Breaking News: ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಹಾರ್ದಿಕ್ ಪಟೇಲ್
ಅಹಮದಾಬಾದ್, ಜೂನ್ 2: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯದಲ್ಲಿ ಭಾರಿ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬಳಿಕ ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
28 ವರ್ಷ ವಯಸ್ಸಿನ ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರಿಗೆ ಕೇಸರಿ ಉತ್ತರೀಯ ತೊಡಿಸಿ, ಹಸ್ತಲಾಘವ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
''ಗುಜರಾತ್ನ ವಿಪಕ್ಷವಾಗಿ ನಾವು ಜನರ ಧ್ವನಿ ಎತ್ತಲು ವಿಫಲರಾಗಿದ್ದೇವೆ. ಜನರ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಅದಕ್ಕಾಗಿ ಹೋರಾಡುವುದು ವಿಪಕ್ಷದ ಕರ್ತವ್ಯ. ನಾವು ಅದರಲ್ಲಿ ಯಶಸ್ವಿಯಾಗಿಲ್ಲದಿರುವುದರಿಂದ ಜನರು ಬೇರೆ ಆಯ್ಕೆಗಳತ್ತ ಆಲೋಚಿಸುತ್ತಿದ್ದಾರೆ" ಎಂದು ಹಾರ್ದಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.
राष्ट्रहित, प्रदेशहित, जनहित एवं समाज हित की भावनाओं के साथ आज से नए अध्याय का प्रारंभ करने जा रहा हूँ। भारत के यशस्वी प्रधानमंत्री श्री नरेन्द्र भाई मोदी जी के नेतृत्व में चल रहे राष्ट्र सेवा के भगीरथ कार्य में छोटा सा सिपाही बनकर काम करूँगा।
— Hardik Patel (@HardikPatel_) June 2, 2022
2015 ರ ಪಾಟೀದಾರ್ ಚಳವಳಿಯ ಸಮಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿರುವ ಪಾಟೀದಾರ್ ಸಮುದಾಯದ ನಾಯಕ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ಗೆ ಸುಪ್ರೀಂಕೋರ್ಟ್ ನಿಂದ ಇತ್ತೀಚೆಗೆ ಶುಭ ಸುದ್ದಿ ಸಿಕ್ಕಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿತ್ತು.182 ಸದಸ್ಯರ ಮನೆಯಲ್ಲಿ ಬಿಜೆಪಿಯನ್ನು 99 ಕ್ಕೆ ಸೀಮಿತಗೊಂಡಿತ್ತು. ಕಾಂಗ್ರೆಸ್ ಪಕ್ಷಕ್ಕೆ ಪರೋಕ್ಷವಾಗಿ ಹಾರ್ದಿಕ್ ನೆರವಾಗಿದ್ದರು. ಆದರೆ, ನಂತರ ಕಾಂಗ್ರೆಸ್ ತನ್ನ ಹಿಡಿತವನ್ನು ಕಳೆದುಕೊಂಡಿತ್ತು. ಪಕ್ಷಾಂತರ ಮತ್ತು ಉಪಚುನಾವಣೆಗಳಲ್ಲಿನ ಸೋಲಿನಿಂದಾಗಿ ಕಾಂಗ್ರೆಸ್ 14 ಶಾಸಕರನ್ನು ಬಿಜೆಪಿಗೆ ಸೆಳೆದುಕೊಂಡಿದೆ. ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ 63 ಶಾಸಕರನ್ನು ಹೊಂದಿದೆ.
ಹಾರ್ದಿಕ್ ಪಟೇಲ್ 2017 ರ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೇ ಸ್ಪರ್ಧಿಸಬೇಕಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲು ಬೇಕಿದ್ದ ಕನಿಷ್ಠ ವಯೋಮಿತಿ(25 ವರ್ಷ)ಯನ್ನು ಅವರು ಮೀರಿರದ ಕಾರಣ ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ.
Recommended Video

2017ರಲ್ಲಿ ಮೇವಾನಿ ಸೇರಿದಂತೆ 78 ಸ್ಥಾನಗಳಲ್ಲಿ ಕಾಂಗ್ರೆಸ್ನ ಅತ್ಯುತ್ತಮ ಸಾಧನೆಗೆ ಕಾರಣಕರ್ತರಾಗಿದ್ದಾಗ ಹಾರ್ದಿಕ್ ಸುಮಾರು ಒಂದು ವರ್ಷದವರೆಗೆ ಕಾಂಗ್ರೆಸ್ ಅನ್ನು ಉತ್ತುಂಗ ಸ್ಥಾನದಲ್ಲಿ ಇರಿಸಿದರು. ಬಳಿಕ ತನಗೆ ಅರ್ಹತೆ ನೀಡಲಾಗಿಲ್ಲ ಎಂದು ನಿರಂತರವಾಗಿ ಕೆಣಕಿದರು. ಕುತೂಹಲಕಾರಿವೆಂಬಂತೆ 2019ರಲ್ಲಿ ಕಾಂಗ್ರೆಸ್ ತೊರೆಯುವ ಅವರ ನಿರ್ಧಾರದ ಮೊದಲು ಅವರ ಎಲ್ಲಾ ದೂರುಗಳು ಮತ್ತು ಅವುಗಳನ್ನು ತಿಳಿಸಲು ಅವರು ಬಳಸಿದ ಮಾತುಗಳು ಅಲ್ಪೇಶ್ ಠಾಕೋರ್ ಅವರೊಂದಿಗೆ ಗಮನಾರ್ಹ ಹೋಲಿಕೆ ಕಂಡುಬಂದವು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications