ವಿಡಿಯೋ: ಬಿಜೆಪಿ-ಕಾಂಗ್ರೆಸ್ ವಿದ್ಯಾರ್ಥಿ ಘಟಕಗಳ ಬೀದಿ ಕಾಳಗ, 10 ಮಂದಿಗೆ ಗಾಯ
ಅಹ್ಮದಾಬಾದ್, ಜನವರಿ 07: ಬಿಜೆಪಿ ಮತ್ತು ಕಾಂಗ್ರೆಸ್ನ ವಿದ್ಯಾರ್ಥಿ ಘಟಕಗಳಾದ ಎಬಿವಿಪಿ ಮತ್ತು ಎನ್ಎಸ್ಯುಐ ನಡುವೆ ಬೀದಿ ಕಾಳಗ ನಡೆದಿದ್ದು 10 ಮಂದಿ ಗಾಯಗೊಂಡಿದ್ದಾರೆ.
ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ ಅಹ್ಮದಾಬಾದ್ ಸಮೀಪದ ಎಬಿವಿಪಿ ಕಚೇರಿ ಬಳಿ ಎನ್ಎಸ್ಯುಐ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಎಬಿವಿಪಿ ಮತ್ತು ಎನ್ಎಸ್ಯುಐ ನಡುವೆ ಗುಂಪು ಸಂಘರ್ಷ ಉಂಟಾಗಿದ್ದು ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ.
ಘರ್ಷಣೆಯಲ್ಲಿ ಗುಜರಾತ್ ಎನ್ಎಸ್ಯುಐ ನ ಪ್ರಧಾನ ಕಾರ್ಯದರ್ಶಿ ನಿಖಿಲ್ ಸವಾನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ವಿ.ಎಸ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಖಿಲ್ ಸವಾನಿ ಅವರಿಗೆ ಗುಂಪೊಂದು ಹೊಡೆಯುತ್ತಿರುವ ವಿಡಿಯೋ ಬಿಡುಗಡೆ ಆಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಎರಡೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಘರ್ಷಣೆಯಲ್ಲಿ ಸಾರ್ವಜನಿಕ ಆಸ್ತಿಗೂ ಹಾನಿ ಆಗಿದೆ.
ಘಟನೆ ನಡೆದ ಕೂಡಲೆ ಪೊಲೀಸರು ಮಧ್ಯ ಪ್ರವೇಶಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಘಟನೆ ಬಗ್ಗೆ ಎಫ್ಐಆರ್ ಸಹ ದಾಖಲಿಸಿಕೊಂಡಿದ್ದಾರೆ.
The state sponsor violence is going continue. Here is the clear proof that when NSUI Gujarat protest peacefully RSS goons include @DrRutvij President Gujarat @BJYM and President of ABVP Ahmedabad Naresh Desai attack on protesters.#BanABVP #AkhilBhartiyaViolenceParishad pic.twitter.com/88f2aVALJ9
— NSUI (@nsui) January 7, 2020
ಘಟನೆ ಬಗ್ಗೆ ಮಾತನಾಡಿರುವ ಎನ್ಎಸ್ಯುಐ ಕಾರ್ಯದರ್ಶಿ ಭವಿಕ್ ಸೋಲಂಕಿ, 'ನಮ್ಮ ಪ್ರತಿಭಟನೆ ಶಾಂತವಾಗಿತ್ತು, ಆದರೆ ಎಬಿವಿಪಿ ಸದಸ್ಯರು ಅಚಾನಕ್ಕಾಗಿ ಬಂದು ದೊಣ್ಣೆಗಳಿಂದ ನಮ್ಮ ಮೇಲೆ ಹಲ್ಲೆ ಪ್ರಾರಂಭಿಸಿದರು' ಎಂದಿದ್ದಾರೆ.
ಎಬಿವಿಪಿ ಸಹ ಘಟನೆ ಬಗ್ಗೆ ಹೇಳಿಕೆ ನೀಡಿದ್ದು, 'ಎನ್ಎಸ್ಯುಐ ಸದಸ್ಯರು ಧ್ವಜಗಳನ್ನು ಹಿಡಿದು ಕಚೇರಿ ಬಳಿ ಬಂದರು, ನಂತರ ಧ್ವಜಗಳನ್ನು ತೆಗೆದು ಕೋಲುಗಳಿಂದ ನಮ್ಮ ಮೇಲೆ ಹಲ್ಲೆ ಮಾಡಲು ಆರಂಭಿಸಿದರು' ಎಂದಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications