ಗುಜರಾತ್ನಲ್ಲಿ 24 ಮಂತ್ರಿಗಳ ಹೊಸ ಕ್ಯಾಬಿನೆಟ್ ರಚನೆ: ಪಟ್ಟಿ ಹೀಗಿದೆ
ಅಹಮದಾಬಾದ್, ಸೆಪ್ಟೆಂಬರ್ 16: ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ ಮಾಡಿದ ಮೂರು ದಿನಗಳ ನಂತರ ಇಂದು (ಗುರುವಾರ) ನೂತನ ಸಚಿವ ಸಂಪುಟ ಕೂಡ ರಚನೆಯಾಗಿದೆ. 24 ಸಚಿವರು ಇಂದು ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದೇ ವರ್ಷ ಬಾಕಿ ಇರುವಾಗ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿಯನ್ನು ಬದಲು ಮಾಡಿ, ಹೊಸದಾಗಿ ಭೂಪೇಂದ್ರ ಪಟೇಲ್ರನ್ನು ಸಿಎಂ ಮಾಡಿದ್ದಲ್ಲದೆ, ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾದವರೂ ಕೂಡ ಹೊಸಬರೇ ಆಗಿದ್ದಾರೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಬಿಜೆಪಿ ಗುಜರಾತ್ ಅಧ್ಯಕ್ಷ ಸಿ.ಆರ್. ಪಾಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಭೂಪೇಂದ್ರ ಯಾದವ್ ಮತ್ತು ಕೇಂದ್ರದ ವೀಕ್ಷಕರಾದ ಬಿ.ಎಲ್. ಸಂತೋಷ್ ಹಾಜರಿದ್ದರು.

ಇಂದು ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಲ್ಲಿ 10 ಮಂದಿ ಸಂಪುಟ ದರ್ಜೆಯ ಸ್ಥಾನ ಮಾನ ಪಡೆದಿದ್ದಾರೆ. ಉಳಿದ 14 ಜನರಿಗೆ ರಾಜ್ಯದರ್ಜೆಯಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಈ 14 ಜನರಲ್ಲಿ ಐವರಿಗೆ ಸ್ವತಂತ್ರ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.
ಸಂಪುಟ ದರ್ಜೆಯ ಸಚಿವ ಪಟ್ಟಿ ಹೀಗಿದೆ
ರಾಜೇಂದ್ರ ತ್ರಿವೇದಿ, ಜಿತು ವಾಘನಿ, ಋಷಿಕೇಶ ಪಟೇಲ್, ರಾಘವ್ಜಿ ಪಟೇಲ್, ಪೂರ್ಣೇಶ್ ಮೋದಿ, ಕಾನುಭಾಯಿ ದೇಸಾಯಿ, ಕಿರೀಟ್ ಸಿನ್ಹಾ ರಾಣಾ, ನರೇಶ್ ಪಟೇಲ್, ಪ್ರದೀಪ್ ಸಿನ್ಹಾ ಪಾರ್ಮಾರ್ ಮತ್ತು ಅರ್ಜುನ್ ಸಿಂಗ್ ಚೌಹಾಣ್.
ರಾಜ್ಯ ದರ್ಜೆಯ ಸಚಿವ ಪಟ್ಟಿ ಹೀಗಿದೆ
ಹರ್ಷ ಸಾಂಘ್ವಿ, ಜಗದೀಶ್ ಪಾಂಚಾಲ್, ಬ್ರಿಜೇಶ್ ಮೆರ್ಜಾ, ಜಿತು ಚೌಧರಿ, ಮನೀಶಾ ವಾಕಿಲ್, ಮುಕೇಶ್ ಪಟೇಲ್, ನಿಮಿಶಾ ಸುತಾರ್, ಅರವಿಂದ್ ರೈಯಾನಿ, ಕುಬೇರ್ ದಿಂಡೋರ್, ಕೀರ್ತಿಸಿನ್ಹಾ ವಘೇಲಾ, ರಾಜೇಂದ್ರಸಿನ್ಹಾ ಪರ್ಮಾರ್, ರಾಘವ ಜಿ ಮಕ್ವಾನಾ, ವಿನೋದ್ ಮೊರಾದಿಯಾ ಮತ್ತು ದೇವಭಾಯಿ ಮಲಮ್. ಇವರಲ್ಲಿ ಹರ್ಷ ಸಾಂಘ್ವಿ, ಜಗದೀಶ್ ಪಾಂಚಾಲ್, ಬ್ರಿಜೇಶ್ ಮೆರ್ಜಾ, ಜಿತು ಚೌಧರಿ, ಮನೀಶಾ ವಾಕಿಲ್ ಅವರಿಗೆ ಸ್ವತಂತ್ರ ಕಾರ್ಯ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.

ಇಂದು ಸಂಪುಟ ಮೊದಲ ಸಭೆ
ಗುರುವಾರ ಮಧ್ಯಾಹ್ನದ ವೇಳೆಗೆ ಹೊಸ ಸಚಿವರೆಲ್ಲ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಅದಾದ ಬಳಿಕ ಕ್ಯಾಬಿನೆಟ್ನ ಮೊದಲ ಸಭೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದಲ್ಲಿ ಸರ್ಣಿಮ್ ಸಂಕುಲ್ನಲ್ಲಿ ನಡೆದಿದೆ. ಇನ್ನು ವಿಶೇಷ ಸಂಗತಿಯೆಂದರೆ ರಾಜ್ಯಪಾಲ ಆಚಾರ್ಯ ದೇವವೃತರಿಗೂ ಕೂಡ ಸಚಿವ ಸ್ಥಾನ ಸಿಕ್ಕಿದ್ದರಿಂದ, ಗುಜರಾತ್ಗೆ ಹೊಸ ರಾಜ್ಯಪಾಲರ ನೇಮಕವೂ ಆಗಬೇಕಿದೆ.
ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಕೆಲ ದಿನಗಳ ಹಿಂದೆ ದಿಢೀರ್ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದ ಅವರು, ಈವರೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುವೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸುವುದಾಗಿ ಹೇಳಿದ್ದರು.
2016ರ ಆಗಸ್ಟ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕರಿಸಿದ್ದರು. ಐದು ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು, ಇದೀಗ ಅವರು ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications