ಕೇಂದ್ರವು ಗುಜರಾತ್ಗೆ ನೀಡಿದ ನೇರ ಹಣದ ಪ್ರಮಾಣ ಶೇ.350ರಷ್ಟು ಏರಿಕೆ
ಅಹಮದಾಬಾದ್, ಸೆಪ್ಟೆಂಬರ್ 30:ಕೇಂದ್ರದಿಂದ ಗುಜರಾತ್ ಸರ್ಕಾರಕ್ಕೆ ನೇರವಾಗಿ ಪಾವತಿಯಾಗಿರುವ ಹಣವು 2015ರಿಂದ ಈಚೆಗೆ ಶೇ.350ರಷ್ಟು ಹೆಚ್ಚಳವಾಗಿದೆ.
2015-16ರ ಆರ್ಥಿಕ ವರ್ಷದಲ್ಲಿ 2542 ಕೋಟಿಗಳಿದ್ದಿದ್ದು 2019-20ರ ವೇಳೆಗೆ ಸುಮಾರು 11,659 ಕೋಟಿ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಲಾಗಿದೆ.
ಗುಜರಾತ್ನ ವಿಧಾನಸಭೆಯಲ್ಲಿ ಸಿಎಜಿ ವರದಿಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಖಾಸಗಿ ವಲಯಕ್ಕೆ ನೀಡಿರುವ 832 ಕೋಟಿ ರೂ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಿರುವ 17 ಕೋಟಿ ರೂ., ಟ್ರಸ್ಟ್ಗಳಿಗೆ ನೀಡಿರುವ 79 ಕೋಟಿ ರೂ., ಎನ್ಜಿಒಗಳಿಗೆ ನೀಡಿರುವ 18.35ಕೋಟಿ ರೂ.ಹಾಗೂ ವೈಯಕ್ತಿಕವಾಗಿ ನೀಡಿರುವ 1.56 ಕೋಟಿ ಕೂಡ ಸೇರಿದೆ.

ಕೇಂದ್ರ ಸರ್ಕಾರವು ಗುಜರಾತ್ಗೆ ನೀಡಿರುವ ಹಣದಲ್ಲಿ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನೀಡುವಂತಹ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕೂಡ ಸೇರಿದೆ. ಇದು 3333 ಕೋಟಿ ರೂ. ಆಗಿದೆ. ಹಾಗೆಯೇ ಗುಜರಾತ್ನ ಮೆಟ್ರೋ ಲಿಂಕ್ ಎಕ್ಸ್ಪ್ರೆಸ್ ಯೋಜನೆಗೆ 1667 ಕೋಟಿ ರೂ.ವನ್ನು ನೀಡಲಾಗಿದೆ.
ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಯೋಜನೆಯಾಗಿದೆ. ಸಂಸದರ ನಿಧಿಗಾಗಿ ಹಣ ನೀಡಲಾಗಿದೆ, 97 ಕೋಟಿ ರೂ.ವನ್ನು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಗೆ ನೀಡಲಾಗಿದೆ.
ಇದರ ಹೊರತಾಗಿ ರಾಜ್ಯ ಸರ್ಕಾರದ ಸಂಸ್ಥೆಗಳಿಗೆ 3406 ಕೋಟಿ ರೂ. ನೀಡಿದ್ದರೆ, ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ 3389 ಕೋಟಿ ರೂ. ನೀಡಲಾಗಿದೆ. ಮತ್ತು ಗುಜರಾತ್ನಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ 1826 ಕೋಟಿ ರೂ. ನೀಡಲಾಗಿದೆ. ಮತ್ತು ಗುಜರಾತ್ನಲ್ಲಿರುವ ಸ್ವಾಯತ್ತ ಸಂಸ್ಥೆಗಳಿಗೆ 1069 ಕೋಟಿಯನ್ನು ವರ್ಗಾಯಿಸಲಾಗಿದೆ.
ಪ್ರೊ. ವೈಕೆ ಅಲಘ್ ಮಾತನಾಡಿ, ಒಂದು ರಾಜ್ಯದಲ್ಲಿ ಕೇಂದ್ರ ಯೋಜನೆ ಜಾರಿಗೊಳಿಸುವ ಹಕ್ಕು ಕೇಂದ್ರಕ್ಕೆ ಇದೆ, ಆದಾಗ್ಯೂ ಮೆಟ್ರೋದಂತಹ ವಾಣಿಜ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಪರ ವಿರುದ್ಧ ವಾದಗಳಿವೆ. ನೇರ ಹಣ ವರ್ಗಾವಣೆ ಗಂಭೀರ ಸಮಸ್ಯೆಯಾಗಿದ್ದು, ಕೆಲವು ಮಾನದಂಡಗಳ ಆಧಾರದ ಮೇಲೆ ಹಣವನ್ನು ಹಂಚಲಾಗುತ್ತದೆ, ಆ ಅರ್ಹತೆಯನ್ನು ಹೊಂದಿರದ ಸಂಸ್ಥೆಗಳು ವಂಚಿತವಾಗುತ್ತವೆ'.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications