Breaking: ಕಳ್ಳಭಟ್ಟಿ ದುರಂತ; 42 ಮಂದಿ ಬಲಿ, ಆರು ಪೊಲೀಸರ ಅಮಾನತು
ಅಹಮದಾಬಾದ್, ಜುಲೈ 28: ಗುಜರಾತ್ ಕಳ್ಳಭಟ್ಟಿ ದುರಂತದಲ್ಲಿ ಇದುವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್ ಗೃಹ ಇಲಾಖೆ ಗುರುವಾರ ಬೊಟಾಡ್ ಮತ್ತು ಅಹಮದಾಬಾದ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ರಾಜ್ಯದಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ದುರಂತದಲ್ಲಿ ಇದುವರೆಗೆ ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಯ 42 ಮಂದಿ ಸಾವನ್ನಪ್ಪಿದ್ದಾರೆ.
ಈ ಕ್ರಮದ ಕುರಿತು ಪ್ರತಿಕ್ರಿಯಿಸಿರುವ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್, 'ಬೋಟಾಡ್ ಎಸ್ಪಿ ಕರಂರಾಜ್ ವಘೇಲಾ ಮತ್ತು ಅಹಮದಾಬಾದ್ ಎಸ್ಪಿ ವೀರೇಂದ್ರಸಿಂಗ್ ಯಾದವ್ ಅವರನ್ನು ವರ್ಗಾವಣೆ ಮಾಡಿದ್ದೇವೆ. ಇಬ್ಬರು ಉಪ ಎಸ್ಪಿಗಳು, ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್, ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಸೇರಿದಂತೆ ಆರು ಪೊಲೀಸ್ ಅಧಿಕಾರಿಳನ್ನು ಅಮಾನತುಗೊಳಿಸಲಾಗಿದೆ' ಎಂದರು.

ದುರಂತದಲ್ಲಿ ಇನ್ನು 97 ಜನರು ಭಾವನಗರ, ಬೊಟಾಡ್ ಮತ್ತು ಅಹಮದಾಬಾದ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಗುಜರಾತ್ ಚುನಾವಣೆ ಮೇಲೆ ಕಣ್ಣೀಟ್ಟಿರುವ ಆಮ್ ಆದ್ಮಿ ಪಕ್ಷವು, ರಾಜ್ಯದಲ್ಲಿನ ನಕಲಿ ಮದ್ಯ ಮಾರಾಟ ಸೇರಿದಂತೆ ಜನಸಾಮಾನ್ಯರ "ಮೂಲಭೂತ ಸಮಸ್ಯೆಗಳನ್ನು" ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುತ್ತದೆ ಎಂದು ಪಕ್ಷದ ಸಂಸದ ಸಂಜಯ್ ಸಿಂಗ್ ಬುಧವಾರ ಹೇಳಿದ್ದರು.
Recommended Video
ಘಟನೆ ಕುರಿತು ಮಾತನಾಡಿರುವ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ, 'ಪ್ರಕರಣ ಕುರಿತು ಪೊಲೀಸರು 10 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಈ ಬಗ್ಗೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು' ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications