ಸ್ವಾಮಿ ನಿತ್ಯಾನಂದ ವಿರುದ್ಧ ಅಪಹರಣ, ಅಕ್ರಮ ಬಂಧನದ ದೂರು
ಅಹ್ಮದಾಬಾದ್, ನವೆಂಬರ್ 19: ಬಿಡದಿ ಆಶ್ರಮದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ತಮ್ಮ ನಾಲ್ವರು ಪುತ್ರಿಯರನ್ನು ನಿತ್ಯಾನಂದ ಅಕ್ರಮ ಬಂಧನದಲ್ಲಿರಿಸಿದಿದ್ದಾರೆ ಎಂದು ದಂಪತಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಿರುವ ಗುಜರಾತ್ ದಂಪತಿ, ತಮ್ಮ ನಾಲ್ವರು ಹೆಣ್ಣು ಮಕ್ಕಳನ್ನು ನಿತ್ಯಾನಂದ ಆಶ್ರಮದಲ್ಲಿ ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ದೂರಿ, ನ್ಯಾಯಾಲಯದ ಸಹಾಯ ಕೇಳಿದ್ದಾರೆ.
ಗುಜರಾತ್ನ ಜನಾರ್ದನ ಶರ್ಮಾ ದಂಪತಿ 2013 ರಲ್ಲಿ ಬಿಡದಿ ಆಶ್ರಮಕ್ಕೆ ತಮ್ಮ ನಾಲ್ವರು ಹೆಣ್ಣು ಮಕ್ಕಳನ್ನು ಶಿಕ್ಷಣಕ್ಕೆ ಕಳುಹಿಸಿಕೊಟ್ಟಿದ್ದರು. ಇತ್ತೀಚೆಗಷ್ಟೆ ಅವರನ್ನು ಅಹ್ಮದಾಬಾದ್ನ ನಿತ್ಯಾನಂದ ಅವರ ಮತ್ತೊಂದು ಆಶ್ರಮಕ್ಕೆ ಅವರನ್ನು ಸ್ಥಳಾಂತರಿಸಲಾಗಿದೆ ಎಂಬ ವಿಷಯ ಪೋಷಕರಿಗೆ ತಿಳಿದು ಅವರನ್ನು ಭೇಟಿ ಆಗಲು ಯತ್ನಿಸಿದಾಗ ಆಶ್ರಮದ ಸಿಬ್ಬಂದಿ ಭೇಟಿ ನಿರಾಕರಿಸಲಾಗಿದೆ.

ಇದರಿಂದಾಗಿ ದಂಪತಿ ಗುಜರಾತ್ ಹೈಕೋರ್ಟ್ ಮೊರೆಹೋಗಿದ್ದು, ತಮ್ಮ ಮಕ್ಕಳನ್ನು ವಾಪಸ್ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಪೊಲೀಸರ ಸಹಾಯದೊಂದಿಗೆ ಆಶ್ರಮಕ್ಕೆ ಹೋದ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನಷ್ಟೆ ವಾಪಸ್ ಕರೆತಂದಿದ್ದಾರೆ. ಆದರೆ ಹಿರಿಯ ಪುತ್ರಿಯರಾದ ಲೋಪಮುದ್ರ ಜನಾರ್ದನ ಶರ್ಮಾ (21) ಮತ್ತು ನಂದಿತಾ (18) ಆಶ್ರಮ ಬಿಟ್ಟು ಬರಲು ನಿರಾಕರಿಸಿದ್ದಾರೆ.
ದಂಪತಿ ಸಲ್ಲಿಸಿರುವ ದೂರಿನಲ್ಲಿ ತಮ್ಮ ಮಕ್ಕಳನ್ನು ಅಕ್ರಮ ಬಂಧನದಲ್ಲಿ ಎರಡು ವಾರಗಳ ಇರಿಸಲಾಗಿತ್ತು ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಮಕ್ಕಳಿಗೆ ನಿದ್ದೆ ಸಹ ಮಾಡಲು ಬಿಟ್ಟಿರಲಿಲ್ಲ ಎಂದು ಹೇಳಿದ್ದಾರೆ. ತಮ್ಮ ಮಕ್ಕಳನ್ನು ಮಾತ್ರವಲ್ಲದೆ ಆಶ್ರಮದಲ್ಲಿರುವ ಇತರ ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ರಕ್ಷಿಸಬೇಕು ಎಂದು ದಂಪತಿ ಮನವಿ ಮಾಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications