ಗುಜರಾತ್ : ಜಸ್ಧನ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಜಯ
ಅಹಮದಾಬಾದ್, ಡಿಸೆಂಬರ್ 23 : ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಂಪುಟದ ಸಚಿವ, ಬಿಜೆಪಿ ನಾಯಕ ಕುನ್ವರಾಜೀ ಬಾವಾಲಿಯಾ ಅವರು ಜಸ್ಧನ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಗಳಿಸಿದರು.
ಗುಜರಾತ್ನ ಜಸ್ಧನ್ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಯಿತು. ಬಿಜೆಪಿಯ ಕುನ್ವರಾಜೀ ಬಾವಾಲಿಯಾ ಅವರು 19,985 ಮತಗಳ ಅಂತರಿಂದ ಕಾಂಗ್ರೆಸ್ನ ಅವಸಾರ್ ನಖೀಯಾ ಅವರನ್ನು ಸೋಲಿಸಿದರು.
ಜಸ್ಧನ್ ಕ್ಷೇತ್ರದಲ್ಲಿ ಕುನ್ವರಾಜೀ ಬಾವಾಲಿಯಾ ಅವರು ಕಾಂಗ್ರೆಸ್ನಿಂದ ಕಳೆದ ಚುನಾವಣೆಯಲ್ಲಿ ಗೆದ್ದಿದ್ದರು. ಜುಲೈ ತಿಂಗಳಿನಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿತ್ತು.

ಜಸ್ಧನ್ ಕ್ಷೇತ್ರದಲ್ಲಿ ಬಾವಾಲಿಯಾ ಅವರು 1995, 1998, 2002, 2007 ಮತ್ತು 2017ರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಕೋಲಿ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ ಬಾವಾಲಿಯಾ ಅವರು ಬಿಜೆಪಿ ಸೇರಿದ ಬಳಿಕ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.
ಸಂಪುಟ ಸೇರಿದ 6 ತಿಂಗಳವೊಳಗೆ ಚುನಾವಣೆಯಲ್ಲಿ ಅವರು ಜಯಗಳಿಸಬೇಕಾಗಿತ್ತು. ಜಸ್ಧನ್ ಕ್ಷೇತ್ರದಿಂದಲೇ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದಾರೆ.
ಕುನ್ವರಾಜೀ ಬಾವಾಲಿಯಾ ಅವರ ಎದುರಾಳಿ ಕಾಂಗ್ರೆಸ್ನ ಅವಸಾರ್ ನಖೀಯಾ ಅವರು 20 ವರ್ಷಗಳ ಕಾಲ ಬಾಲಾಲಿಯಾ ಅವರ ಆಪ್ತರಾಗಿದ್ದರು. ಬಾವಾಲಿಯಾ ಅವರು ಕಾಂಗ್ರೆಸ್ ತೊರೆದ ಬಳಿಕ ಎದುರಾದ ಚುನಾವಣೆಯಲ್ಲಿ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications