ಶ್ರೀರಾಮ ದೇಗುಲಕ್ಕೆ ತೆರಳಿದ್ದ ದಲಿತ ಕುಟುಂಬದ ಮೇಲೆ ಹಲ್ಲೆ
ಅಹ್ಮದಾಬಾದ್, ಅಕ್ಟೋಬರ್ 30: ಗುಜರಾತ್ನಲ್ಲಿರುವ ಶ್ರೀರಾಮ ದೇವಸ್ಥಾನಕ್ಕೆ ತೆರಳಿದ್ದ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿರುವ ಕುರಿತು 20 ಮಂದಿ ವಿರುದ್ಧ ದೂರು ದಾಖಲಾಗಿದೆ.
ಗುಜರಾತ್ನ ಕಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ, ಗಾಂಧಿಧಾಮ ಎಂಬ ಪಟ್ಟಣದ ಬಳಿ ಇರುವ ಹಳ್ಳಿಯ ದೇಗುಲಕ್ಕೆ ದಲಿತ ಕುಟುಂಬದ ಆರು ಮಂದಿ ಭೇಟಿ ನೀಡಿದ್ದರು.
ಆದರೆ ಅವರು ದಲಿತರು ಎಂಬ ಕಾರಣಕ್ಕೆ ಸುಮಾರು 20 ಮಂದಿ ಅವರ ಮೇಲೆ ದಾಳಿ ನಡೆಸಿದ್ದಾರೆ. 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಕಿಶೋರಸಿಂಹ ಝಲಾ ಹೇಳಿದ್ದಾರೆ.

ಅಲ್ಲಿಗೆ ಜಾನುವಾರುಗಳನ್ನು ಬಿಟ್ಟಿದ್ದಾರೆ ಎಂದೂ ಕೂಡ ಸಂತ್ರಸ್ತ ಕುಟುಂಬ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗೋವಿಂದ್ ವಾಘೇಲಾ ತಾಯಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಆ 20 ಮಂದಿಯನ್ನು ಹಿಡಿಯಲು ನಾವು ಎಂಟು ತಂಡಗಳನ್ನು ರಚಿಸಿದ್ದೇವೆ ಎಂದು ಝಲಾ ಮಾಹಿತಿ ನೀಡಿದ್ದಾರೆ. ಗೋವಿಂದ್ ವಾಘೇಲಾ ಮತ್ತು ಅವರ ಕುಟುಂಬದವರು ನೆರ್ ಎಂಬ ಗ್ರಾಮದ ಶ್ರೀರಾಮನ ದೇವ್ಥಾನಕ್ಕೆ ಭೇಟಿ ನೀಡಿ, ಅಲ್ಲಿ ಪ್ರಾಣ ಪ್ರತಿಷ್ಠಾ ಆಚರಣೆ ನಡೆಸಿದ್ದರು.
ಅಕ್ಟೋಬರ್ 20ರಂದು ಇವರೆಲ್ಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅದಾದ ನಂತರ ಅಕ್ಟೋಬರ್ 26ರಂದು ವಾಘೇಲಾ ಅವರ ಅಂಗಡಿಯಲ್ಲಿ ಇದ್ದಾಗ, ಸುಮಾರು 20 ಜನರು ಅವರ ಹೊಲಕ್ಕೆ ಹೋಗಿ ಬೆಳೆ ನಾಶ ಮಾಡಿದ್ದಾರೆ.
ಹಲ್ಲೆಗೊಳಗಾದ ಗೋವಿಂದ್ ವಾಘೇಲಾ ಮತ್ತು ಅವರ ತಂದೆ ಜಗಭಾಯ್ ಎಂಬುವರಿಂದ ಪ್ರತ್ಯೇಕ ದೂರು ದಾಖಲಾಗಿದೆ. ಇವರಿಬ್ಬರೂ ಒಂದೇ ತರಹದಲ್ಲಿ ದೂರು ನೀಡಿದ್ದಾರೆ. ಸುಮಾರು 20 ಜನರು ಬಂದು ನಮ್ಮ ಮೇಲೆ ದಾಳಿ ನಡೆಸಿದರು ಎಂದು ಹೇಳಿದ್ದಾರೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications