ಗೋಧ್ರಾ ಬೆಂಕಿ ಪ್ರಕರಣ: ಆರೋಪಿ ಯಾಕೂಬ್ಗೆ ಜೀವಾವಧಿ ಶಿಕ್ಷೆ
ಅಹಮದಾಬಾದ್, ಮಾರ್ಚ್ 21: 2002ರಲ್ಲಿ ಕರಸೇವಕರಿದ್ದ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ವಿಶೇಷ ತನಿಖಾ ನ್ಯಾಯಾಲಯ ಒಬ್ಬ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇತರೆ ಐವರು ಆರೋಪಿಗಳು ಸಲ್ಲಿಸಿದ ಹೇಳಿಕೆಗಳ ಆಧಾರದಲ್ಲಿ ಶಿಕ್ಷೆಗೆ ಒಳಗಾಗಿದ್ದ ಆರೋಪಿ ಯಾಕೂಬ್ ಪಟಾಲಿಯಾನಿಗೆ ವಿಶೇಷ ಎಸ್ಐಟಿ ನ್ಯಾಯಾಧೀಶ ಎಚ್ ಸಿ ವೋರಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸಬರಮತಿ ಎಕ್ಸ್ಪ್ರೆಸ್ನ ಎರಡು ಕೋಚ್ಗಳಿಗೆ ಬೆಂಕಿ ಹಚ್ಚಿ 59 ಕರಸೇವಕರನ್ನು ಸಜೀವವಾಗಿ ಕೊಂದ ಘಟನೆಯಲ್ಲಿ ಯಾಕೂಬ್ ಪಟಾಲಿಯಾನನ್ನು 2018ರ ಜನವರಿಯಲ್ಲಿ ಬಂಧಿಸಲಾಗಿತ್ತು. 2002ರ ಫೆಬ್ರವರಿ 27ರಂದು ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಸಬರಮತಿ ಎಕ್ಸ್ಪ್ರೆಸ್ ಕೋಚ್ಗಳಿಗೆ ಬೆಂಕಿ ಹಚ್ಚಿದ್ದ ಗುಂಪಿನ ಭಾಗವಾಗಿದ್ದ ಆರೋಪ ಆತನ ಮೇಲಿತ್ತು. ವಿಚಾರಣೆ ನಡೆದು ಆತ ತಪ್ಪಿತಸ್ಥ ಎಂಬುದು ಸಾಬೀತಾಗಿತ್ತು.

ಇದಕ್ಕೂ ಮೊದಲು ವಿಶೇಷ ಎಸ್ಐಟಿ ಕೋರ್ಟ್ 2011ರ ಮಾರ್ಚ್ 1ರಂದು 31 ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಅವರಲ್ಲಿ 11 ಮಂದಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, 2017ರ ಅಕ್ಟೋಬರ್ನಲ್ಲಿ ಗುಜರಾತ್ ಹೈಕೋರ್ಟ್ 11 ಮಂದಿಯ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. ಉಳಿದವರ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.
ಪ್ರಕರಣದಲ್ಲಿ ಎಂಟು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಈ ಘಟನೆಗೆ ಪ್ರತೀಕಾರವಾಗಿ ಅಹ್ಮದಾಬಾದ್ ಸಮೀಪದ ನರೋಡಾ ಪಾಟಿಯಾದಲ್ಲಿ ನಡೆದ ಕೋಮು ಗಲಭೆಯಲ್ಲಿ ಸುಮಾರು 97 ಮುಸ್ಲಿಮರನ್ನು ಹತ್ಯೆ ಮಾಡಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications