20 ಕೆಜಿ ತೂಕ ಇಳಿದ ಮೇಲೆ ಹಾರ್ದಿಕ್ ಕಡೆ ನೋಡಿದ ಗುಜರಾತ್ ಸರ್ಕಾರ!
ಅಹ್ಮದಾಬಾದ್, ಸೆಪ್ಟೆಂಬರ್ 05: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟೀದಾರ್ ಆಂದೋಲನದ ಮುಖಂಡ ಹಾರ್ದಿಕ್ ಪಟೇಲ್ 20 ಕೆ.ಜಿ ತೂಕ ಕಳೆದುಕೊಂಡಿದ್ದು ಭಾರೀ ಸುದ್ದಿಯಾಗಿತ್ತು. ಉಪವಾಸ ಆರಂಭಿಸಿ ಹನ್ನೊಂದು ದಿನವಾದರೂ ಹಾರ್ದಿಕ್ ಪಟೇಲ್ ರತ್ತ ಕಣ್ಣೆತ್ತಿಯೂ ನೋಡದಿದ್ದ ಗುಜರಾತ್ ಸರ್ಕಾರ ಇದೀಗ ಅವರನ್ನು ಓಲೈಸಲು ಮುಂದಾಗಿದೆ.
20 ಕೆಜಿ ತೂಕ ಕಳೆದುಕೊಂಡ ಹಾರ್ದಿಕ್ ಪಟೇಲ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ, ಇದು ಹೀಗೆಯೇ ಮುಂದುವರಿದರೆ ಸಂಕಷ್ಟ ಎದುರಿಸಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದರಿಂದ ಎಚ್ಚೆತ್ತುಕೊಂಡ ಸರ್ಕಾರ ಅವರು ಉಪವಾಸ ವಾಪಸ್ ಪಡೆಯುವಂತೆ ಮನವಿ ಮಾಡಲು ಮುಂದಾಗಿದೆ.
ಮಂಗಳವಾರ ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಹಾರ್ದಿಕ್ ಉಪವಾಸಕ್ಕೆ ಸಂಬಂಧಿಸಿದಂತೆ ವಿಶೇಷ ಸಭೆ ನಡೆಸಿದ್ದು, 'ಅವರು(ಹಾರ್ದಿಕ್ ಪಟೇಲ್) ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮಾಡುವುದು ನಮ್ಮ ಮೊದಲ ಆದ್ಯತೆ. ಆ ಕುರಿತು ಯಾವೆಲ್ಲ ಕ್ರಮ ಕೈಗೊಳ್ಳಬೇಕೋ ಆ ನಿಟ್ಟಿನಲ್ಲಿ ಯೋಚಿಸುತ್ತೇವೆ' ಎಂದು ಸಭೆಯ ನಂತರ ಬಿಜೆಪಿ ಮುಖಂಡರು ಹೇಳಿದ್ದಾರೆ.

ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ, ರೈತರ ಸಾಲ ಮನ್ನಾ, ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಅಲ್ಪೇಶ್ ಕಠಾರಿಯಾ ಬಿಡುಗಡೆಗಾಗಿ ಒತ್ತಾಯಿಸಿ ಹಾರ್ದಿಕ್ ಪಟೇಲ್ ಆ.24 ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ ಪಾಟೀದಾರ್ ಅದಾಲತ್ ಆಂದೋಲನ್ ಸಮಿತಿ(PAAS) ನ ಮುಖಂಡರೂ ಹೌದು. 11 ದಿನಗಳ ಸತತ ಉಪವಾಸದ ನಂತರ ಅವರು ಬರೋಬ್ಬರಿ 20 ಕೆ.ಜಿ. ತೂಕ ಕಳೆದುಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಹಾರ್ದಿಕ್ ಅವರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಅವರು ಉಪವಾಸ ನಡೆಸುತ್ತಿರುವ ಅವರ ನಿವಾಸದ ಎದುರು "ICU on Wheel" ಅಂಬುಲೆನ್ಸ್ ಸೌಲಭ್ಯವನ್ನು ಗುಜರಾತ್ ಸರ್ಕಾರ ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications