ಗುಜರಾತ್ ವಿದ್ಯಾರ್ಥಿಗಳು 'ಎಸ್ ಸಾರ್' ಅನ್ನೊಂಗಿಲ್ಲ, 'ಜೈ ಹಿಂದ್' ಅನ್ಬೇಕು
ಗಾಂಧಿನಗರ, ಜನವರಿ 01: ಶಾಲೆಯಲ್ಲಿ ಹಾಜರಾತಿ ಸಮಯ ಮಕ್ಕಳು 'ಎಸ್ ಸಾರ್' ಅನ್ನುವಂತಿಲ್ಲ ಅದರ ಬದಲಿಗೆ 'ಜೈ ಹಿಂದ್' ಎನ್ನಬೇಕು ಎಂದು ಸುತ್ತೋಲೆಯನ್ನು ಬಿಜೆಪಿ ಆಡಳಿತದ ಗುಜರಾತ್ನಲ್ಲಿ ಹೊರಡಿಸಲಾಗಿದೆ.
ಗುಜರಾತ್ನ ಎಲ್ಲ ಶಾಲೆಗಳಲ್ಲೂ ಇನ್ನು ಮುಂದೆ ವಿದ್ಯಾರ್ಥಿಗಳು ಎಸ್ ಸಾರ್, ಎಸ್ ಮೇಡಂ ಬದಲಿಗೆ, ಜೈ ಹಿಂದ್ ಅಥವಾ ಜೈ ಭಾರತ್ ಎಂದೇ ಹೇಳಬೇಕಂತೆ. ಹೀಗೆಂದು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಗೂ ಸುತ್ತೋಲೆಯೊಂದನ್ನು ಹೊರಡಿಸಿದೆ.
ದೇಶಭಕ್ತಿ ಹೆಚ್ಚಿಸಲು ಈ ಕ್ರಮ ಕೈಗೊಂಡಿರುವುದಾಗಿ ಗುಜರಾತ್ ಶಿಕ್ಷಣ ಇಲಾಖೆ ಹೇಳಿದೆ. 'ನಾನು ವಿದ್ಯಾರ್ಥಿಯಾಗಿದ್ದಾಗ, 'ಜೈ ಹಿಂದ್, ಅಥವಾ ಜೈ ಭಾರತ್ ಹೇಳುವುದು ಕಡ್ಡಾಯವಾಗಿತ್ತು' ಎಂದು ಗುಜರಾತ್ ಶಿಕ್ಷಣ ಸಚಿವ ಭುಪೇಂದ್ರಸಿಂಹ ಚುಡಾಸಮಾ ಹೇಳಿದ್ದಾರೆ. ಹಾಗೂ ಸುತ್ತೋಲೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಒಬ್ಬ ವಿದ್ಯಾರ್ಥಿ 10,000 ಕ್ಕೂ ಹೆಚ್ಚು ಬಾರಿ ಎಸ್ ಸರ್ ಅಥವಾ ಎಸ್ ಮೇಡಂ ಹೇಳುತ್ತಾನೆ. ಅದರ ಬದಲಿಗೆ ಜೈ ಹಿಂದ್, ಜೈ ಭಾರತ್ ಎಂದು ಹೇಳಿದರೆ ಆತನಲ್ಲಿ ದೇಶಭಕ್ತಿ ಜಾಗೃತವಾಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ಈ ಕ್ರಮದ ಪರ ವಿರೋಧ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಆರಂಭವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications