ಗುಜರಾತ್: ರಾಮನವಮಿ ಮೆರವಣಿಗೆ ವೇಳೆ ಕೋಮು ಘರ್ಷಣೆ: ಓರ್ವ ಸಾವು
ಅಹಮದಾಬಾದ್, ಏಪ್ರಿಲ್ 11: ರಾಮ ನವಮಿಯಂದು ಭಾನುವಾರ ನಡೆದ ಮೆರವಣಿಗೆಯಲ್ಲಿ ಗುಜರಾತ್ನ ಖಂಭತ್ ನಗರದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲೇ ರಾಜ್ಯದ ಹಿಮ್ಮತ್ನಗರ ನಗರದಲ್ಲಿಯೂ ಎರಡು ಸಮುದಾಯಗಳ ಸದಸ್ಯರ ನಡುವೆ ಹಿಂಸಾಚಾರ ನಡೆದಿದೆ.
ಘರ್ಷಣೆ ವೇಳೆ ಎರಡೂ ಕೋಮಿನ ಗುಂಪುಗಳು ಎರಡೂ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆಸಿದೆ ಮತ್ತು ಬೆಂಕಿ ಹಚ್ಚಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಪ್ರಯೋಗ ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಂಭತ್ ನಗರವು ಆನಂದ್ ಜಿಲ್ಲೆಯಲ್ಲಿದ್ದರೆ, ಹಿಮ್ಮತ್ನಗರವು ಸಬರ್ಕಾಂತ ಜಿಲ್ಲೆಯಲ್ಲಿದೆ. "ಇಂದು ಮಧ್ಯಾಹ್ನ ರಾಮನವಮಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ ಖಂಭಾತ್ನಲ್ಲಿ ಸುಮಾರು 65 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ," ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜೀತ್ ರಾಜ್ಯನ್ ತಿಳಿಸಿದ್ದಾರೆ.

ಅಂಗಡಿಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಮತ್ತು ಕೆಲವು ಅಂಗಡಿ ಕ್ಯಾಬಿನ್ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ನಂತರ ಅಶ್ರುವಾಯು ಶೆಲ್ಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜೀತ್ ರಾಜ್ಯನ್ ಹೇಳಿದರು. ಘರ್ಷಣೆಯ ಸಂದರ್ಭದಲ್ಲಿ ಉಂಟಾದ ಗಾಯಗಳಿಂದ ಮೃತರು ಸಾವನ್ನಪ್ಪಿದ್ದಾರೆಂದು ತೋರುತ್ತದೆ. ಘಟನೆಯ ತನಿಖೆ ನಡೆಯುತ್ತಿದೆ ಎಂದು ರಾಜನ್ ಹೇಳಿದರು.
ಪೊಲೀಸರಿಂದ ಅಶ್ರುವಾಯು ಪ್ರಯೋಗ
ಹಿಮ್ಮತ್ನಗರದಲ್ಲಿ ಇದೇ ರೀತಿಯ ಘರ್ಷಣೆ ವರದಿಯಾಗಿದೆ ಮತ್ತು ಕೆಲವು ವಾಹನಗಳು ಮತ್ತು ಅಂಗಡಿಗಳಿಗೆ ಹಾನಿ ಮಾಡಿದ ಹಿಂಸಾತ್ಮಕ ಗುಂಪನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಬಳಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
"ರಾಮ ನವಮಿ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡದಿದ್ದು ಮತ್ತು ಪರಸ್ಪರ ಕಲ್ಲು ತೂರಾಟ ನಡೆಸಿದೆ. ಆದರೆ ಸ್ವಲ್ಪ ಸಮಯದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು," ಎಂದು ಸಬರಕಾಂತದ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ವಘೇಲಾ ಹೇಳಿದ್ದಾರೆ .ಪ್ರತಿಭಟನಾಕಾರರು ಮೂರ್ನಾಲ್ಕು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಮಧ್ಯಪ್ರದೇಶದಲ್ಲಿ ಕೋಮುಗಲಭೆ: ಕರ್ಫ್ಯೂ ಜಾರಿಗೆ
ಭಾನುವಾರ ರಾಮನವಮಿ ಮೆರವಣಿಗೆ ವೇಳೆ ನಡೆದ ದಾಳಿಯ ನಂತರ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಖಾರ್ಗೋನ್ ಪಟ್ಟಣ ಮತ್ತು ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದ ಹಲವಾರು ಪ್ರದೇಶಗಳಲ್ಲಿ ಕೋಮು ಘರ್ಷಣೆ ಉಂಟಾಗಿದೆ. ಖಾರ್ಗೋನ್ ಜಿಲ್ಲೆಯ ಖಾರ್ಗೋನ್ ಪಟ್ಟಣದಲ್ಲಿ ಐವರು ಪೊಲೀಸರು ಸೇರಿದಂತೆ ಸುಮಾರು ಎಂಟರಿಂದ ಹತ್ತು ಜನರು ಗಾಯಗೊಂಡಿದ್ದಾರೆ. ಪಕ್ಕದ ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐದರಿಂದ ಏಳು ಜನರು ಗಾಯಗೊಂಡಿದ್ದಾರೆ.
ಇಡೀ ಖಾರ್ಗೋನ್ ಪಟ್ಟಣದಲ್ಲಿ ಸೆಕ್ಷನ್ 144 ಸಿಆರ್ಪಿಸಿ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ವಿಧಿಸಿದ್ದರೆ, ತಾಲಾಬ್ ಚೌಕ್, ಮೋತಿಪುರ, ಸಂಜಯ್ ನಗರ, ತಬಾಡಿ ಚೌಕ್ ಮತ್ತು ಗೌಶಾಲಾ ಮಾರ್ಗ ಸೇರಿದಂತೆ ಖಾರ್ಗೋನ್ ಪಟ್ಟಣದ ಕೆಲವು ಕೆಟ್ಟ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಖಾರ್ಗೋನ್ ಪಟ್ಟಣದ ಅಲ್ಪಸಂಖ್ಯಾತ ಸಮುದಾಯದ ತಾಲಾಬ್ ಚೌಕ್ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆಯು ಕೋಮು ಸೂಕ್ಷ್ಮ ಪ್ರದೇಶದಲ್ಲಿ ಹಾದುಹೋಗುವ ಸಂದರ್ಭದಲ್ಲಿ ಮೊದಲ ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಡಿಜೆ ಜೋರಾಗಿ ನುಡಿಸುವುದನ್ನು ವಿರೋಧಿಸಿದವರ ಗುಂಪೊಂದು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿತು.












Click it and Unblock the Notifications