'ಈ ವೇಗದಲ್ಲಿ ಎಲ್ಲಾ ಜನರಿಗೆ ಲಸಿಕೆ ಹಾಕಲು 5 ವರ್ಷ ಬೇಕು'- ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಅಹಮದಾಬಾದ್, ಮೇ 26: ಗುಜರಾತ್ ಹೈಕೋರ್ಟ್ ಬುಧವಾರ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನರಿಗೆ ಕೊರೊನಾ ಲಸಿಕೆ ಹಾಕಿಸಲು ಎಷ್ಟು ಸಮಯದ ಯೋಜನೆಯನ್ನು ಅಂದಾಜಿಸಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್, "ಈ ವೇಗದಲ್ಲಿ ಎಲ್ಲಾ ಜನರಿಗೆ ಲಸಿಕೆ ಹಾಕಲು 5 ವರ್ಷ ಬೇಕಾಗುತ್ತದೆ" ಎಂದು ಹೇಳಿದೆ.
ಕೋವಿಡ್ ನಿರ್ವಹಣೆಯ ಸಂದರ್ಭದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಸಲ್ಲಿಕೆಯಾಗಿದ್ದ ಸು ಮೋಟೋ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ತ್ರಿವೇದಿ ಮತ್ತು ಭಾರ್ಗವ್ ಡಿರನ್ನು ಒಳಗೊಂಡ ದ್ವಿ ಸದಸ್ಯ ನ್ಯಾಯಪೀಠವು, ಸರ್ಕಾರ ಕೊರೊನಾ ಅಭಿಯಾನದ ಅವಧಿಯನ್ನು ಪ್ರಶ್ನಿಸಿದೆ.
"ಮೇ ತಿಂಗಳಲ್ಲಿ ರಾಜ್ಯಕ್ಕೆ 16 ಲಕ್ಷ ಲಸಿಕೆ ದೊರೆತಿದೆ. ಜೂನ್ನಲ್ಲಿ 10.7 ಲಕ್ಷ ಲಸಿಕೆ ದೊರೆಯಲಿದೆ" ಎಂದು ಈ ಸಂದರ್ಭ ರಾಜ್ಯ ಸರ್ಕಾರದ ಪರ ವಕೀಲ ಕಮಲ್ ತ್ರಿವೇದಿ ನ್ಯಾಯಾಲಯಕ್ಕೆ ತಿಳಿಸಿದ್ದು ನ್ಯಾಯಪೀಠವು, "ಇದರರ್ಥ ನೀವು ಜನರಿಗೆ ಲಸಿಕೆ ಹಾಕಲು 5 ವರ್ಷಗಳ ಯೋಜನೆ ಹೊಂದಿದ್ದೀರಿ ಎಂದಾಯಿತು" ಎಂದು ಟೀಕಿಸಿದೆ.

ಈ ಸಂದರ್ಭದಲ್ಲಿ ಸರ್ಕಾರ ಪರ ವಕೀಲ, "ಈ ಸಮಸ್ಯೆ ದೇಶದಲ್ಲಿ ಲಸಿಕೆ ಉತ್ಪಾದನೆಯ ವಿಚಾರದಲ್ಲಿ ಉಂಟಾಗಿದೆ. ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ 50 ಪ್ರತಿಶತಕ್ಕಿಂತ ಅಧಿಕ ಯಾವುದೇ ಒಂದು ರಾಜ್ಯಕ್ಕೆ ನೀಡಬಾರದು ಎಂದು ಭಾರತ ಸರ್ಕಾರ ಆದೇಶಿಸಿದೆ" ಎಂದು ಹೇಳಿದ್ದಾರೆ.
"ಜಾಗತಿಕ ಟೆಂಡರ್ ಅನ್ನು ಸರ್ಕಾರ ಕರೆಯಲು ಏನು ಸಮಸ್ಯೆಯಿದೆ? ರಾಜ್ಯ ಏಕೆ ಪ್ರಯತ್ನ ಮಾಡಬಾರದು?" ಎಂದು ಈ ವೇಳೆ ನ್ಯಾಯಾಲಯವು ಕೇಳಿದೆ. ಹಾಗೆಯೇ "ಫೈಜರ್ ಮತ್ತು ಮಾಡೆರ್ನಾ ಲಸಿಕೆಯ ಬಗ್ಗೆ ನಾವು ಯಾವುದೇ ಮಾತನಾಡುವುದಿಲ್ಲ. ಅದು ಕೇಂದ್ರ ಸರ್ಕಾರ ಮಾಡಬೇಕಾದ ಕಾರ್ಯ" ಎಂದು ಕೂಡಾ ಇದೇ ಸಂದರ್ಭದಲ್ಲಿ ನ್ಯಾಯಪೀಠ ಹೇಳಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications