ಮಹಿಳೆಯರನ್ನು ಕೋರ್ಟ್ಗೆ ಹಾಜರುಪಡಿಸಲು ನಿತ್ಯಾನಂದಸ್ವಾಮಿಗೆ ಗಡುವು
Recommended Video
ಅಹಮದಾಬಾದ್, ನವೆಂಬರ್ 27: ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ವಿರುದ್ಧದದ ಪ್ರಕರಣಕ್ಕೆ ಸಂಬಂಧಿಸಿ ಕಾಣೆಯಾಗಿರುವ ಇಬ್ಬರು ಮಹಿಳೆಯರನ್ನು ಡಿ.10ರೊಳಗೆ ಕೋರ್ಟ್ ಮುಂದೆ ಹಾಜರುಪಡಿಸುವಂತೆ ಗುಜರಾತ್ ಪೊಲೀಸರಿಗೆ ಸೂಚಿಸಲಾಗಿದೆ.
ನಾಪತ್ತೆಯಾಗಿರುವ ಇಬ್ಬರು ಮಹಿಳೆಯರ ಪಾಲಕರ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ಇಬ್ಬರು ಮಹಿಳೆಯರು ಎಲ್ಲಿದ್ದಾರೆ ಗೊತ್ತಿಲ್ಲ ಎಂದು ಪೊಲೀಸರು ಅಸಹಾಯಕತೆ ಪ್ರದರ್ಶಿಸುವಂತಿಲ್ಲ. ಲಭ್ಯವಿರುವ ಎಲ್ಲ ಏಜೆನ್ಸಿಗಳ ಲಾಭ ಪಡೆದು ಮಹಿಳೆಯರು ಎಲ್ಲಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ.
ಇಂಟರ್ಪೋಲ್, ವಿದೇಶಾಂಗ ಇಲಾಖೆ ಅಥವಾ ಲಭ್ಯವಿರುವ ಯಾವುದೇ ಏಜೆನ್ಸಿಯ ಸಹಾಯವನ್ನಾದರೂ ಪಡೆಯಿರಿ. ಒಟ್ಟಾರೆಯಾಗಿ ಡಿ.10ರಂದು ನಾಪತ್ತೆಯಾಗಿರುವರನ್ನು ಕೋರ್ಟ್ ಮುಂದೆ ಹಾಜರುಪಡಿಸಲೇಬೇಕು. ಇದರಿಂದ ಪೊಲೀಸರಿಗೆ ವಿನಾಯಿತಿ ನೀಡಲು ಸಾಧ್ಯವೇ ಇಲ್ಲ ಎಂದು ನ್ಯಾಯಪೀಠ ಎಚ್ಚರಿಸಿದೆ.

ಪಾಲಕರ ಹೇಬಿಯಸ್ ಕಾರ್ಪಸ್ ಅರ್ಜಿ ಸಂಬಂಧ ನಿತ್ಯಾನಂದರಿಗೂ ಈಗಾಗಲೇ ನೋಟಿಸ್ ಜಾರಿಯಾಗಿದೆ. ಆದರೆ ನಿತ್ಯಾನಂದ ಎಲ್ಲಿದ್ದಾರೆ ಎನ್ನುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಇಲ್ಲ.ಪೊಲೀಸರಿಂದ ಕಣ್ತಪ್ಪಿಸಿಕೊಂಡು ವಿದೇಶದಲ್ಲಿ ಅಡಗಿರುವ ಸಾಧ್ಯತೆಯಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುತ್ತಿದ್ದು, ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಅಹ್ಮದಾಬಾದ್ ಪೊಲೀಸರ ಪ್ರಕಾರ ನಿತ್ಯಾನಂದ ಈಗಾಗಲೇ ದೇಶ ಬಿಟ್ಟು ಹೋಗಿದ್ದಾರೆ. ಆದರೆ ನಿತ್ಯಾನಂದ ಪಾಸ್ಪೋರ್ಟ್ 2018ರಲ್ಲೇ ರದ್ದಾಗಿತ್ತು. ನವೀಕರಣಕ್ಕೆ ವಿದೇಶಾಂಗ ಇಲಾಖೆ ನಿರಾಕರಿಸಿತ್ತು. ಇಂತಹ ಸ್ಥಿತಿಯಲ್ಲಿ ಹೇಗೆ ದೇಸ ಬಿಟ್ಟು ಪರಾರಿಯಾಗಿದ್ದಾರೆ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಸಿಬಿಐ ತನಿಖೆಗೆ ಆಗ್ರಹ
ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸಬೇಕು. ನಿತ್ಯಾನಂದ ವಿದೇಶಕ್ಕೆ ಪರಾರಿಯಾಗಿರುವ ಸಾಧ್ಯತೆಯಿದೆ. ಹೀಗಾಗಿ ಪರಿಣಾಮಕಾರಿ ತನಿಖೆಗೆ ಸಿಬಿಐಗೆ ಒಪ್ಪಿಸುವುದು ಒಳಿತು ಎಂದು ಗುಜರಾತ್ ಸರ್ಕಾರ ಹಾಗೂ ಹೈಕೋರ್ಟ್ಗೆ ಪರಾರಿಯಾದ ಇಬ್ಬರು ಮಹಿಳೆಯರ ಪಾಲಕರು ಮನವಿ ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications