ಗುಜರಾತ್ ಸಿಎಂ ರೂಪಾನಿ ರಾಜೀನಾಮೆ: ಸಿಎಂ ರೇಸಿನಲ್ಲಿರುವ ಐವರು
ಗಾಂಧಿನಗರ, ಸೆ 11: ಬಿಜೆಪಿಯ ಭದ್ರಕೋಟೆ ಗುಜರಾತ್ ನಲ್ಲಿ ನಡೆದ ಅಚ್ಚರಿಯ ಮತ್ತು ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ಸಲ್ಲಿಸಿದ್ದಾರೆ. ಶನಿವಾರ ಸಿಎಂ ರೂಪಾನಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ವಿದ್ಯಮಾನದಿಂದಾಗಿ ಎಲ್ಲರ ಗಮನ ಈಗ ಅಲ್ಲಿನ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮನೆ ಮಾಡಿದೆ. ಮುಂದಿನ ವರ್ಷ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಐದು ವರ್ಷ ಸಿಎಂ ಆಗಿದ್ದ ವಿಜಯ್ ರೂಪಾನಿ ಯಾವುದೇ ಪ್ರತಿರೋಧ ತೋರದೇ ರಾಜೀನಾಮೆ ಕೊಡಿಸುವಲ್ಲಿ ಬಿಜೆಪಿಯ ವರಿಷ್ಠರು ಯಶಸ್ವಿಯಾಗಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡಿದ ರೀತಿಯಲ್ಲೇ ರೂಪಾನಿ ಪದತ್ಯಾಗ ಮಾಡಿರುವುದು, ಬಿಜೆಪಿ ಹೈಕಮಾಂಡಿಗೆ ಇರುವ ಪವರ್ ಮತ್ತೊಮ್ಮೆ ಸಾಬೀತಾಗಿದೆ.
ಉಸ್ತುವಾರಿಯಾಗಿರುವ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಹಿರಿಯ ಮುಖಂಡ ಭೂಪೇಂದ್ರ ಯಾದವ್, ಗಾಂಧಿನಗರದಲ್ಲಿ ಬೀಡು ಬಿಟ್ಟಿದ್ದಾರೆ. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಾಳೆ (ಸೆ 12) ನಡೆಯುವ ಸಾಧ್ಯತೆಯಿದೆ. ಚುನಾವಣಾ ಪೂರ್ವ ತಯಾರಿಗಾಗಿ ರೂಪಾನಿಯವರಿಂದ ರಾಜೀನಾಮೆ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಸಿಎಂ ರೇಸಿನಲ್ಲಿರುವ ಐವರು:

ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ ಯಾರಿಗೆ ಒಲಿಯಲಿದೆ ಎನ್ನುವುದು ಗೊತ್ತಾಗಲಿದೆ
ಗುಜರಾತ್ ನಲ್ಲಿ ಪ್ರಮುಖವಾಗಿರುವ ಪಾಟೀದಾರ್ ಸಮುದಾಯವಾದ ನಾಯಕನನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆ ಮೂಲಕ, ಕಾಂಗ್ರೆಸ್ಸಿನ ರಣನೀತಿಗೆ ಈಗಲೇ ಸಡ್ಡು ಹೊಡೆಯಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಗುಜರಾತ್ ಮೂಲದ ಇಬ್ಬರು ನಾಯಕರು ಈ ಸಮುದಾಯದವರಾಗಿದ್ದು, ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ ಯಾರಿಗೆ ಒಲಿಯಲಿದೆ ಎನ್ನುವುದು ಇನ್ನು ಒಂದೆರಡು ದಿನಗಳಲ್ಲಿ ಗೊತ್ತಾಗಲಿದೆ.

ಪಾಟೀದಾರ್ ಸಮುದಾಯದ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ
ಮುಂದಿನ ಸಿಎಂ ಯಾರು ಎನ್ನುವ ವಿಚಾರದಲ್ಲಿ ಐವರ ಹೆಸರು ಮಂಚೂಣಿಯಲ್ಲಿ ಕೇಳಿ ಬರುತ್ತಿದೆ. ಅದರಲ್ಲಿ ಪಾಟೀದಾರ್ ಸಮುದಾಯವನ್ನು ಪ್ರತಿನಿಧಿಸುವ ಕೇಂದ್ರ ಆರೋಗ್ಯ ಸಚಿವರಾಗಿರುವ ಮನಸುಖ್ ಮಾಂಡವೀಯ ಮತ್ತು ಆರ್.ಸಿ.ಫಾಲ್ಡು ಅವರ ಹೆಸರು. ಇವರಿಬ್ಬರಲ್ಲದೇ ಇನ್ನೂ ಮೂವರು ಹೆಸರು ಕೇಳಿ ಬರುತ್ತಿದೆ. ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ, ಕೆಮಿಕಲ್ಸ್ ಮತ್ತು ರಸಗೊಬ್ಬರ ಖಾತೆಯನ್ನು ಈಗತಾನೇ ನಿಭಾಯಿಸಲು ಆರಂಭಿಸಿರುವ ಮನಸುಖ್ ಮಾಂಡವೀಯ ಅವರು ಬಿಜೆಪಿ ಹೈಕಮಾಂಡ್ ಆಯ್ಕೆಯಾದರೂ ಆಗಬಹುದು.

ಪುರುಷೋತ್ತಮ ರೂಪಾಲಿ, ನಿತಿನ್ ಪಟೇಲ್ ಮತ್ತು ಸಿ.ಆರ್. ಪಟೇಲ್
ಇವರಿಬ್ಬರಲ್ಲದೇ ಮತ್ತೆ ಮೂವರ ಹೆಸರು ಈ ಪಟ್ಟಿಯಲ್ಲಿ ಓಡಾಡುತ್ತಿದೆ. ಅವರೆಂದರೆ, ಪುರುಷೋತ್ತಮ ರೂಪಾಲಿ, ನಿತಿನ್ ಪಟೇಲ್ ಮತ್ತು ಸಿ.ಆರ್. ಪಟೇಲ್ ಹೆಸರು. ಈ ಮೂವರೂ ನಾಯಕರು ರಾಜ್ಯ ರಾಜಕೀಯದಲ್ಲಿ ಪ್ರಭಾವೀ ಸ್ಥಾನವನ್ನು ಹೊಂದಿದ್ದಾರೆ. ಹಾಲೀ ಅಸೆಂಬ್ಲಿಯ ಇನ್ನುಳಿದಿರುವ ದಿನಗಳಲ್ಲಿ ಜನಪರ ಕೆಲಸದ ಜೊತೆಗೆ, ಚುನಾವಣೆಗೂ ಸಿದ್ದವಾಗಬೇಕಾಗಿರುವುದರಿಂದ, ಹೈಕಮಾಂಡ್ ಆಯ್ಕೆಯೇ ಅಂತಿಮ ಎನ್ನುವುದು ಅತ್ಯಂತ ಸ್ಪಷ್ಟ. (ಚಿತ್ರದಲ್ಲಿ: ನಿತಿನ್ ಪಟೇಲ್)

ಗುಜರಾತ್ ಸಿಎಂ ರೂಪಾನಿ ರಾಜೀನಾಮೆ: ಸಿಎಂ ರೇಸಿನಲ್ಲಿರುವ ಐವರು
ಪಾಟೀದಾರ್ ಸಮುದಾಯ ಗುಜರಾತ್ ನಲ್ಲಿ ನಿರ್ಣಾಯಕ ಪಾತ್ರ ವಹಿಸುವುದರಿಂದ ಆ ಸಮುದಾಯದ ನಾಯಕನನ್ನೇ ಸಿಎಂ ಆಗಿ ವರಿಷ್ಠರು ಕೂರಿಸಬಹುದು. ಸದ್ಯ ಡಿಸಿಎಂ ಆಗಿರುವ ನಿತಿನ್ ಪಟೇಲ್ ಅವರು ಅದೇ ಸ್ಥಾನದಲ್ಲಿ ಮುಂದುವರಿಯಬಹುದು. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಮನಸುಖ್ ಮಾಂಡವೀಯ ಅಥವಾ ಆರ್.ಸಿ.ಫಾಲ್ಡು ಅವರ ಹೆಸರನ್ನೇ ಕವರ್ ನಲ್ಲಿ ಹಾಕಿ ಬಿಜೆಪಿ ಹೈಕಮಾಂಡ್ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications