ಕಾಂಗ್ರೆಸ್ಗಿಂತ ಆಪ್, ಬಿಜೆಪಿ ಉತ್ತಮ ಎಂದ ಹಾರ್ದಿಕ್ ಪಟೇಲ್
ಅಹಮದಾಬಾದ್, ಮೇ 25: ವಾರದ ಹಿಂದಷ್ಟೇ ಕಾಂಗ್ರೆಸ್ ತೊರೆದಿದ್ದ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಹಾರ್ದಿಕ್ ಪಟೇಲ್ ನೀಡಿರುವ ಹೇಳಿಕೆ ಅವರು ಬಿಜೆಪಿಗೆ ಸೇರುವುದು ಖಚಿತ ಎನ್ನುವುದಕ್ಕೆ ಸಾಕ್ಷಿ ಎಂಬಂತಿದೆ.
ಕೆಲವೇ ತಿಂಗಳಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ಇದೆ. ಹಾರ್ದಿಕ್ ಪಟೇಲ್ ಮುಂದಿನ ರಾಜಕೀಯ ನಡೆ ಬಗ್ಗೆ ಇನ್ನೂ ಯಾವುದೇ ಅಧಿಕೃತ ನಿರ್ಧಾರ ತೆಗೆದುಕೊಳ್ಳದಿದ್ದರೂ, ಬಿಜೆಪಿ ಅವರ ಮುಂದಿನ ಆಯ್ಕೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.
ಈ ನಡುವೆ ಪತ್ರಕರ್ತರೊಬ್ಬರು ಬಿಜೆಪಿಗೆ ಸೇರುತ್ತೀರಾ? ಎಂದು ಪ್ರಶ್ನಿಸಿದ ವೇಳೆ "ಯಾಕಾಗಬಾರದು?" ಎಂದು ಉತ್ತರ ನೀಡಿದ್ದಾರೆ. ಅಲ್ಲದೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಏಳನೇ ಬಾರಿಗೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳುವ ಮೂಲಕ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.

ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದ ಪಟೇಲ್
"ಚುನಾವಣೆ ಸಂದರ್ಭದಲ್ಲಿ ನಾನು ಪ್ರಮುಖ ಪಾತ್ರ ವಹಿಸುತ್ತೇನೆ" ಎಂದು ಹೇಳಿರುವ ಹಾರ್ದಿಕ್ ಪಟೇಲ್ ಮುಂದಿನ ನಡೆ ಏನೆಂದು ಹೇಳುವುದಾಗಿ ತಿಳಿಸಿದ್ದಾರೆ. ಪಾಟಿದಾರ್ ಸಮುದಾಯದ ನಾಯಕನಾಗಿರುವ ಹಾರ್ದಿಕ್ ಪಟೇಲ್ ಇದುವರೆಗೂ ಮುಂದಿನ ರಾಜಕೀಯ ನಡೆ ಬಗ್ಗೆ ಗುಟ್ಟು ಬಿಟ್ಟು ಕೊಟ್ಟಿಲ್ಲ.
"ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ, ಸ್ನೇಹಿತರು, ಹಿತೈಷಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಜನರಿಗೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇನೆ. ನನ್ನ ಉದ್ದೇಶ ಜನಗಳ ಜೊತೆ ಇರುವುದು ಜನರಿಗೆ ಅನುಕೂಲವಾಗುವಂತೆ ಆಯ್ಕೆಗಳನ್ನು ಮಾಡುವುದು" ಎಂದು ಹೇಳಿದ್ದಾರೆ.

ಯುವಕರಿಗೆ ಕಿರುಕುಳ ನೀಡಬಾರದು
"ಬಿಜೆಪಿಗೆ ಸೇರಲು ಅವರ ವಿರುದ್ಧ2015 ರಲ್ಲಿ ಪಾಟಿದಾರ್ ಆಂದೋಲನದ ಸಮಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಷರತ್ತು ಹಾಕುವುದಿಲ್ಲ. ಆದರೆ ಸಮುದಾಯದ ಯುವಕರ ವಿರುದ್ಧ ಹಾಕಿರುವ ಪ್ರಕರಣ ಹಿಂಪಡೆಯಬೇಕು, ಅವರು ತಮಗಾಗಿ ಬಂದಿಲ್ಲ, ಅವರಿಗೆ ಕಿರುಕುಳ ನೀಡಬಾರದು" ಎಂದಿದ್ದಾರೆ.
ಕಳೆದ ವಾರ ಕಾಂಗ್ರೆಸ್ ತೊರೆದ ನಂತರ ಮಾತನಾಡಿದ್ದ ಹಾರ್ದಿಕ್ ಪಟೇಲ್, "ನಾನು ಬಿಜೆಪಿಯಲ್ಲಿಲ್ಲ, ಬಿಜೆಪಿ ಸೇರಲು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ" ಎಂದು ಹೇಳಿದ್ದರು. ಈ ವರ್ಷ ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲಿಸಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷಕ್ಕೆ ಸೇರುವ ಆಯ್ಕೆಯೂ ಪಟೇಲ್ಗೆ ಇದೆ.

ಕಾಂಗ್ರೆಸ್ಗಿಂದ ಆಪ್ ಉತ್ತಮವಾಗಿದೆ
ಉತ್ತಾರಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ನಿರಾಶಾದಾಯಕ ಫಲಿತಾಂಶ ಬಂದರೂ, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ.
"ಎಎಪಿ ಚುನಾವಣಾ ತಂತ್ರವು ಖಂಡಿತವಾಗಿಯೂ ಕಾಂಗ್ರೆಸ್ಗಿಂತ ಉತ್ತಮವಾಗಿದೆ. ಕಾಂಗ್ರೆಸ್ಗೆ ಈ ವಿಚಾರವನ್ನು ಅರ್ಥ ಮಾಡಿಸಲು ನನಗೆ ಆಗಲಿಲ್ಲ" ಎಂದು ಕಾಂಗ್ರೆಸ್ ವಿರುದ್ಧ ಅಸಹನೆಯನ್ನು ಪಟೇಲ್ ವ್ಯಕ್ತಪಡಿಸಿದ್ದಾರೆ.
"ಚುನಾವಣೆಗೂ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರುವುದು, ಗುಜರಾತ್ ರಾಜ್ಯದ ಜನರೊಂದಿಗೆ ಕಾಂಗ್ರೆಸ್ ಸಂಪರ್ಕ ಸಾಧಿಸುವ ಚುನಾವಣಾ ತಂತ್ರದಲ್ಲಿ ತಪ್ಪು ಲೆಕ್ಕಾಚಾರಗಳಿಂದ ಗುಜರಾತ್ನಲ್ಲಿ ಕಾಂಗ್ರೆಸ್ ಸೋತಿತು" ಎಂದು ಹೇಳಿದ್ದಾರೆ.

ಕಾಂಗ್ರೆಸ್ನಲ್ಲಿ ಸಮರ್ಥ ನಾಯಕತ್ವ ಇಲ್ಲ
ಪಕ್ಷ ತೊರೆದ ವೇಳೆಯೂ ಈ ವಿಚಾರಗಳನ್ನು ಪ್ರಸ್ತಾಪಿಸಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಹಿರಿಯ ನಾಯಕರ ವರ್ತನಗೆ ಆಕ್ರೋಶ ವ್ಯಕ್ತಪಡಿಸಿದ್ದರು. "ಕಾಂಗ್ರೆಸ್ಗೆ ಸ್ಪಷ್ಟವಾದ ಮಾರ್ಗಸೂಚಿ ಇರಲಿಲ್ಲ. ಗುಜರಾತ್ ಮತ್ತು ಗುಜರಾತಿ ಜನರನ್ನು ದ್ವೇಷಿಸುವ ರೀತಿ ವರ್ತಿಸುತ್ತಿದೆ" ಎಂದು ಹೇಳಿದ್ದರು. "ದೇಶದಲ್ಲಿ ಸವಾಲಿನ ಪರಿಸ್ಥಿತಿ ಇದ್ದಾಗ ಕಾಂಗ್ರೆಸ್ಗೆ ಉತ್ತಮ ನಾಯಕತ್ವದ ಅಗತ್ಯವಿದ್ದಾಗ ಕಾಂಗ್ರೆಸ್ ನಾಯಕರು ವಿದೇಶದಲ್ಲಿ ಆನಂದಿಸುತ್ತಿದ್ದರು" ಎಂದು ಹೇಳಿದ್ದಾರೆ
ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಪ್ ಚುನಾವಣೆ ಭವಿಷ್ಯದ ಬಗ್ಗೆ ಕೇಳಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಆದರೆ ಮುಂದಿನ ಚುನಾವಣೆಯಲ್ಲಿ ಗುಜರಾತ್ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications