ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಅಬ್ಬರಕ್ಕೆ ತತ್ತರಿಸಿದ ಕಾಂಗ್ರೆಸ್
ಅಹಮದಾಬಾದ್, ಮಾರ್ಚ್ 3: ಗುಜರಾತ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಎಲ್ಲ 31 ಕ್ಷೇತ್ರಗಳಲ್ಲಿಯೂ ಕ್ಲೀನ್ ಸ್ವೀಪ್ ಮಾಡುವ ಮೂಲಕ ಕಮಲ ಪಕ್ಷವು ಕಾಂಗ್ರೆಸ್ ಅನ್ನು ದೂಳೀಪಟ ಮಾಡಿದೆ.
ಭಾನುವಾರ 81 ಮುನಿಸಿಪಾಲಿಟಿಗಳು, 31 ಜಿಲ್ಲಾ ಪಂಚಾಯತ್ ಮತ್ತು 231 ತಾಲ್ಲೂಕು ಪಂಚಾಯತಿ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಗೆ ಮಂಗಳವಾರ ನಡೆಯಿತು. ಸಂಜೆ ವೇಳೆಗೆ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಎಲ್ಲ 31 ಜಿಲ್ಲಾ ಪಂಚಾಯಿತಿಗಳಲ್ಲಿ ಭರ್ಜರಿ ಮುನ್ನಡೆ ಪಡೆದುಕೊಂಡಿತು.
2015ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 22 ಹಾಗೂ ಕಾಂಗ್ರೆಸ್ ಏಳು ಜಿಲ್ಲಾ ಪಂಚಾಯತಿಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಎರಡು ಕ್ಷೇತ್ರ ಇತರರ ಪಾಲಾಗಿತ್ತು. ಆದರೆ ಈ ಬಾರಿ ಬಿಜೆಪಿ ಎಲ್ಲ ಸೀಟುಗಳನ್ನೂ ತನ್ನ ವಶಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳನ್ನು ಅಧಿಕಾರದಿಂದ ಹೊರಹಾಕಿದೆ.

ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಕಂಡಿದೆ. ಪಂಚಮಹಲ್ ಜಿಲ್ಲೆಯಲ್ಲಿ ಖಾತೆ ತೆರೆಯಲೂ ವಿಫಲವಾಗಿದೆ. 29 ಜಿಲ್ಲೆಗಳಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳ ಸಂಖ್ಯೆ ಎರಡಂಕಿ ತಲುಪುವಲ್ಲಿಯೂ ವಿಫಲವಾಗಿದೆ.
ಕಾಂಗ್ರೆಸ್ ಹಿರಿಯ ಮುಖಂಡರಾದ ಪರೇಶ್ ಧನಾನಿ, ಅಮಿತ್ ಚಾವ್ಡಾ, ಭರತ್ ಸಿಂಗ್ ಸೋಲಂಕಿ, ಅಶ್ವಿನ್ ಕೊಟ್ವಾಲ್, ವಿಕ್ರಮ್ ಮದಮ್ ಮುಂತಾದವರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿಸಿದೆ. ಸ್ಥಳೀಯ ಚುನಾವಣೆಗಳಲ್ಲಿನ ಕೆಟ್ಟ ಪ್ರದರ್ಶನದ ಬಳಿಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ಡಾ ಮತ್ತು ಗುಜರಾತ್ ವಿಧಾನಸಭೆಯಲ್ಲಿನ ವಿರೋಧಪಕ್ಷದ ನಾಯಕ ಪರೇಶ್ ಧನಾನಿ ರಾಜೀನಾಮೆ ಸಲ್ಲಿಸಿದ್ದಾರೆ.
81 ಮುನಿಸಿಪಾಲಿಟಿಗಳಲ್ಲಿ ಬಿಜೆಪಿ 75ರಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮತ್ತು ಎಎಪಿಗಳು ಕ್ರಮವಾಗಿ ನಾಲ್ಕು ಮತ್ತು ಎರಡು ಕಡೆ ಮುನ್ನಡೆ ಸಾಧಿಸಿವೆ. 231 ತಾಲ್ಲೂಕುಪಂಚಾಯಿತಿಗಳಲ್ಲಿ ಬಿಜೆಪಿ 196ರಲ್ಲಿ, ಕಾಂಗ್ರೆಸ್ 33ರಲ್ಲಿ ಮುನ್ನಡೆ ಪಡೆದಿದೆ.
ಒಟ್ಟು 8,474 ಸೀಟುಗಳ ಪೈಕಿ 8,235 ಸೀಟುಗಳಿಗೆ ಚುನಾವಣೆ ನಡೆದಿತ್ತು. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications