ಗಾಂಧಿ ನಾಡು ಗುಜರಾತ್ನಲ್ಲೇ ಮಹಾತ್ಮಾ ಗಾಂಧಿ ಶಿರಚ್ಛೇಧನ!
ಅಹ್ಮದಾಬಾದ್, ಜನವರಿ 04: ಮಹಾತ್ಮಾ ಗಾಂಧಿ ಅವರು ಹುಟ್ಟಿದ ಗುಜರಾತ್ನಲ್ಲಿಯೇ ಅವರ ಪ್ರತಿಮೆಯನ್ನು ಧ್ವಂಸ ಮಾಡಿ ವಿಕೃತಿ ಮೆರೆಯಲಾಗಿದೆ.
ಗುಜರಾತ್ನ ಆಮ್ರೇಲಿ ಜಿಲ್ಲೆಯ ಹರಿಕೃಷ್ಣ ಕೆರೆ-ಉದ್ಯಾನದ ಬಳಿ ನಿರ್ಮಿತವಾಗಿದ್ದ ಸುಂದರ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳು, ಗಾಂಧಿ ಅವರ ಪುತ್ಥಳಿಯ ಕತ್ತು ಮುರಿದು ಎಸೆದಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
ವಜ್ರದ ವ್ಯಾಪಾರಿ ಸಾವಜೀಭಾಯ್ ಡೋಲಾಕಿಯಾ ಅವರು ತಮ್ಮ ಡೋಲಾಕಿಯಾ ಎನ್ಜಿಓ ವತಿಯಿಂದ ಈ ಪ್ರತಿಮೆಯನ್ನು ನಿರ್ಮಿಸಿದ್ದರು. ಇದನ್ನು ಪ್ರಧಾನಿ ಮೋದಿ ಅವರೇ ಕಳೆದ ವರ್ಷ ಉದ್ಘಾಟಿಸಿದ್ದರು. ಈಗ ಅದನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

ಕಿಡಿಗೇಡಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳುತ್ತೇವೆ, ಇಲ್ಲಿ ಕೆರೆ ಕಟ್ಟಿರುವುದನ್ನು ವಿರೋಧಿಸಿ ಈ ಕೃತ್ಯ ಎಸಗಿರುವ ಸಂಭವ ಇದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಲಾತಿ ಪೊಲೀಸ್ ಠಾಣೆ ಎಸ್ಐ ಹೇಳಿದ್ದಾರೆ.
ಗಾಂಧಿ ಮತ್ತು ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಯತ್ನ ಹಿಂದಿನಿಂದಲೂ ನಡೆಯುತ್ತಲೇ ಬಂದಿದೆ.

-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications