ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಕಾಣೆಯಾಗಿ 20 ದಿನಗಳಾದರೂ ಪತ್ತೆ ಇಲ್ಲ
Recommended Video
ಅಹಮದಾಬಾದ್, ಫೆಬ್ರವರಿ 14: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟದ ಕಾಂಗ್ರೆಸ್ ಮುಖಂಡ ಮತ್ತು ಪಾಟಿದಾರ್ ಕೋಟಾ ಆಂದೋನಲದ ಮುಂಚೂಣಿ ನಾಯಕ ಹಾರ್ದಿಕ್ ಪಟೇಲ್ ಕಳೆದ 20 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಎಂದು ಪತ್ನಿ ಗೋಳಾಡುತ್ತಿದ್ದಾರೆ.
ಪತಿ ಕಾಣೆಯಾಗಲು ಗುಜರಾತ್ ಆಡಳಿತ ಮಂಡಳಿಯೇ ಕಾರಣ ಎಂದು ಪತ್ನಿ ಕಿಂಜಲ್ ದೂರಿದ್ದಾರೆ. ಕಳೆದ 20 ದಿನಗಳಿಂದ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ವಿಡಿಯೋ ಒಂದನ್ನು ಕಿಂಜಲ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಗುಜರಾತ್ ಸರ್ಕಾರಕ್ಕೆ ಹಾರ್ದಿಕ್ ಪಟೇಲ್ ಜನರ ಬಳಿ ಹೋಗುವುದು, ಅವರ ಬಳಿ ಮಾತನಾಡುವುದು, ಅವರ ಬಗ್ಗೆ ಧ್ವನಿ ಎತ್ತುವುದನ್ನು ಸಹಿಸಲು ಆಗುತ್ತಿಲ್ಲ. ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಹಾರ್ದಿಕ್ ಅವರನ್ನು ಬಂಧಿಸಲು ಮುಂದಾಗಿತ್ತು ಎಂದು ಆರೋಪಿಸಿದ್ದಾರೆ.

2015ರ ದೇಶದ್ರೋಹ ಪ್ರಕರಣದಲ್ಲಿ 2020ರ ಜನವರಿ 18ರಂದು ಹಾರ್ದಿಕ್ ಪಟೇಲ್ ಅವರನ್ನು ಬಂಧಿಸಲಾಗಿದ್ದು ಆ ನಂತರ ಅವರು ಎಲ್ಲಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಪತ್ನಿ ಕಿಂಜಲ್ ಹೇಳಿದ್ದಾರೆ.
2015ರ ಪಾಟಿದಾರ್ ಕೋಟಾ ಆಂದೋಲನದ ವೇಳೆ ಹಾರ್ದಿಕ್ ಪಟೇಲ್ ದೇಶದ್ರೋಹದ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜನವರಿ 18ರಂದು ಬಂಧಿಸಲಾಗಿತ್ತು. ಇನ್ನು ಇಲ್ಲಿಯ ನ್ಯಾಯಾಲಯವು ವಿಚಾರಣೆಯ ಸಮಯದಲ್ಲಿ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ನಾಲ್ಕು ದಿನಗಳ ನಂತರ ಹಾರ್ದಿಕ್ ಪಟೇಲ್ ಗೆ ಜಾಮೀನು ನೀಡಲಾಯಿತು. ಇದಾದ ಬೆನ್ನಲ್ಲೇ ಪಠಾನ್ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ ದಾಖಲಾದ ಇತರ ಎರಡು ಪ್ರಕರಣಗಳ ಸಂಬಂಧ ಮತ್ತೆ ಅವರನ್ನು ಪೊಲೀಸರು ಬಂಧಿಸಿದ್ದರು. ಜನವರಿ 24ರಂದು ಈ ಎರಡು ಪ್ರಕರಣಗಳ ಸಂಬಂಧ ಜಾಮೀನು ಸಿಕ್ಕಿತ್ತು.
ನಂತರ ವಿಚಾರಣೆಗೆ ಹಾಜರಾಗದ ಕಾರಣ ವಿಚಾರಣಾ ನ್ಯಾಯಾಲಯ ಫೆಬ್ರವರಿ 7ರಂದು ಮತ್ತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಇನ್ನು ಪೊಲೀಸರು ಮನೆಯ ಹತ್ತಿರ ಬಂದು ಹಾರ್ದಿಕ್ ಪಟೇಲ್ ಎಲ್ಲಿದ್ದಾನೆ ಎಂದು ನಮ್ಮನ್ನೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
2015ರ ಪಾಟಿದಾರ್ ಕೋಟಾ ಆಂದೋಲನದ ರೂವಾರಿಯಾಗಿದ್ದ ಪಟೇಲ್ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications