ಉಪ ಚುನಾವಣೆ ಗೆಲುವು ಮುಂದಿನ ಚುನಾವಣೆಗಳ ಟ್ರೇಲರ್ ಅಷ್ಟೇ: ಗುಜರಾತ್ ಸಿಎಂ
ಅಹಮದಾಬಾದ್, ನವೆಂಬರ್ 10: ಗುಜರಾತ್ ಉಪ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸುವತ್ತ ಆಡಳಿತಾರೂಢ ಬಿಜೆಪಿ ಮುನ್ನಡೆದಿದೆ. ನವೆಂಬರ್ 3ರಂದು ನಡೆದ ಎಂಟು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ. ಇದು ಮುಂಬರುವ ಚುನಾವಣೆಗಳ ಟ್ರೇಲರ್ ಅಷ್ಟೇ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಹೇಳಿದ್ದಾರೆ.
'ಕಾಂಗ್ರೆಸ್ ಒಂದು ಮುಳುಗುವ ಹಡಗು. ಅವರು ಜನರಿಂದ ಸಂಪರ್ಕ ಕಡಿದುಕೊಂಡಿದ್ದಾರೆ. ಅವರ ವಿರುದ್ಧ ಎಲ್ಲೆಡೆ ಫಲಿತಾಂಶ ಬರುತ್ತಿದೆ. ಅದು ನಾಯಕತ್ವವೇ ಇಲ್ಲದ ಪಕ್ಷ. ಗುಜರಾತ್ ಉಪ ಚುನಾವಣೆಯ ಫಲಿತಾಂಶವು ಮುಂಬರುವ ಸ್ಥಳೀಯ ಚುನಾವಣೆಗಳ ಟ್ರೇಲರ್ ಮಾತ್ರ' ಎಂದು ವಿಜಯ್ ರೂಪಾಣಿ ಹೇಳಿದ್ದಾರೆ.
ಗುಜರಾತ್, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಚುನಾವಣೆ ನಡೆದ ಎಲ್ಲ ರಾಜ್ಯಗಳಲ್ಲಿಯೂ ಕಾಂಗ್ರೆಸ್ ನಡೆಸಿದ ನಕಾರಾತ್ಮಕ ಪ್ರಚಾರ ಹಾಗೂ ಚಟುವಟಿಕೆಗಳನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಜರಾತ್ನ ಅಬ್ದಾಸಾ, ದಾಂಗ್ಸ್, ಧಾರಿ, ಗಢಾದ, ಕಪ್ರಡ, ಕರ್ಜಾನ್, ಮೊರ್ಬಿ ಮತ್ತು ಲಿಂಬ್ಡಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ನ ಹಾಲಿ ಶಾಸಕರು ಜೂನ್ನಲ್ಲಿ ರಾಜ್ಯಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಗಳು ತೆರವಾಗಿದ್ದವು. ಹೀಗಾಗಿ ಉಪ ಚುನಾವಣೆ ನಡೆಸಲಾಗಿತ್ತು. ಅವರ ರಾಜೀನಾಮೆಯಿಂದ ರಾಜ್ಯಸಭೆಯ ನಾಲ್ಕು ಸೀಟುಗಳಲ್ಲಿ ಮೂರು ಮಂದಿಯನ್ನು ಆಯ್ಕೆ ಮಾಡಲು ಬಿಜೆಪಿಗೆ ಸಹಾಯವಾಗಿತ್ತು.
ಇವರಲ್ಲಿ ಐವರು ಶಾಸಕರು ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications