ರಾಮ ಮಂದಿರ ನಿರ್ಮಾಣಕ್ಕಾಗಿ 21, 000 ರು ಕಾಣಿಕೆ ನೀಡಲಿರುವ ಹಾರ್ದಿಕ್
ಅಹಮದಾಬಾದ್, ಆ.4: ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸಿರುವ ಮುಖಂಡ, ಗುಜರಾತ್ ಕಾಂಗ್ರೆಸ್ಸಿನ ನೂತನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರು ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಕಾಣಿಕೆ ನೀಡುವುದಾಗಿ ಘೋಷಿಸಿದ್ದಾರೆ. ಉತ್ತರಪ್ರದೇಶದ ಆಯೋಧ್ಯೆಯ ರಾಮ ಮಂದಿರಕ್ಕಾಗಿ ತಾವು ಹಾಗೂ ತಮ್ಮ ಕುಟುಂಬಸ್ಥರು 21, 000 ರು ಕಾಣಿಕೆ ನೀಡುವುದಾಗಿ ಹೇಳಿದ್ದಾರೆ.
ಶ್ರೀರಾಮಚಂದ್ರನಲ್ಲಿ ಅನನ್ಯ ಭಕ್ತಿ ಇದ್ದು, ಹಿಂದು ಸಂಘಟನೆಯಲ್ಲಿ ನಂಬಿಕೆ ಇರಿಸಿಕೊಂಡವನು, ರಾಮ ಮಂದಿರ ನಿರ್ಮಾಣದ ನಂತರ ರಾಮ ರಾಜ್ಯ ನಿರ್ಮಾಣವಾಗಲಿ ಎಂದು ಬಯಸುತ್ತೇನೆ ಎಂದು ಹಾರ್ದಿಕ್ ಪಟೇಲ್ ಹೇಳಿದರು.
ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ನೇಮಕ
''ರಾಮ ರಾಜ್ಯವೆಂದರೆ ಪ್ರಜೆಗಳ ರಾಜ್ಯ, ರೈತ, ಯುವ ಸಮುದಾಯ, ಮಹಿಳೆಯರಿಗೆ ಸುಭಿಕ್ಷವಾಗಿರುವ ರಾಜ್ಯ, ಎಲ್ಲರಿಗೂ ಉದ್ಯೋಗ, ಮಹಿಳೆಯರ ಸುರಕ್ಷತೆ, ಶಿಕ್ಷಣ, ಗ್ರಾಮಗಳ ಅಭಿವೃದ್ಧಿ,ದೇಶದ ಆರ್ಥಿಕ ಪ್ರಗತಿ ಎಲ್ಲವೂ ಸಾಧ್ಯವಾಗಲಿ'' ಎಂದು ನಾನು ರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ರಾಮಮಂದಿರ ಭೂಮಿ ಪೂಜೆ ಕರ್ನಾಟಕದ ಕೊಡುಗೆಯೇನು?
ಆಗಸ್ಟ್ 5ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸುತ್ತಿದ್ದಾರೆ. ಶಂಕು ಸ್ಥಾಪನೆ ದಿನದಂದು 40 ಕೆಜಿ ಬೆಳ್ಳಿಯ ಇಟ್ಟಿಗೆಯನ್ನು ಇಟ್ಟು ಮೋದಿ ಪೂಜಿಸಲಿದ್ದಾರೆ. ದೂರದರ್ಶನ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದೆ.