ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಕಾಣೆಯಾಗಿ 20 ದಿನಗಳಾದರೂ ಪತ್ತೆ ಇಲ್ಲ
Recommended Video
ಅಹಮದಾಬಾದ್, ಫೆಬ್ರವರಿ 14: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟದ ಕಾಂಗ್ರೆಸ್ ಮುಖಂಡ ಮತ್ತು ಪಾಟಿದಾರ್ ಕೋಟಾ ಆಂದೋನಲದ ಮುಂಚೂಣಿ ನಾಯಕ ಹಾರ್ದಿಕ್ ಪಟೇಲ್ ಕಳೆದ 20 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಎಂದು ಪತ್ನಿ ಗೋಳಾಡುತ್ತಿದ್ದಾರೆ.
ಪತಿ ಕಾಣೆಯಾಗಲು ಗುಜರಾತ್ ಆಡಳಿತ ಮಂಡಳಿಯೇ ಕಾರಣ ಎಂದು ಪತ್ನಿ ಕಿಂಜಲ್ ದೂರಿದ್ದಾರೆ. ಕಳೆದ 20 ದಿನಗಳಿಂದ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ವಿಡಿಯೋ ಒಂದನ್ನು ಕಿಂಜಲ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಗುಜರಾತ್ ಸರ್ಕಾರಕ್ಕೆ ಹಾರ್ದಿಕ್ ಪಟೇಲ್ ಜನರ ಬಳಿ ಹೋಗುವುದು, ಅವರ ಬಳಿ ಮಾತನಾಡುವುದು, ಅವರ ಬಗ್ಗೆ ಧ್ವನಿ ಎತ್ತುವುದನ್ನು ಸಹಿಸಲು ಆಗುತ್ತಿಲ್ಲ. ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಹಾರ್ದಿಕ್ ಅವರನ್ನು ಬಂಧಿಸಲು ಮುಂದಾಗಿತ್ತು ಎಂದು ಆರೋಪಿಸಿದ್ದಾರೆ.

2015ರ ದೇಶದ್ರೋಹ ಪ್ರಕರಣದಲ್ಲಿ 2020ರ ಜನವರಿ 18ರಂದು ಹಾರ್ದಿಕ್ ಪಟೇಲ್ ಅವರನ್ನು ಬಂಧಿಸಲಾಗಿದ್ದು ಆ ನಂತರ ಅವರು ಎಲ್ಲಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಪತ್ನಿ ಕಿಂಜಲ್ ಹೇಳಿದ್ದಾರೆ.
2015ರ ಪಾಟಿದಾರ್ ಕೋಟಾ ಆಂದೋಲನದ ವೇಳೆ ಹಾರ್ದಿಕ್ ಪಟೇಲ್ ದೇಶದ್ರೋಹದ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜನವರಿ 18ರಂದು ಬಂಧಿಸಲಾಗಿತ್ತು. ಇನ್ನು ಇಲ್ಲಿಯ ನ್ಯಾಯಾಲಯವು ವಿಚಾರಣೆಯ ಸಮಯದಲ್ಲಿ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ನಾಲ್ಕು ದಿನಗಳ ನಂತರ ಹಾರ್ದಿಕ್ ಪಟೇಲ್ ಗೆ ಜಾಮೀನು ನೀಡಲಾಯಿತು. ಇದಾದ ಬೆನ್ನಲ್ಲೇ ಪಠಾನ್ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ ದಾಖಲಾದ ಇತರ ಎರಡು ಪ್ರಕರಣಗಳ ಸಂಬಂಧ ಮತ್ತೆ ಅವರನ್ನು ಪೊಲೀಸರು ಬಂಧಿಸಿದ್ದರು. ಜನವರಿ 24ರಂದು ಈ ಎರಡು ಪ್ರಕರಣಗಳ ಸಂಬಂಧ ಜಾಮೀನು ಸಿಕ್ಕಿತ್ತು.
ನಂತರ ವಿಚಾರಣೆಗೆ ಹಾಜರಾಗದ ಕಾರಣ ವಿಚಾರಣಾ ನ್ಯಾಯಾಲಯ ಫೆಬ್ರವರಿ 7ರಂದು ಮತ್ತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಇನ್ನು ಪೊಲೀಸರು ಮನೆಯ ಹತ್ತಿರ ಬಂದು ಹಾರ್ದಿಕ್ ಪಟೇಲ್ ಎಲ್ಲಿದ್ದಾನೆ ಎಂದು ನಮ್ಮನ್ನೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
2015ರ ಪಾಟಿದಾರ್ ಕೋಟಾ ಆಂದೋಲನದ ರೂವಾರಿಯಾಗಿದ್ದ ಪಟೇಲ್ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications