಳಸಲಾಗುವ ಆಂಟಿ ಫಂಗಲ್ ಔಷಧಿ ಆಂಫೊಟೆರಿಸಿನ್-ಬಿ ಯ ಕೊರತೆಯು ಗುಜರಾತ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.
ಗುಜರಾತ್ನ ಐದು ನಗರಗಳಲ್ಲಿ ಎಂಟು ಪ್ರಮುಖ ಆಸ್ಪತ್ರೆಗಳಲ್ಲಿ, ಪ್ರಸ್ತುತ ಕನಿಷ್ಠ 1,163 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಔಷಧಿ ಕೊರತೆ ಕಾಣಿಸಕೊಂಡಿರುವುದು ಆತಂಕ ಮೂಡಿಸಿದೆ.
ಗುಜರಾತ್ನಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನೇ ದಿನೇ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆ ಆರಂಭದಲ್ಲೇ ಸೋಂಕಿತರನ್ನು ಪತ್ತೆಹಚ್ಚುವುದು ಚೇತರಿಕೆ ಪ್ರಮಾಣ ಹೆಚ್ಚಿಸಲಿದೆ ಎಂದು ವೈದ್ಯರು ಹೇಳುತ್ತಾರೆ.

ಸೋಮವಾರ, ಕೊರೊನಾ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯ ಬಗ್ಗೆ ಉಲ್ಲೇಖಿಸಿ ಇದು "ಅತ್ಯಂತ ಗಂಭೀರ ವಿಷಯ" ಎಂದು ಹೇಳಿದೆ. ಹಾಗೆಯೇ ಈ ಬಗ್ಗೆ ರಾಜ್ಯ ಸರ್ಕಾರ ವರದಿ ನೀಡುವಂತೆ ಆದೇಶಿಸಿದೆ. ಈ ಪ್ರಕರಣ ಏರಿಕೆ ನಡುವೆ ಔಷಧಿಗಳ ಸಂಗ್ರಹ ಸಾಕಷ್ಟು ಇದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿತ್ತು.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಜರಾತ್ ವೈದ್ಯಕೀಯ ಶಿಕ್ಷಣ ಹಾಗೂ ಗೋತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂಶೋಧನಾ ಸಂಸ್ಥೆಯ ಅಧೀಕ್ಷಕರು ಡಾ. ವಿಶಾಲ ಪಾಂಡ್ಯ, ನಮಗೆ ಗುಜರಾತ್ ವೈದ್ಯಕೀಯ ಸೇವೆಗಳ ನಿಗಮದಿಂದ ಆಂಫೊಟೆರಿಸಿನ್ ಬಿ ಔಷಧಿ ಲಭಿಸುತ್ತಿದೆ. ಆದರೆ ಮುಂಬರುವ ದಿನಗಳಲ್ಲಿ ಸೋಂಕಿತ ರೋಗಿಗಳ ಸಂಖ್ಯೆ ಹೆಚ್ಚಾದರೆ ಈ ಔಷಧಿ ಸಾಕಾಗುವುದಿಲ್ಲ. ಬ್ಲ್ಯಾಕ್ ಫಂಗಸ್ ಸೋಂಕು ಇರುವ ರೋಗಿಗಳಿಗೆ ಉಚಿತವಾಗಿ ಲಭ್ಯವಿರುವ ಲಿಯೋಫಿಲೈಸ್ಡ್ ಪೌಡರ್ ರೂಪದ ಔಷಧಿ ನೀಡಲಾಗುವುದಿಲ್ಲ. ಓರ್ವ ರೋಗಿಗೆ ಅಧಿಕವೆಂದರೆ 120 ಚುಚ್ಚುಮದ್ದಿನ ಅವಶ್ಯಕತೆ ಉಂಟಾಗುತ್ತದೆ ಎಂದು ವಿವರಿಸಿದ್ದಾರೆ.
ಇನ್ನು ಸರ್ಕಾರದ ಪರ ವಕೀಲ ಎಜಿ ತ್ರಿವೇದಿ ಕೋರ್ಟ್ಗೆ, ಲಿಪೊಸೋಮಲ್ ಮತ್ತು ಲೈಫೈಲೈಸ್ಡ್ ರೂಪದಲ್ಲಿ ಆಂಫೊಟೆರಿಸಿನ್ ಬಿ ಯ 1,24,430 ಬಾಟಲುಗಳನ್ನು ಒದಗಿಸಲು ಸರ್ಕಾರ ಈಗಾಗಲೇ ಬೇಡಿಕೆ ಸಲ್ಲಿಸಿದೆ. ಅದರಲ್ಲಿ 26,000 ಆದ್ಯತೆಯ ಲಿಪೊಸೋಮಲ್ ಆಗಿದೆ. ಅಂದಾಜು 15 ಕೋಟಿ ರೂ.ಗಳ ವೆಚ್ಚವನ್ನು ರಾಜ್ಯ ಭರಿಸಲಿದೆ ಎಂದು ಹೇಳಿದ್ದರು.
ಹಾಗೆಯೇ ನಮ್ಮಲ್ಲಿ ಸಾಕಷ್ಟು ಔಷಧಿ ದಾಸ್ತಾನು ಇದೆ. ಆದರೆ ಉತ್ಪಾದಕರ ಸಂಖ್ಯೆ ಕಡಿಮೆ ಇರುವುದರಿಂದ ಚುಚ್ಚುಮದ್ದು ಸುಲಭವಾಗಿ ಲಭ್ಯವಾಗುತ್ತಿಲ್ಲ. ರೆಮ್ಸಿಡಿವಿರ್ ಕೊರತೆಯೊಂದಿಗೆ ಈಗ ಆಂಫೊಟೆರಿಸಿನ್-ಬಿ ಕೊರತೆಯನ್ನು ಸರಿದೂಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೂಡಾ ತಿಳಿಸಿದ್ದರು.
ಇನ್ನು ಸರ್ಕಾರ ಮೇ 26 ರಂದು ನಿಗದಿಯಾಗುವ ಮುಂದಿನ ವಿಚಾರಣೆಯ ಮೊದಲು ಆಂಟಿಫಗಲ್ ಔಷಧಿಗಳ ಬಗ್ಗೆ ವಿವಿರಣೆ ನೀಡಿ ಅಫಿಡವಿಟ್ ಸಲ್ಲಿಸಬೇಕು ಎಂದು ಗುಜರಾತ್ ಹೈಕೋರ್ಟ್ ಆದೇಶಿಸಿದೆ.
ರಾಜ್ಕೋಟ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರಸ್ತುತ 400 ಮಂದಿ ರೋಗಿಗಳಿದ್ದಾರೆ. ಅವರಲ್ಲಿ ಹೆಚ್ಚಿನವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಆದರೆ ಕೆಲವು ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ ಆಂಫೊಟೆರಿಸಿನ್-ಬಿ ಪಡೆಯಲು ಈ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಡಾ. ತ್ರಿವೇದಿ ಹೇಳಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications