ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣ: ಮೂವರು ಪೊಲೀಸರು ಆರೋಪಮುಕ್ತ
ಅಹಮದಾಬಾದ್, ಮಾರ್ಚ್ 31: ಇಶ್ರತ್ ಜಹಾನ್, ಜಾವೇದ್ ಶೇಖ್ ಅಲಿಯಾಸ್ ಪ್ರಾಣೇಶ್ ಪಿಳ್ಳೈ ಮತ್ತು ಇತರೆ ಇಬ್ಬರನ್ನು 2004ರ ಜೂನ್ ತಿಂಗಳಲ್ಲಿ ನಕಲಿ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮೂವರು ಪೊಲೀಸ್ ಅಧಿಕಾರಿಗಳನ್ನು ಅಹಮದಾಬಾದ್ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.
ಐಪಿಎಸ್ ಅಧಿಕಾರಿ ಜಿಎಲ್ ಸಿಂಘಾಲ್, ನಿವೃತ್ತ ಪೊಲೀಸ್ ಅಧಿಕಾರಿ ತರುಣ್ ಬಾರೋಟ್ ಮತ್ತು ಅನಜು ಚೌಧರಿ ಅವರು ಶನಿವಾರ ಬಿಡುಗಡೆ ಅರ್ಜಿಗಳನ್ನು ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಗುಜರಾತ್ ಸರ್ಕಾರವು ಈ ಅಧಿಕಾರಿಗಳನ್ನು ವಿಚಾರಣೆ ನಡೆಸಲು ಸಿಬಿಐಗೆ ಅನುಮತಿ ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಬುಧವಾರ ವಿಚಾರಣೆಯನ್ನು ಕೈಬಿಟ್ಟಿದೆ. ಇದರ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸದೆ ಇದ್ದರೆ ವಿಚಾರಣೆ ಅಂತ್ಯಗೊಳ್ಳಲಿದೆ.
ಈ ಹಿಂದೆ ನಾಲ್ವರು ಅಧಿಕಾರಿಗಳ ಬಿಡುಗಡೆಯ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿರಲಿಲ್ಲ. ಹೀಗಾಗಿ ಕೊನೆಯ ಮೂರು ಅಧಿಕಾರಿಗಳು ಕೂಡ ದೋಷಮುಕ್ತಗೊಳಿಸುವಂತೆ ಅರ್ಜಿ ಸಲ್ಲಿಸಲು ಸೂಕ್ತ ಬುನಾದಿ ಸಿಕ್ಕಂತಾಗಿತ್ತು. ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ಇಶ್ರತ್ ಜಹಾನ್ ಮತ್ತು ಇತರೆ ನಾಲ್ವರು ಭಯೋತ್ಪಾದಕರಲ್ಲ ಎನ್ನುವುದನ್ನು ಸಾಬೀತುಪಡಿಸಲು ಮೇಲ್ನೋಟಕ್ಕೆ ಯಾವುದೇ ದಾಖಲೆ ಕಂಡುಬಂದಿಲ್ಲ ಎಂದು ಸಿಬಿಯ ನ್ಯಾಯಾಧೀಶ ವಿಆರ್ ರಾವಲ್ ಹೇಳಿದ್ದಾರೆ.

ಪಾಕಿಸ್ತಾನಿ ರಾಷ್ಟ್ರೀಯರು ಎನ್ನಲಾಗಿದ್ದ ಇಶ್ರತ್ ಜಹಾನ್, ಪ್ರಾಣೇಶ್ ಪಿಳ್ಳೈ, ಅಮ್ಜದ್ ಅಲಿ ರಾಣಾ ಮತ್ತು ಜೀಶಾನ್ ಜೋಹರ್ ಅವರನ್ನು 2004ರ ಜೂನ್ 15ರಂದು ಗುಜರಾತ್ನ ಅಹಮದಾಬಾದ್ನಲ್ಲಿ ಅಪರಾಧ ದಳವು ಹತ್ಯೆ ಮಾಡಿತ್ತು. ಈ ನಾಲ್ವರು ಲಷ್ಕರ್ ಎ ತಯಬಾ ಸದಸ್ಯರಾಗಿದ್ದು, ಆಗಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಡಿಸಿಬಿ ಆರೋಪಿಸಿತ್ತು.
2013ರಲ್ಲಿ ಆರೋಪಪಟ್ಟಿ ಸಲ್ಲಿಸಿದ್ದ ಸಿಬಿಐ, ಐವರು ಪೊಲೀಸ್ ಅಧಿಕಾರಿಗಳಾದ ಪಿಪಿ ಪಾಂಡೆ, ವನ್ಸರಾ, ಎನ್ಕೆ ಅಮಿನ್, ಜೆಜಿ ಪಾರ್ಮರ್, ಸಿಂಘಾಲ್, ಬಾರೋಟ್ ಮತ್ತು ಚೌಧರಿ ಅವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications