ಗುಜರಾತ್ ಶಿಕ್ಷಣ ಸಚಿವ ಚೂಡಾಸಮ ಗೆಲುವು ಅಸಿಂಧುಗೊಳಿಸಿದ ಹೈಕೋರ್ಟ್
ಅಹಮದಬಾದ್, ಮೇ 13: ಕೊರೊನಾ ವೈರಸ್ ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಗುಜರಾತ್ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. 2017ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗುಜರಾತ್ ಶಿಕ್ಷಣ ಹಾಗು ಕಾನೂನು ಸಚಿವ ಭೂಪೇಂದ್ರಸಿನ್ಹ ಚೂಡಾಸಮ ಅವರ ಗೆಲುವು ಅಸಿಂಧು ಎಂದು ಮಂಗಳವಾರ ಹೈಕೋರ್ಟ್ ಪ್ರಕಟಿಸಿದೆ.
ಗುಜರಾತ್ನ ಧೋಲ್ಕಾ ವಿಧಾನಸಭೆ ಕ್ಷೇತ್ರದಿಂದ ಗೆಲುವು ಕಂಡಿದ್ದ ಭೂಪೇಂದ್ರಸಿನ್ಹ ಚೂಡಾಸಮ ಅವರ ಫಲಿತಾಂಶವನ್ನು ಪ್ರಶ್ನಿಸಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶ್ವಿನ್ ರಾಠೋಡ್ ಹೈಕೋರ್ಟ್ ಮೊರೆಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ತೀರ್ಪು ನೀಡಿದೆ.
ಕಾಂಗ್ರೆಸ್ ಅಭ್ಯರ್ಥಿ ಅಶ್ವಿನ್ ರಾಠೋಡ್ ವಿರುದ್ಧ ಕೇವಲ 327 ಮತಗಳ ಅಂತರದಲ್ಲಿ ಭೂಪೇಂದ್ರಸಿನ್ಹ ಚೂಡಾಸಮ ಗೆಲವು ಕಂಡಿದ್ದರು. ಹೀಗಾಗಿ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ, ಚುನಾವಣ ಅಧಿಕಾರಿಗಳ ಜೊತೆ ಸೇರಿ ಭೂಪೇಂದ್ರಸಿನ್ಹ ಚೂಡಾಸಮ ವಂಚಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು.

''2017ರ ಚುನಾವಣೆಯಲ್ಲಿ ಮತಪತ್ರಗಳ ಮೂಲಕ ಚಲಾವಣೆಯಾಗಿದ್ದ 427 ಮತಗಳನ್ನು ಚುನಾವಣಾ ಅಧಿಕಾರಿ ಧವಲ್ ಜನಿ ಅಕ್ರಮವಾಗಿ ತಿರಸ್ಕರಿಸಿದ್ದಾರೆ. ಇವಿಎಂಗಳಲಿದ್ದ 29 ಮತಗಳನ್ನು ಎಣಿಕೆ ಮಾಡಿಲ್ಲ. 1,59,946 ಮತದಾರರು ಮತ ಚಲಾವಣೆ ಮಾಡಿದ್ದಾರೆ ಎಂದು ವರದಿ ನೀಡಿದ್ದರು. ಆದರೆ, ಅಂತಿಮವಾಗಿ ಫಲಿತಾಂಶ ಘೋಷಿಸಿದಾಗ 1,59.917 ಮತ ಚಲಾವಣೆ ಆಗಿದೆ ಎಂದು ಹೇಳಿದ್ದರು. ಇವುಗಳ ನಡುವೆ 29 ಮತಗಳ ವ್ಯತ್ಯಾಸ ಇದೆ'' ಎಂದು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಅಶ್ವಿನ್ ರಾಠೋಡ್ ಅವರ ಅರ್ಜಿಯನ್ನು ರದ್ದುಗೊಳಿಸಬೇಕು ಎಂದು ಚೂಡಾಸಮ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ನ್ಯಾಯಲಯ ಚೂಡಾಸಮ ಅವರ ಮನವಿ ತಿರಸ್ಕರಿಸಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications