ರಾಜೀವ್ ಗಾಂಧಿ ಸಾವಿಗೆ ಬಿಜೆಪಿ ಕಾರಣ ಎಂದ ಅಹ್ಮದ್ ಪಟೇಲ್
ಅಹ್ಮದಾಬಾದ್, ಮೇ 09: ರಾಜೀವ್ ಗಾಂಧಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಯನ್ನು ಟೀಕಿಸಿದ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್, "ರಾಜೀವ್ ಗಾಂಧಿ ಅವರ ಸಾವಿಗೆ ಬಿಜೆಪಿಯೇ ಕಾರಣ" ಎಂದಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, 'ರಾಜೀವ್ ಗಾಂಧಿ ಅವರು ನಿಧನರಾಗುವ ಸಂದರ್ಭದಲ್ಲಿ ಭ್ರಷ್ಟಾಚಾರಿ ನಂ.1 ಆಗಿದ್ದರು' ಎಂದಿದ್ದರು.
ಈ ಹೇಳಿಕೆಯನ್ನು ಟೀಕಿಸಿ, ಟ್ವೀಟ್ ಮಾಡಿರುವ ಪಟೇಲ್, "ಒಬ್ಬ ಹುತಾತ್ಮ ಪ್ರಧಾನಿಗೆ ಅವಮಾನ ಮಾಡುವುದು ಬಿಜೆಪಿಯ ಹೇಡಿತನಕ್ಕೆ ಸಾಕ್ಷಿ. ಆದರೆ ಅವರ ಹತ್ಯೆಗೆ ಕಾರಣ ಯಾರು? ಅವರ ಹತ್ಯೆಯ ಸಂಚಿನ ಗುಪ್ತಚರ ಮಾಹಿತಿ ಇದ್ದರೂ ಬಿಜೆಪಿ ಬೆಂಬಲಿತ ವಿಪಿ ಸಿಂಗ್ ಸರ್ಕಾರ ರಾಜೀವ್ ಗಾಂಧಿ ಅವರಿಗೆ ಹೆಚ್ಚಿನ ಭದ್ರತೆ ನೀಡದಿರುವುದೇ ಅವರ ಹತ್ಯೆಗೆ ಕಾರಣ" ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.

"ರಾಜೀವ್ ಅವರು ಬಿಜೆಪಿಯ ದ್ವೇಷದಿಂದಾಗಿ ತಮ್ಮ ಪ್ರಾಣ ಕಳೆದುಕೊಂಡರು. ಅವರ ಆಧಾರರಹಿತ ಆರೋಪಗಳಿಗೆ ಉತ್ತರಿಸಲು ಅವರೀಗ ನಮ್ಮೊಂದಿಗಿಲ್ಲ" ಎಂದು ಅಹ್ಮದ್ ಪಟೇಲ್ ಹೇಳಿದ್ದಾರೆ.
ರಾಜೀವ್ ಗಾಂಧಿ ಅವರು ತಮ್ಮ 47ನೇ ವಯಸ್ಸಿನಲ್ಲಿ(20 ಆಗಸ್ಟ್ 1944- 21 ಮೇ 1991) ತಮಿಳುನಾಡಿನ ಚೆನ್ನೈ ಬಳಿಯ ಶ್ರೀಪೆರುಂಬುದುರ್ ಎಂಬಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿದ್ದ ಸಮಯದಲ್ಲಿ ಅವರನ್ನು ಬಾಂಬ್ ಸ್ಫೋಟಿಸಿ ಕೊಲ್ಲಲಾಗಿತ್ತು. ಭಾರತದ ಆರನೇ ಪ್ರಧಾನಿಯಾಗಿದ್ದ ಅವರು ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications