ಕೊರೊನಾ: ಧಾರ್ಮಿಕ ಕೇಂದ್ರದಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಆಡಳಿತ ಮಂಡಳಿ
ವಡೋದರ, ಏಪ್ರಿಲ್ 17: ಕೊರೊನಾ ಎರಡನೇ ಅಲೆಯ ಆರ್ಭಟಕ್ಕೆ ಎಲ್ಲಡೆ ಆಕ್ಸಿಜನ್, ಲಸಿಕೆ, ಹಾಸಿಗೆ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳು ದೇವರು ಮೆಚ್ಚುವ ಕೆಲಸವನ್ನು ಮಾಡುತ್ತಿದೆ.
ನಗರದ ಐತಿಹಾಸಿಕ ಸ್ವಾಮಿ ನಾರಾಯಣ ದೇವಸ್ಥಾನ ಮತ್ತು ದರೂಲ್ ಉಲ್ಲಂ ತಂದಲ್ಜಾ ಮಸೀದಿಯ ಆಡಳಿತ ಮಂಡಳಿ, ತಮ್ಮತಮ್ಮ ಧಾರ್ಮಿಕ ಕೇಂದ್ರದ ಜಾಗದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅನುಮತಿ ನೀಡಿದೆ.
ನಗರದ ಶಾಸ್ತ್ರಿ ಯಗ್ನಪುರುಷದಾಸ ರಸ್ತೆ, ಅತ್ಲಾಧಾರಲ್ಲಿರುವ ಬಾಪ್ಸ್ ಸ್ವಾಮಿ ನಾರಾಯಣ ದೇವಸ್ಥಾನದ ಆವರಣದ ಮೂರುವರೆ ಎಕರೆ ಪ್ರದೇಶದಲ್ಲಿ ಮುನ್ನೂರು ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.

"ಇಲ್ಲಿ ಅಡ್ಮಿಟ್ ಆಗಿರುವ ರೋಗಿಗಳಿಗೆ ವೈದ್ಯಕೇತರ ಸೌಲಭ್ಯಗಳನ್ನು ಒದಗಿಸಲಾಗಿದೆ. ಆಕ್ಸಿಜನ್, ವೆಂಟಿಲೇಟರ್ ನಾವೇ ನೀಡುತ್ತಿದ್ದೇವೆ. ಇನ್ನು, ಐಸಿಯು ರೂಮಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಜೊತೆಗೆ, ಫ್ಯಾನ್ ಮತ್ತು ಎಸಿ ವ್ಯವಸ್ಥೆಯನ್ನು ಒದಗಿಸಲಾಗಿದೆ. ಇನ್ನೂ, ಇನ್ನೂರು ಹಾಸಿಗೆ ಹಾಕಲು ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ"ಎಂದು ದೇವಾಲಯದ ಆಡಳಿತ ಮಂಡಳಿಯ ವತ್ಸಲ ಸ್ವಾಮಿ ಹೇಳಿದ್ದಾರೆ.
ಇದರ ಜೊತೆಗೆ ಮೆಡಿಕಲ್ ಶಾಪ್, ಶೌಚಾಲಯ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಪ್ರತ್ಯೇಕ ರೂಮಿನ ವ್ಯವಸ್ಥೆಯನ್ನು ಸ್ವಾಮಿ ನಾರಾಯಣ ದೇವಸ್ಥಾನದ ಆವರಣದಲ್ಲಿ ಮಾಡಲಾಗಿದೆ.
ಇನ್ನು, ನಗರದ ಅತಿದೊಡ್ಡ ಮಸೀದಿಯಾಗಿರುವ ದರೂಲ್ ಉಲ್ಲಂನಲ್ಲಿ 142 ಬೆಡ್ ಸಾಮರ್ಥ್ಯದ ಕೋವಿಡ್ ಸೆಂಟರ್ ತೆರೆಯಲು ಮಸೀದಿಯ ಆಡಳಿತ ಮಂಡಳಿ ಅನುಮತಿ ನೀಡಿದೆ.
"ಕೊರೊನಾ ಸಮಸ್ಯೆ ತೀವ್ರವಾಗುತ್ತಿದೆ, ಜನರು ಬೆಡ್ ಸಿಗದೇ ಒದ್ದಾಡುತ್ತಿದ್ದಾರೆ. ಹಾಗಾಗಿ, ದರೂಲ್ ಮಸೀದಿಯವರ ಬಳಿ ಮಾತನಾಡಿದೆ. ಸರಕಾರ ಅನುಮತಿ ನೀಡಿದರೆ, ಇಲ್ಲಿ ಮುನ್ನೂರು ಹಾಸಿಗೆಯ ಕೋವಿಡ್ ಸೆಂಟರ್ ತೆರೆಯಲಾಗುವುದು"ಎಂದು ಸಾಮಾಜಿಕ ಕಾರ್ಯಕರ್ತ ಸಗೀರ್ ಅನ್ಸಾರಿ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications