ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಣೆ: ಹೆಂಡತಿ ಅಳಲು
ಅಹ್ಮದಾಬಾದ್, ಫೆಬ್ರವರಿ 10: ಕಾಂಗ್ರೆಸ್ ನಾಯಕ, ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರು ಕಾಣೆ ಆಗಿದ್ದಾರೆ, ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ.
'ಜನವರಿ 18 ರಿಂದಲೂ ಪತಿ ಹಾರ್ದಿಕ್ ಪಟೇಲ್ ಸಂಪರ್ಕಕ್ಕೆ ಸಿಕ್ಕಿಲ್ಲ, ಅವರನ್ನು ಹುಡುಕಿಕೊಂಡು ಪೊಲೀಸರು ಮನೆಗೆ ಬರುತ್ತಿದ್ದಾರೆ. ಅವರ ಬಗ್ಗೆ ಮಾಹಿತಿ ಕೇಳುತ್ತಾರೆ ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ' ಎಂದು ಹಾರ್ದಿಕ್ ಪಟೇಲ್ ಪತ್ನಿ ಕಿಂಜಲ್ ಅವರು ಪಾಟೀದಾರ್ ಸಮುದಾಯ ಸಭೆಯಲ್ಲಿ ಮಾತನಾಡಿ ಹೇಳಿದ್ದಾರೆ.
ಹಾರ್ದಿಕ್ ಪಟೇಲ್ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಜನವರಿ 18 ರಂದು ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅದೇ ದಿನ ಮತ್ತೆ ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರನ್ನು ಬಂಧಿಸಿದ್ದರು. ಮತ್ತೆ ಆ ಪ್ರಕರಣದಲ್ಲೂ ಜಾಮೀನಿನ ಮೇಲೆ ಹೊರಬಂದರು ಅಂದಿನಿಂದ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ನಂತರ ಫೆಬ್ರವರಿ 7 ರಂದು ನ್ಯಾಯಾಲಯದ ವಿಚಾರಣೆಗೆ ಗೈರಾದ ಕಾರಣ ಹಾರ್ದಿಕ್ ಪಟೇಲ್ ಮೇಲೆ ವಾರೆಂಟ್ ಹೊರಡಿಸಲಾಗಿದ್ದು, ಪೊಲೀಸರು ಹಾರ್ದಿಕ್ ಗಾಗಿ ಹುಡುಕಾಟ ನಡೆಸಿದ್ದಾರೆ. ಜನವರಿ 24 ರಂದು ಕೊನೆ ಬಾರಿಗೆ ಜಾಮೀನಿನ ಮೇಲೆ ಹೊರಗೆ ಬಂದಿದ್ದರು ಅದಾದ ನಂತರ ಅವರು ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.
2015 ರಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗೆ ಒತ್ತಾಯಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಮುದಾಯದವರ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಪಾಟೀದಾರ್ ಸಮುದಾಯವು ಪ್ರತಿಭಟನೆ ನಡೆಸುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications