ಕೋವಿಡ್ ಸೋಂಕಿನಿಂದ ವೈದ್ಯರ ಸಾವು; ಗುಜರಾತ್ಗೆ 3ನೇ ಸ್ಥಾನ
ಅಹಮದಾಬಾದ್, ಸೆಪ್ಟೆಂಬರ್ 20: ಭಾರತದಲ್ಲಿ ಕೋವಿಡ್ನಿಂದ ವೈದ್ಯರು ಮೃತಪಟ್ಟ ಅಂಕಿ ಅಂಶಗಳನ್ನು ಐಎಂಎ ಬಿಡುಗಡೆ ಮಾಡಿದೆ. ಗುಜರಾತ್ನಲ್ಲಿ 38 ವೈದ್ಯರು ಮೃತಪಟ್ಟಿದ್ದು, ದೇಶದಲ್ಲಿಯೇ ರಾಜ್ಯ 3ನೇ ಸ್ಥಾನದಲ್ಲಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ಮೊದಲ ಎರಡು ಸ್ಥಾನದಲ್ಲಿವೆ. ಕೋವಿಡ್ ಸಾವಿನ ಪ್ರಕರಣಗಳಲ್ಲಿ ಗುಜರಾತ್ 8ನೇ ಸ್ಥಾನದಲ್ಲಿದೆ. ಇದುವರೆಗೂ ರಾಜ್ಯದಲ್ಲಿ 3286 ಜನರು ಮೃತಪಟ್ಟಿದ್ದಾರೆ.
ಐಎಂಎ ದೇಶದಲ್ಲಿ ಕೋವಿಡ್ನಿಂದ ಮೃತಪಟ್ಟ ವೈದ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದುವರೆಗೂ 382 ವೈದ್ಯರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದಲ್ಲಿ ಇದುವರೆಗೂ 38 ವೈದ್ಯರು ಮೃತಪಟ್ಟಿದ್ದಾರೆ.
ಗುಜರಾತ್ನಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,21,930. ಸಕ್ರಿಯ ಪ್ರಕರಣಗಳು 15,956. ರಾಜಧಾನಿ ಅಹಮದಾಬಾದ್ನಲ್ಲಿಯೇ 34,759 ಸೋಂಕಿತರಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು?
ಗುಜರಾತ್ನ ವಾಲ್ಸದ್ ಜಿಲ್ಲೆಯಲ್ಲಿ 34 ವರ್ಷದ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ. ರಾಜಧಾನಿ ಅಹಮದಾಬಾದ್ನಲ್ಲಿಯೇ 15 ವೈದ್ಯರು ಮೃತಪಟ್ಟಿದ್ದಾರೆ. ಸೂರತ್ನಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 34 ರಿಂದ 82 ವರ್ಷ ವಯಸ್ಸಿನವರು ಹೆಚ್ಚು.

ಖಾಸಗಿ ವೈದ್ಯರು ಇದ್ದಾರೆ
ಮೃತಪಟ್ಟವರಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಯಾಗಿದ್ದ 49 ವರ್ಷದ ವೈದ್ಯರು ಜೂನ್ 22ರಂದು ಮೃತಪಟ್ಟರು. ಅವರ ತಾಯಿ ಕೋವಿಡ್ ಸೋಂಕಿನಿಂದಾಗಿ ಒಂದು ವಾರದ ಹಿಂದೆ ಮೃತಪಟ್ಟಿದ್ದರು. 20 ವರ್ಷದಿಂದ ಅಮರೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಡಾ. ಪಂಕಜ್ ಜಾಧವ್ ಸಹ ಸೋಂಕಿಗೆ ಬಲಿಯಾಗಿದ್ದಾರೆ.

ಮಕ್ಕಳ ವೈದ್ಯರ ಸಾವು
ಮೊದಲು ಸಾಮಾನ್ಯ ವೈದ್ಯರಿಗೆ ಜನರಿಂದ ಕೋವಿಡ್ ಸೋಂಕು ತಗುಲಿತ್ತು. ಬಳಿಕ ರೋಗ ಲಕ್ಷಣಗಳು ಇಲ್ಲದ ಮಕ್ಕಳಿಂದ ಶಿಶು ವೈದ್ಯರಿಗೂ ಸಹ ಸೋಂಕು ತಗುಲಿತು. ರಾಜ್ಯದಲ್ಲಿ ಶಿಶು ವೈದ್ಯರು ಸಹ ಕೋವಿಡ್ ಸೋಂಕಿನಿಂದಾಗ ಪ್ರಾಣ ಬಿಟ್ಟಿದ್ದಾರೆ.

ವೈದ್ಯರ ಕೆಲಸದ ಅವಧಿ
ವೈದ್ಯರ ಕೆಲಸದ ಅವಧಿ ಸಹ ಅವರಿಗೆ ಕೋವಿಡ್ ಸೋಂಕು ಹರಡಲು ಪ್ರಮುಖ ಕಾರಣ. ಮೊದಲು 4 ಗಂಟೆ ಕೋವಿಡ್ ಸೋಂಕಿತರು ಹೆಚ್ಚಿರುವ ಪ್ರದೇಶ, ಉಳಿದ 4 ಗಂಟೆ ಕಡಿಮೆ ಸೋಂಕಿತರು ಇರುವ ಪ್ರದೇಶದಲ್ಲಿ ವೈದ್ಯರು ಕಾರ್ಯ ನಿರ್ವಹಣೆ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications