ಅಪಹರಣ: ಸ್ವಾಮಿ ನಿತ್ಯಾನಂದ ವಿರುದ್ಧ ಎಫ್ಐಆರ್, ಶಿಷ್ಯೆಯರ ಬಂಧನ
ಅಹ್ಮದಾಬಾದ್, ನವೆಂಬರ್ 21: ಸ್ವಾಮಿ ನಿತ್ಯಾನಂದ ವಿರುದ್ಧ ಅಪಹರಣ ಮತ್ತು ಅಕ್ರಮ ಬಂಧನದ ದೂರಿನ ಅನ್ವಯ ಗುಜರಾತ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅಪಹರಣದ ಜೊತೆಗೆ ಆಶ್ರಮವನ್ನು ನಡೆಸಲು ಚಂದಾ ವಸೂಲಿಗೆ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆಯೂ ದೂರು ದಾಖಲಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾದ್ವಿ ಪ್ರಾಣಪ್ರಿಯಾನಂದ ಮತ್ತು ಪ್ರಿಯತತ್ವ ರಿಧಿ ಕಿರಣ್ ಎಂಬ ಇಬ್ಬರು ನಿತ್ಯಾನಂದ ಶಿಷ್ಯೆಯರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗಷ್ಟು ನಾಲ್ಕು ಜನ ಹೆಣ್ಣು ಮಕ್ಕಳನ್ನು ನಿತ್ಯಾನಂದಗೆ ಸೇರಿದ್ದ ಫ್ಲಾಟ್ ಒಂದರಿಂದ ರಕ್ಷಿಸಲಾಗಿತ್ತು. ಅವರ ಹೇಳಿಕೆಯನ್ನೂ ಪಡೆದಿರುವ ಅಹ್ಮದಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬಂಧಿಸಲಾಗಿರುವ ಸಾದ್ವಿ ಪ್ರಾಣಪ್ರಿಯಾನಂದ ಮತ್ತು ಪ್ರಿಯತತ್ವ ರಿಧಿ ಕಿರಣ್ ಅವರುಗಳು ಅಹ್ಮದಾಬಾದ್ನಲ್ಲಿ 'ಯೋಗಿಣಿ ಸರ್ವಜ್ಞಪೀಠಂ' ಹೆಸರಿನಲ್ಲಿ ಆಶ್ರಮ ನಡೆಸುತ್ತಿದ್ದಾರೆ. ಇದು ನಿತ್ಯಾನಂದ ಅವರಿಗೆ ಸೇರಿದ್ದಾಗಿದೆ.
ಇತ್ತೀಚೆಗಷ್ಟೆ ಗುಜರಾತ್ ಜನಾರ್ದನ ಶರ್ಮಾ ದಂಪತಿ ತಮ್ಮ ನಾಲ್ವರು ಹೆಣ್ಣು ಮಕ್ಕಳನ್ನು ನಿತ್ಯಾನಂದ ಅಕ್ರಮ ಬಂಧನಲದಲ್ಲಿಟ್ಟಿರುವ ಬಗ್ಗೆ ಗುಜರಾತ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಇದೇ ದೂರಿನಲ್ಲಿ ಆಶ್ರಮದ ಇತರ ಅಪ್ರಾಪ್ತ ಬಾಲಕರಿಯರ ರಕ್ಷಣೆ ಕುರಿತು ಮನವಿ ಸಲ್ಲಿಸಲಾಗಿತ್ತು.
ನಂತರ ಪೊಲೀಸರ ಸಹಾಯದೊಂದಿಗೆ ಜನಾರ್ದನ ಶರ್ಮಾ ದಂಪತಿಯ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿತ್ತು. ಆದರೆ ಇದೇ ದಂಪತಿಯ ಇಬ್ಬರು ಹಿರಿಯ ಪುತ್ರಿಯರು ಪೋಷಕರೊಂದಿಗೆ ತೆರಳಲು ನಿರಾಕರಿಸಿ ಆಶ್ರಮದಲ್ಲಿಯೇ ಇರುವುದಾಗಿ ಹೇಳಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications