'ಈ ವೇಗದಲ್ಲಿ ಎಲ್ಲಾ ಜನರಿಗೆ ಲಸಿಕೆ ಹಾಕಲು 5 ವರ್ಷ ಬೇಕು'- ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಅಹಮದಾಬಾದ್, ಮೇ 26: ಗುಜರಾತ್ ಹೈಕೋರ್ಟ್ ಬುಧವಾರ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನರಿಗೆ ಕೊರೊನಾ ಲಸಿಕೆ ಹಾಕಿಸಲು ಎಷ್ಟು ಸಮಯದ ಯೋಜನೆಯನ್ನು ಅಂದಾಜಿಸಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್, "ಈ ವೇಗದಲ್ಲಿ ಎಲ್ಲಾ ಜನರಿಗೆ ಲಸಿಕೆ ಹಾಕಲು 5 ವರ್ಷ ಬೇಕಾಗುತ್ತದೆ" ಎಂದು ಹೇಳಿದೆ.
ಕೋವಿಡ್ ನಿರ್ವಹಣೆಯ ಸಂದರ್ಭದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಸಲ್ಲಿಕೆಯಾಗಿದ್ದ ಸು ಮೋಟೋ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ತ್ರಿವೇದಿ ಮತ್ತು ಭಾರ್ಗವ್ ಡಿರನ್ನು ಒಳಗೊಂಡ ದ್ವಿ ಸದಸ್ಯ ನ್ಯಾಯಪೀಠವು, ಸರ್ಕಾರ ಕೊರೊನಾ ಅಭಿಯಾನದ ಅವಧಿಯನ್ನು ಪ್ರಶ್ನಿಸಿದೆ.
"ಮೇ ತಿಂಗಳಲ್ಲಿ ರಾಜ್ಯಕ್ಕೆ 16 ಲಕ್ಷ ಲಸಿಕೆ ದೊರೆತಿದೆ. ಜೂನ್ನಲ್ಲಿ 10.7 ಲಕ್ಷ ಲಸಿಕೆ ದೊರೆಯಲಿದೆ" ಎಂದು ಈ ಸಂದರ್ಭ ರಾಜ್ಯ ಸರ್ಕಾರದ ಪರ ವಕೀಲ ಕಮಲ್ ತ್ರಿವೇದಿ ನ್ಯಾಯಾಲಯಕ್ಕೆ ತಿಳಿಸಿದ್ದು ನ್ಯಾಯಪೀಠವು, "ಇದರರ್ಥ ನೀವು ಜನರಿಗೆ ಲಸಿಕೆ ಹಾಕಲು 5 ವರ್ಷಗಳ ಯೋಜನೆ ಹೊಂದಿದ್ದೀರಿ ಎಂದಾಯಿತು" ಎಂದು ಟೀಕಿಸಿದೆ.

ಈ ಸಂದರ್ಭದಲ್ಲಿ ಸರ್ಕಾರ ಪರ ವಕೀಲ, "ಈ ಸಮಸ್ಯೆ ದೇಶದಲ್ಲಿ ಲಸಿಕೆ ಉತ್ಪಾದನೆಯ ವಿಚಾರದಲ್ಲಿ ಉಂಟಾಗಿದೆ. ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ 50 ಪ್ರತಿಶತಕ್ಕಿಂತ ಅಧಿಕ ಯಾವುದೇ ಒಂದು ರಾಜ್ಯಕ್ಕೆ ನೀಡಬಾರದು ಎಂದು ಭಾರತ ಸರ್ಕಾರ ಆದೇಶಿಸಿದೆ" ಎಂದು ಹೇಳಿದ್ದಾರೆ.
"ಜಾಗತಿಕ ಟೆಂಡರ್ ಅನ್ನು ಸರ್ಕಾರ ಕರೆಯಲು ಏನು ಸಮಸ್ಯೆಯಿದೆ? ರಾಜ್ಯ ಏಕೆ ಪ್ರಯತ್ನ ಮಾಡಬಾರದು?" ಎಂದು ಈ ವೇಳೆ ನ್ಯಾಯಾಲಯವು ಕೇಳಿದೆ. ಹಾಗೆಯೇ "ಫೈಜರ್ ಮತ್ತು ಮಾಡೆರ್ನಾ ಲಸಿಕೆಯ ಬಗ್ಗೆ ನಾವು ಯಾವುದೇ ಮಾತನಾಡುವುದಿಲ್ಲ. ಅದು ಕೇಂದ್ರ ಸರ್ಕಾರ ಮಾಡಬೇಕಾದ ಕಾರ್ಯ" ಎಂದು ಕೂಡಾ ಇದೇ ಸಂದರ್ಭದಲ್ಲಿ ನ್ಯಾಯಪೀಠ ಹೇಳಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications