ಜನತಾ ಕರ್ಫ್ಯೂ ದಿನ ರಸ್ತೆಗೆ ಬಂದ 40 ಮಂದಿ ವಿರುದ್ಧ ಎಫ್ಐಆರ್
ಅಹಮದಾಬಾದ್, ಮಾರ್ಚ್ 23: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಫ್ಯೂ ಯಶಸ್ವಿಯಾಗಿ ಮುಗಿದಿದೆ. ಆದರೆ, ಆ ದಿನ ಸಂಜೆ ಮೋದಿ ಅವರ ಸೂಚನೆ ಮತ್ತು ಕಾನೂನು ಉಲ್ಲಂಘಿಸಿದ 40 ಜನರ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಅಹಮದಾಬಾದ್ ಖಾದಿಯಾ ಪ್ರದೇಶದಲ್ಲಿ ನಡೆದಿದೆ.
ಮಾರ್ಚ್ 22 ರಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿತ್ತ. ಅಂದು ಸಂಜೆ 5 ಗಂಟೆಗೆ, ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಮತ್ತು ಅದಕ್ಕೆ ಸಹಕರಿಸುತ್ತಿರುವ ಎಲ್ಲ ಸಿಬ್ಬಂದಿ ವರ್ಗಕ್ಕೂ ಧನ್ಯವಾದ ಹೇಳವ ಸಲುವಾಗಿ 5 ನಿಮಿಷಗಳ ಕಾಲ ನಿಮ್ಮ ಮನೆಯ ಬಾಗಿಲು, ಕಿಟಕಿ ಅಥವಾ ಬಾಲ್ಕನಿ, ಮಹಡಿ ಬಳಿ ಬಂದು ಚಪ್ಪಾಳೆ ಹೊಡೆಯಬೇಕು ಅಥವಾ ಗಂಟೆ ಬಾರಿಸಬೇಕು ಎಂದು ಮೋದಿ ವಿನಂತಿಸಿಕೊಂಡಿದ್ದರು.
ಆದರೆ, ದೇಶದ ಹಲವು ಕಡೆ ಜನತಾ ಕರ್ಫ್ಯೂ ಮುಗಿಯುವ ಮುನ್ನವೆ ಸಂಜೆ 5 ಗಂಟೆಗೆ ಬೀದಿಗಿಳಿದು ಮೆರವಣಿಗೆ ಸಾಗಿ ಕೊರೊನಾ ಹಬ್ಬ ಆಚರಿಸಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಡಲು ಕರೆ ನೀಡಿದ್ದ ಮೋದಿ ಅವರ ಸೂಚನೆ ಉಲ್ಲಂಘನೆ ಮಾಡಲಾಗಿದೆ.

ಖುದ್ದು ಮೋದಿ ಅವರೇ ಯಾರು ರಾತ್ರಿ 9 ಗಂಟೆಯವರೆಗೂ ಮನೆಯಿಂದ ಹೊರಗೆ ಬರಬೇಡಿ ಎಂದು ತಿಳಿಸಿದ್ದರು. ಆದರೂ, ಅನೇಕ ಮಂದಿ ಸಂಜೆ 5 ಗಂಟೆಗೆ ಸಮೂಹದಲ್ಲಿ ಬಂದು ರಸ್ತೆಗಳಲ್ಲಿ ಮೆರವಣಿಗೆ ಸಾಗಿದ್ದಾರೆ. ಹೀಗೆ, ರಸ್ತೆಗಿಳಿದು ಜನತಾ ಕರ್ಫ್ಯೂ ಉಲ್ಲಂಘನೆ ಮಾಡಿದ 40 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.
FIR has been filed against 40 people from Khadia area who had gathered outside their house on 22 March as Section 144 of CrPC is imposed in Ahmedabad: Ashish Bhatia, Commissioner of Police, Ahmedabad
— ANI (@ANI) March 23, 2020
ಅಂದ್ಹಾಗೆ, ಜನತಾ ಕರ್ಫ್ಯೂ ನಡೆದ ಆ ದಿನ ಅಹಮದಾಬಾದ್ನಲ್ಲಿ ಸೆಕ್ಷನ್ 144 ಜಾರಿಯಲ್ಲಿತ್ತು. ಹಾಗಾಗಿ, ಸೆಕ್ಷನ್ 144 ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ಈ ಕೇಸ್ ದಾಖಲು ಮಾಡಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಆಯುಕ್ತ ಆಶಿಶ್ ಭಾಟಿಯಾ ತಿಳಿಸಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications