ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್, 15 ಮಂದಿ ಬಲಿ
ಸೂರತ್, ಜನವರಿ 19: ಪುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದು 15 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸೂರತ್ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಕೊಸಾಂಬಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
ಕಿಮ್ ಮಾಂಡ್ವಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ಮಲಗಿ ನಿದ್ರಿಸುತ್ತಿದ್ದ ವಲಸೆ ಕಾರ್ಮಿಕರ ಮೇಲೆ ವೇಗವಾಗಿ ಬಂದ ಟ್ರಕ್ ಸಂಚರಿಸಿದೆ. ಘಟನೆಯಲ್ಲಿ 13 ಮಂದಿ ಮೃತ ಪಟ್ಟಿದ್ದು, 5 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡವರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿರುವ ಸುದ್ದಿ ಬಂದಿದೆ.
ಮೃತರ ಕುಟುಂಬಕ್ಕೆ 2 ಲಕ್ಷ ರು ಪರಿಹಾರ ಮೊತ್ತವನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಕಟಿಸಿದ್ದು, ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Gujarat: 13 people died after they were run over by a truck in Kosamba, Surat.
— ANI (@ANI) January 19, 2021
Police says, "All the deceased are labourers and they hail from Rajasthan." pic.twitter.com/E9uwZnrgeO
ಮೃತರೆಲ್ಲರೂ ರಾಜಸ್ಥಾನ ರಾಜ್ಯದ ಬಾನ್ಸ್ ವಾಡಾ ಜಿಲ್ಲೆಯವರು ಎಂದು ತಿಳಿದು ಬಂದಿದೆ. ಕೆಲಸ ಅರಸಿಕೊಂಡು ಸೂರತ್ ಕಡೆಗೆ ಬಂದಿದ್ದ ವಲಸೆ ಕಾರ್ಮಿಕರು, ಸೂರತ್ನ ಕೊಸಾಂಬಾ ಬಳಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬರುತ್ತಿದ್ದ ಟ್ರಕ್ ಎದುರಿಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ ಇದರಿಂದ ಟ್ರಕ್ ಮೇಲೆ ನಿಯಂತ್ರಣ ಕಳೆದುಕೊಂಡ ಚಾಲಕ ಫುಟ್ ಪಾತ್ ಮೇಲೆ ಟ್ರಕ್ ಹರಿಸಿದ್ದಾನೆ. ಐದು ಮಂದಿ ಈ ಅಪಘಾತದಿಂದ ಬಚಾವಾದರೂ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಸಮೀಪದ ಸ್ಮಿಮೇರ್ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಕೊಡಿಸಲಾಗುತ್ತಿದೆ.13 ಮಂದಿ ಮೃತರ ಗುರುತು ಪತ್ತೆ ಕಾರ್ಯ ಪೂರ್ಣಗೊಂಡ ಬಳಿಕ ಅವರ ಕುಟುಂಬಸ್ಥರಿಗೆ ಶವ ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications