ಅಹಮದಾಬಾದ್: ಬ್ಲ್ಯಾಕ್ ಫಂಗಸ್ ಸೋಂಕು ಗಣನೀಯ ಹೆಚ್ಚಳ
ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ - ಅಹಮದಾಬಾದ್ನಲ್ಲಿ 481 ರೋಗಿಗಳು ಆಸ್ಪತ್ರೆಗೆ ದಾಖಲು
ಅಹಮದಾಬಾದ್, ಮೇ 20: ದೇಶದಲ್ಲಿ ಈಗ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ಕೂಡಾ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಗುಜರಾತ್ನ ಅಹಮದಾಬಾದ್ನಲ್ಲೇ 481 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಶದಲ್ಲಿ ಈಗಾಗಲೇ ಕೊರೊನಾ ಸೋಂಕು ಆರೋಗ್ಯ ವಲಯ ಮಾತ್ರವಲ್ಲದೇ ಎಲ್ಲಾ ವಲಯಗಳಲ್ಲೂ ಭಾರೀ ಪ್ರಮಾಣದ ಪರಿಣಾಮ ಉಂಟು ಮಾಡಿದೆ. ಈ ನಡುವೆ ಈಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ದೃಢಪಡುತ್ತಿರುವುದು ಕೂಡಾ ಅಧಿಕವಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರವು ಈ ಸೋಂಕನ್ನು ಸಾಂಕ್ರಾಮಿಕ ಎಂದು ಘೋಷಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

4 ರಾಜ್ಯಗಳಲ್ಲಿ ಈ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸುಮಾರು 90 ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ಸೋಂಕು ಪ್ರಮಾಣ ಉಲ್ಬಣವಾಗಿದ್ದು 481 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೋಗಿಗಳ ಸೇವೆಗೆ 24x7 ಹಾಜರಿರುವಂತೆ ವೈದ್ಯರಿಗೆ ಆದೇಶ ಹೊರಡಿಸಲಾಗಿದೆ.
ಇನ್ನು ಈಗಾಗಲೇ 132 ರೋಗಿಗಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚಿಕಿತ್ಸೆ ಪಡೆದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಳಸಲಾಗುವ ಆಂಟಿ ಫಂಗಲ್ ಔಷಧಿ ಆಂಫೊಟೆರಿಸಿನ್-ಬಿ ಯ ಕೊರತೆಯು ಗುಜರಾತ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಬ್ಲ್ಯಾಕ್ ಫಂಗಸ್ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿರುವ ಕೇಂದ್ರ ಸರ್ಕಾರವು, ಈ ಬಗ್ಗೆ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಕಳುಹಿಸಿದೆ. ಈ ಪತ್ರದಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ನ್ಯೂಕೋರ್ಮಿಕೋಸಿಸ್ ರೋಗವನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸೂಚಿಸಬಹುದಾದ ಕಾಯಿಲೆ ಎಂದು ತಿಳಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications