ಅಹಮದಾಬಾದ್: ಬ್ಲ್ಯಾಕ್ ಫಂಗಸ್ ಸೋಂಕು ಗಣನೀಯ ಹೆಚ್ಚಳ
ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ - ಅಹಮದಾಬಾದ್ನಲ್ಲಿ 481 ರೋಗಿಗಳು ಆಸ್ಪತ್ರೆಗೆ ದಾಖಲು
ಅಹಮದಾಬಾದ್, ಮೇ 20: ದೇಶದಲ್ಲಿ ಈಗ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ಕೂಡಾ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಗುಜರಾತ್ನ ಅಹಮದಾಬಾದ್ನಲ್ಲೇ 481 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಶದಲ್ಲಿ ಈಗಾಗಲೇ ಕೊರೊನಾ ಸೋಂಕು ಆರೋಗ್ಯ ವಲಯ ಮಾತ್ರವಲ್ಲದೇ ಎಲ್ಲಾ ವಲಯಗಳಲ್ಲೂ ಭಾರೀ ಪ್ರಮಾಣದ ಪರಿಣಾಮ ಉಂಟು ಮಾಡಿದೆ. ಈ ನಡುವೆ ಈಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ದೃಢಪಡುತ್ತಿರುವುದು ಕೂಡಾ ಅಧಿಕವಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರವು ಈ ಸೋಂಕನ್ನು ಸಾಂಕ್ರಾಮಿಕ ಎಂದು ಘೋಷಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

4 ರಾಜ್ಯಗಳಲ್ಲಿ ಈ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸುಮಾರು 90 ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ಸೋಂಕು ಪ್ರಮಾಣ ಉಲ್ಬಣವಾಗಿದ್ದು 481 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೋಗಿಗಳ ಸೇವೆಗೆ 24x7 ಹಾಜರಿರುವಂತೆ ವೈದ್ಯರಿಗೆ ಆದೇಶ ಹೊರಡಿಸಲಾಗಿದೆ.
ಇನ್ನು ಈಗಾಗಲೇ 132 ರೋಗಿಗಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚಿಕಿತ್ಸೆ ಪಡೆದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಳಸಲಾಗುವ ಆಂಟಿ ಫಂಗಲ್ ಔಷಧಿ ಆಂಫೊಟೆರಿಸಿನ್-ಬಿ ಯ ಕೊರತೆಯು ಗುಜರಾತ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಬ್ಲ್ಯಾಕ್ ಫಂಗಸ್ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿರುವ ಕೇಂದ್ರ ಸರ್ಕಾರವು, ಈ ಬಗ್ಗೆ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಕಳುಹಿಸಿದೆ. ಈ ಪತ್ರದಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ನ್ಯೂಕೋರ್ಮಿಕೋಸಿಸ್ ರೋಗವನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸೂಚಿಸಬಹುದಾದ ಕಾಯಿಲೆ ಎಂದು ತಿಳಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications