ಉಪವಾಸದ ಬೆದರಿಕೆ ಒಡ್ಡಿದ ಹಾರ್ದಿಕ್ ಪಟೇಲ್ ಪೊಲೀಸ್ ವಶಕ್ಕೆ
ಸೂರತ್, ಮೇ 28: ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ ಪಟೇಲ್ ಆಂದೋಲನದ ಮುಖಂಡ, ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಜರಾತಿನ ನಗರದ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ 22 ಜೀವಗಳನ್ನು ಬಲಿ ಪಡೆದುಕೊಂಡ ಬೆಂಕಿ ಅವಘಡದ ನಂತರ ಯಾರ ಮೇಲೂ ಕ್ರಮ ತೆಗೆದುಕೊಳ್ಳದ ಪೊಲೀಸರ ಕ್ರಮವನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸಲು ಹಾರ್ದಿಕ್ ಪಟೇಲ್ ಮುಂದಾಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಾರ್ದಿಕ್ ಪಟೇಲ್: ಉಪವಾಸ ಮುಂದುವರಿಕೆ
ಮೇ 23 ರಂದು ಸೂರತ್ನ ಸರ್ತಾನಾ ಪ್ರದೇಶದಲ್ಲಿರುವ ತಕ್ಷಿಲಾ ಆರ್ಕೇಡ್ ಕಟ್ಟಡದ ಎರಡನೆಯ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕಟ್ಟಡದೊಳಗೆ ಸಿಲುಕಿಕೊಂಡ ಹಲವರನ್ನು ರಕ್ಷಿಸಲಾಗಿತ್ತಾದರೂ 22 ನ ಜನ ಮೃತರಾಗಿದ್ದರು.
ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ, ರೈತರ ಸಾಲ ಮನ್ನಾ, ದೇಶದ್ರೋಹದ ಆರೋಪದಲ್ಲಿ ಜೈಲಿನಲ್ಲಿರುವ ಅಲ್ಪೇಶ್ ಕಠಾರಿಯಾ ಬಿಡುಗಡೆಗಾಗಿ ಒತ್ತಾಯಿಸಿ 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ ಆಗಸ್ಟ್ 24 ರಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು.