ಸರ್ದಾರ್ ಪಟೇಲ್ಗೆ ಅವಮಾನ; ಸ್ಟೇಡಿಯಂಗೆ ಮೋದಿ ಹೆಸರು ನಾಮಕರಣಕ್ಕೆ ಕಾಂಗ್ರೆಸ್ ವಿರೋಧ
ಅಹಮದಾಬಾದ್, ಫೆಬ್ರವರಿ 24: ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಗುಜರಾತ್ನ ಅಹಮದಾಬಾದ್ನಲ್ಲಿರುವ ಮೊಟೆರಾ ಸ್ಟೇಡಿಯಂ (ಸರ್ದಾರ್ ಪಟೇಲ್ ಸ್ಟೇಡಿಯಂ) ಹೆಸರನ್ನು 'ನರೇಂದ್ರ ಮೋದಿ ಸ್ಟೇಡಿಯಂ' ಎಂದು ಮರು ನಾಮಕರಣ ಮಾಡಿರುವುದು ಇದೀಗ ರಾಜಕೀಯ ಜಗಳಕ್ಕೆ ಕಾರಣವಾಗಿದೆ.
ಮರುನಾಮಕರಣದ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧ ಆರಂಭಗೊಂಡಿದೆ. ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೊಸ ಸ್ವರೂಪ ಪಡೆದುಕೊಂಡಿರುವ ಸ್ಟೇಡಿಯಂ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಯಾಗುತ್ತಿದ್ದಂತೆ ಸ್ಟೇಡಿಯಂಗೆ ಮೋದಿ ಹೆಸರು ಮರುನಾಮಕರಣ ಮಾಡಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗಿವೆ.
ಈ ಬಗ್ಗೆ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾರ್ದಿಕ್ ಪಟೇಲ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, "ಇದು ಸರ್ದಾರ್ ಪಟೇಲ್ ಅವರಿಗೆ ಅವಮಾನವಲ್ಲವೇ?" ಎಂದು ಪ್ರಶ್ನಿಸಿದ್ದಾರೆ. ಸರ್ದಾರ್ ಪಟೇಲ್ ಅವರ ಹೆಸರಿನಲ್ಲಿ ವೋಟು ಗಿಟ್ಟಿಸಿಕೊಂಡಿರುವ ಬಿಜೆಪಿ, ದೇಶದ ಮೊದಲ ಗೃಹ ಸಚಿವರಿಗೆ ಅವಮಾನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಸಿಎಂ ಕಮಲ ನಾಥ್ ಕೂಡ ಪ್ರತಿಕ್ರಿಯಿಸಿದ್ದು, ಮೋದಿ ಹೆಸರನ್ನು ಮರುನಾಮಕರಣ ಮಾಡಿರುವುದು ಅವಮಾನಕರ ಸಂಗತಿ ಎಂದಿದ್ದಾರೆ. ಮಹಾನ್ ಸಾಧಕರನ್ನು ಸ್ಮರಿಸಲು, ಪಾರಂಪರಿಕ ಸ್ಥಳಗಳಿಗೆ ಹೆಸರಿಡುವುದು ವಾಡಿಕೆ. ಆದರೆ ಬದುಕಿರುವಾಗಲೇ ತಮ್ಮ ತಮ್ಮ ಹೆಸರನ್ನು ಹೇಗೆ ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಮರುನಾಮಕರಣವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, "ಸ್ಟೇಡಿಯಂ ಹೆಸರನ್ನು ಮಾತ್ರ ಬದಲಿಸಲಾಗಿದೆ. ಇಡೀ ಕಾಂಪ್ಲೆಕ್ಸ್ ಅನ್ನು ಸರ್ದಾರ್ ಪಟೇಲ್ ಕ್ರಿಕೆಟ್ ಸ್ಟೇಡಿಯಂ ಎಂದೇ ಕರೆಯಲಾಗುತ್ತದೆ" ಎಂದಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣವು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಕ್ರಿಕೆಟ್ ಮೈದಾನ ಎನಿಸಿಕೊಂಡಿದ್ದು, 1,10,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಮೊದಲ ಬಾರಿಗೆ ಭಾರತ-ಇಂಗ್ಲೆಂಡ್ ನಡುವೆ ಹೊನಲು ಬೆಳಕಿನ 'ಪಿಂಕ್ ಬಾಲ್' ಟೆಸ್ಟ್ ಪಂದ್ಯ ನಡೆಯಲಿದೆ. ಮೊಟೆರಾದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಪೋರ್ಟ್ಸ್ ಎನ್ಕ್ಲೇವ್ ಮತ್ತು ನರೇಂದ್ರ ಮೋದಿ ಸ್ಟೇಡಿಯಂ ಜತೆಗೆ ನರಾನ್ಪುರದಲ್ಲಿ ಕ್ರೀಡಾ ಸಂಕೀರ್ಣವೊಂದನ್ನು ಸಹ ನಿರ್ಮಿಸಲಾಗುವುದಾಗಿ ತಿಳಿದುಬಂದಿದೆ. ಮೊಟೆರಾ ಕ್ರೀಡಾಂಗಣವನ್ನು 1982ರಲ್ಲಿ ನಿರ್ಮಿಸಲಾಗಿತ್ತು. ಆಗ ಅದರ ಸಾಮರ್ಥ್ಯ 49,000 ಇತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications