ಗುರುವಾರ ಕಮಲದ ಕೈ ಹಿಡಿಯಲಿರುವ ಹಾರ್ದಿಕ್ ಪಟೇಲ್: ಮೂಲಗಳು
ಅಹಮದಾಬಾದ್ ಮೇ 31: ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಗುರುವಾರ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2019 ರಲ್ಲಿ ಕಾಂಗ್ರೆಸ್ನೊಂದಿಗೆ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದ 28 ವರ್ಷದ ಗುಜರಾತ್ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರವನ್ನು ನೀಡಿ ಮೇ 18 ರಂದು ಪಕ್ಷವನ್ನು ತೊರೆದರು.
ಕಾಂಗ್ರೆಸ್ನ ಹಿರಿಯ ನಾಯಕತ್ವದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಹಾರ್ದಿಕ್ ಪಟೇಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡಿದ್ದಾರೆ. "ಗುಜರಾತ್ ಕಾಂಗ್ರೆಸ್ನ ನಾಯಕರು ರಾಜ್ಯದ ಸಮಸ್ಯೆಗಳಿಂದ ದೂರವಿದ್ದಾರೆ. ಆದರೆ ದೆಹಲಿಯಿಂದ ಬಂದಿರುವ ನಾಯಕರಿಗೆ ಚಿಕನ್ ಸ್ಯಾಂಡ್ವಿಚ್ ಅನ್ನು ನೀಡಲು ಹೆಚ್ಚು ಗಮನಹರಿಸಿದ್ದಾರೆ. ಜೊತೆಗೆ ಅದನ್ನು ಅವರಿಗೆ ಸಮಯಕ್ಕೆ ಸರಿಯಾಗಿ ತಲುಪಿಸಲಾಗಿದೆ" ಎಂದು ಬರೆದಿದ್ದಾರೆ. ಪತ್ರದಲ್ಲಿ ಕಾಂಗ್ರೆಸ್ ಅನ್ನು ಸರಿಯಾದ ದಿಕ್ಕಿನಲ್ಲಿ ನಡೆಸಲು ಹಲವಾರು ಪ್ರಯತ್ನಗಳ ಹೊರತಾಗಿಯೂ, "ಪಕ್ಷವು ನಿರಂತರವಾಗಿ ದೇಶ ಮತ್ತು ಸಮಾಜದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ" ಎಂದು ಅವರು ಹೇಳಿದ್ದಾರೆ.

'ಕಾಂಗ್ರೆಸ್ ಹಿರಿಯ ನಾಯಕತ್ವಕ್ಕೆ ಗಂಭೀರತೆ ಇಲ್ಲ'
ಪಕ್ಷದ ಹಿರಿಯ ನಾಯಕತ್ವಕ್ಕೆ ಗಂಭೀರತೆ ಇಲ್ಲ ಎಂದು ಪಾಟಿದಾರ್ ನಾಯಕ ಆರೋಪಿಸಿದ್ದಾರೆ. "ನಾನು ಹಿರಿಯ ನಾಯಕತ್ವವನ್ನು ಭೇಟಿಯಾದಾಗಲೆಲ್ಲ, ಗುಜರಾತ್ ಜನರ ಸಮಸ್ಯೆಗಳನ್ನು ಕೇಳಲು ನಾಯಕರು ನಿಜವಾಗಿಯೂ ಆಸಕ್ತಿ ಹೊಂದಿಲ್ಲ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಬದಲಿಗೆ ಅವರು ತಮ್ಮ ಮೊಬೈಲ್ನಲ್ಲಿ ಯಾವ ಸಂದೇಶಗಳನ್ನು ಸ್ವೀಕರಿಸಿದ್ದಾರೆಂಬುದನ್ನು ನೋಡಲು ಹೆಚ್ಚು ತಲ್ಲೀನರಾಗಿದ್ದಾರೆ..." ಎಂದಿದ್ದಾರೆ.
|
'ಕೈ' ನಾಯಕರನ್ನು ದೂರಿದ ಹಾರ್ದಿಕ್
ಹಾರ್ದಿಕ್ ಪಟೇಲ್ ಅವರು ಬಿಜೆಪಿಗೆ ಸೇರುವುದನ್ನು ಅಧಿಕೃತವಾಗಿ ನಿರಾಕರಿಸುತ್ತಿದ್ದಾರೆ, ಆದರೆ ಬಿಜೆಪಿ ಪಕ್ಷ ಮತ್ತು ಅದರ ನಾಯಕತ್ವದ ಬಗ್ಗೆ ಅವರ ಹೊಗಳಿಕೆಯು ವಿಭಿನ್ನ ಕಥೆಯನ್ನೇ ಹೇಳುತ್ತಿದೆ.
ಕಾಂಗ್ರೆಸ್ ತೊರೆದ ನಂತರ, ಪಾಟೀಲ್ ಅವರು 'ನಾನು ಇನ್ನೂ ಬಿಜೆಪಿಯಲ್ಲಿಲ್ಲ' ಎಂದು ಊಹಾಪೋಹಗಳಿಗೆ ತೆರೆ ಎಳೆದರು ಮತ್ತು ಬಿಜೆಪಿ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಸೇರುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ. ಆದರೆ ಅವರ ರಾಜೀನಾಮೆ ನೀಡಿದಾಗ ಕಾಂಗ್ರೆಸ್ನಲ್ಲಿ ಮೂರು ವರ್ಷಗಳನ್ನು ವ್ಯರ್ಥ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದ ಹಾರ್ದಿಕ್
"ನಾನು ಇನ್ನೂ ಬಿಜೆಪಿಗೆ ಹೋಗಿಲ್ಲ ಮತ್ತು ಹೋಗಲು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಹಾರ್ದಿಕ್ ಪಟೇಲ್ ಸುದ್ದಿಗಾರರಿಗೆ ತಿಳಿಸಿದರು. ಆದರೆ ಅದೇ ಸಮಯದಲ್ಲಿ ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಅಯೋಧ್ಯೆ ತೀರ್ಪು ಮತ್ತು ರದ್ದತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದರು.

ಗುರುವಾರ ಬಿಜೆಪಿ ಸೇರಲಿದ್ದಾರೆ ಹಾರ್ದಿಕ್?
"ಬಿಜೆಪಿ ಅಥವಾ ಎಎಪಿ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಬಗ್ಗೆ ನಾನು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ, ನಾನು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದು ಜನರ ಹಿತಾಸಕ್ತಿಗಾಗಿ" ಎಂದು ಅವರು ಹೇಳಿದ್ದಾರೆ. ಹಾರ್ದಿಕ್ ಪಟೇಲ್ ಶೀಘ್ರದಲ್ಲೇ ಪಕ್ಷ ಸೇರಲಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ಎರಡು ತಿಂಗಳಿನಿಂದ ಬಿಜೆಪಿ ಜತೆ ಅವರು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications