ಸರ್ದಾರ್ ಪಟೇಲ್ ಏಕತಾ ಪ್ರತಿಮೆ ಬಳಿ ಉರುಳಿ ಬಿದ್ದ ಬೃಹತ್ ಡೈನೋಸರ್!
ಅಹಮದಾಬಾದ್, ಸೆಪ್ಟೆಂಬರ್ 10: ಪ್ರವಾಸಿಗರನ್ನು ಸೆಳೆಯಲು ಗುಜರಾತ್ನ ನರ್ಮದಾದಲ್ಲಿ ಏಕತಾ ಪ್ರತಿಮೆ ಸಮೀಪದಲ್ಲಿ ನಿರ್ಮಿಸಲಾಗಿದ್ದ ಬೃಹತ್ ಡೈನೋಸರ್ ಮಾದರಿಯ ಪ್ರತಿಮೆ ನೆಲಕ್ಕುರುಳಿದೆ.
ಡೈನೋಸರ್ಅನ್ನು ಹೋಲುವ ಬೃಹತ್ ಪ್ರತಿಮೆಯನ್ನು ಸರ್ದಾರ್ ಪಟೇಲ್ ಪ್ರತಿಮೆಯ ಸಮೀಪದಲ್ಲಿ ನಿರ್ಮಿಸಲಾಗಿತ್ತು. 30 ಅಡಿ ಎತ್ತರದ ಈ ಪ್ರತಿಮೆಯ ನಿರ್ಮಾಣಕ್ಕೆ 2 ಕೋಟಿ ರೂ. ಯೋಜನೆಯನ್ನು ರೂಪಿಸಲಾಗಿದೆ. ಏಕತಾ ಪ್ರತಿಮೆ ಈಗ ಗುಜರಾತ್ನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿ ಮಾರ್ಪಟ್ಟಿದೆ. ಹೀಗಾಗಿ ಪ್ರವಾಸೋದ್ಯಮವನ್ನು ಇನ್ನಷ್ಟು ಬೆಳೆಸಲು ಗುಜರಾತ್ ಸರ್ಕಾರ ಸಮೀಪದಲ್ಲಿಯೇ ಬೃಹತ್ ಗಾತ್ರದ ಡೈನೋಸರ್ಅನ್ನು ನಿರ್ಮಿಸಲಾಗಿತ್ತು.
ಸುಮಾರು ಒಂದು ತಿಂಗಳಿನಿಂದ ನಿರ್ಮಿಸಲಾಗುತ್ತಿದ್ದ ಡೈನೋಸರ್ ಬಹುತೇಕ ಕಡೆಯ ಹಂತಕ್ಕೆ ತಲುಪಿತ್ತು. ಆದರೆ, ಕಳಪೆ ಕಾಮಗಾರಿಯಿಂದಾಗಿ ಭಾನುವಾರ ಉರುಳಿಬಿದ್ದಿದೆ. ಅದೃಷ್ಟವಷಾತ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಯಾವುದೇ ಅಪಾಯವಾಗದೆ ಪಾರಾಗಿದ್ದಾರೆ.

ಈ ಘಟನೆಯು ಯೋಜನೆಯ ಅಗತ್ಯತೆ ಮತ್ತು ಯೋಜನೆಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರರ ಕುರಿತು ಪ್ರಶ್ನೆಗಳನ್ನು ಮೂಡಿಸಿದೆ. ಗುಜರಾತ್ನಲ್ಲಿ ಪ್ರವಾಸಿಗರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ರಿವರ್ ರಾಫ್ಟಿಂಗ್, ಸಫಾರಿ ಪಾರ್ಕ್ ಸೇರಿದಂತೆ ಬೃಹತ್ ಸಂಖ್ಯೆಯ ಜನರನ್ನು ಸೆಳೆಯುವ ಸಲುವಾಗಿ ಅನೇಕ ಆಕರ್ಷಣೀಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ 597 ಅಡಿ ಎತ್ತರದ ಏಕತಾ ಪ್ರತಿಮೆ ವೀಕ್ಷಿಸಲು ಅಪಾರ ಸಂಖ್ಯೆಯ ಜನರು ಬರುತ್ತಿದ್ದಾರೆ. ಹೀಗಾಗಿ ಪ್ರವಾಸಿಗರನ್ನು ಮತ್ತಷ್ಟು ಸ್ಥಳಗಳತ್ತ ಸೆಳೆಯಲು ಡೈನೋಸರ್ ಪ್ರತಿಮೆ ನಿರ್ಮಾಣದಂತಹ ಯೋಜನೆಗಳನ್ನು ರೂಪಿಸಲಾಗಿದೆ.
ಆದರೆ ಇನ್ನೂ ನಿರ್ಮಾಣ ಹಂತದಲ್ಲಿಯೇ ಡೈನೋಸರ್ ಪ್ರತಿಮೆ ನೆಲಕಚ್ಚಿರುವುದು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನಕ್ಕೆ ಕಾರಣವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications