ಜೈಲಿನಿಂದ ಹೊರಬಂದ ಕೂಡಲೇ ಹಳೆ ಪ್ರಕರಣದಲ್ಲಿ ಹಾರ್ದಿಕ್ ಪಟೇಲ್ ಬಂಧನ
ಅಹ್ಮದಾಬಾದ್, ಜನವರಿ 23: ದೇಶದ್ರೋಹ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಗುಜರಾತ್ ಕಾಂಗ್ರೆಸ್ ಯುವ ನಾಯಕ ಹಾರ್ದಿಕ್ ಪಟೇಲ್ ಇಂದು ಜಾಮೀನು ಪಡೆದು ಹೊರಬಂದರು, ಆದರೆ ಹೊರಬಂದ ಕೂಡಲೇ ಅವರನ್ನು ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು.
2015 ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಹ್ಮದಾಬಾದ್ ಸ್ಥಳೀಯ ನ್ಯಾಯಾಲಯವು ಪಟೇಲ್ ವಿರುದ್ಧ ವಾರೆಂಟ್ ಹೊರಡಿಸಿತ್ತು. ಅದರಂತೆ ಜನವರಿ 18 ರಂದು ಹಾರ್ದಿಕ್ ಪಟೇಲ್ ಅವರನ್ನು ಬಂಧಿಸಲಾಗಿತ್ತು.
ಇದೇ ಪ್ರಕರಣದಲ್ಲಿ ಬುಧವಾರ ಹಾರ್ದಿಕ್ ಪಟೇಲ್ ಗೆ ಜಾಮೀನು ದೊರೆತು ಇಂದು ಮಧ್ಯಾಹ್ನದ ವೇಳೆಗೆ ಸಾಬರಮತಿ ಸೆಂಟ್ರಲ್ ಜೈಲಿನಿಂದ ಅವರು ಹೊರಗೆ ಬಂದರು. ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಅವರನ್ನು ಗಾಂಧಿನಗರ ಪೊಲೀಸರು ಬಂಧಿಸಿದರು.
Recommended Video

2017 ರಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ ಗಾಂಧಿನಗರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಅವರನ್ನು ಇಂದು ಗಾಂಧಿನಗರ ಪೊಲೀಸರು ಬಂಧಿಸಿದ್ದಾರೆ.
2017 ರ ಚುನಾವಣೆ ಸಮಯ ಹಾರ್ದಿಕ್ ಪಟೇಲ್ ಅವರು ಪೊಲೀಸರ ಅನುಮತಿ ಪಡೆಯದೇ ಮಾನ್ಸಾ ಪಟ್ಟಣದಲ್ಲಿ ಸಮಾವೇಶವೊಂದನ್ನು ಉದ್ದೇಶಿಸಿ ಮಾತನಾಡಿದ್ದರು. ಆ ಬಗ್ಗೆ ಆಗಲೇ ದೂರು ದಾಖಲಾಗಿ ಎಫ್ಐಆರ್ ಸಹ ದಾಖಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾರ್ದಿಕ್ ಪಟೇಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
2015 ರಲ್ಲಿ ಪಾಟೀದಾರ್ ಮೀಸಲಾತಿ ಹೋರಾಟ ಸಮಯದಲ್ಲಿ ಹಿಂಸಾಚಾರ ಉಂಟಾಗಿತ್ತು. ಈ ಸಂದರ್ಭದಲ್ಲಿ ಚಳವಳಿಯ ನಾಯಕತ್ವ ವಹಿಸಿದ್ದ ಹಾರ್ದಿಕ್ ಪಟೇಲ್ ಮತ್ತು ಇನ್ನೂ ಕೆಲವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ 2016 ರಲ್ಲಿ ಹಾಗೂ ನವೆಂಬರ್ 2018 ರಲ್ಲಿ ಹಾರ್ದಿಕ್ ಪಟೇಲ್ ಗೆ ಜಾಮೀನು ನೀಡಲಾಗಿತ್ತು.
ಆದರೆ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ವಾರೆಂಟ್ ಜಾರಿ ಆದ ಕಾರಣ ಅಪರಾಧ ವಿಭಾಗದ ಪೊಲೀಸರು ಜನವರಿ 18 ರಂದು ಬಂಧಿಸಿದ್ದರು. ನಿನ್ನೆ ಅವರಿಗೆ ಜಾಮೀನು ದೊರೆತಿತಾದರೂ ಅವರನ್ನು ಮತ್ತೆ ಹಳೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications