ಅಮಿತ್ ಶಾ ನೀಡಿದ ಸಾಕ್ಷಿಗೆ ಬೆಲೆ, ಮಾಯಾ ನಿರ್ದೋಷಿ!
ಅಹಮದಾಬಾದ್, ಏಪ್ರಿಲ್ 20: ನರೋಡಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ, ನರೇಂದ್ರ ಮೋದಿ ಅವರ ಒಂದು ಕಾಲದ ಆಪ್ತ ಸಚಿವೆ ಮಾಯಾ ಕೊಡ್ನಾನಿ ಅವರಿಗೆ ಗುಜರಾತ್ ಹೈಕೋರ್ಟಿನಿಂದ ಶುಕ್ರವಾರದಂದು ಶುಭ ಸುದ್ದಿ ಸಿಕ್ಕಿದೆ. ಈ ಪ್ರಕರಣದಲ್ಲಿ ಮಾಯಾ ನಿರ್ದೋಷಿ ಎಂದು ಹೈಕೋರ್ಟ್ ಆದೇಶಿಸಿದೆ.
ಇದೇ ವೇಳೆ ಬಾಬು ಬಜರಂಗಿ ಅವರ ಜೀವಾವಧಿ ಶಿಕ್ಷೆ(ಸಾಯುವವರೆಗೂ) ಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಉಳಿದ ಏಳು ಅಪರಾಧಿಗಳಿಗೆ 21 ವರ್ಷ ಶಿಕ್ಷೆ ನೀಡಲಾಗಿದೆ. 28 ವರ್ಷ ಶಿಕ್ಷೆ ಪಡೆದಿದ್ದ ಮಾಯಾ ಕೊಡ್ನಾನಿ ಸೇರಿದಂತೆ 29 ಮಂದಿ ಈ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನರೋಡಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಶೇಷ ನ್ಯಾಯಾಲಯ ಮುಂದೆ ಮಾಯಾ ಕೊಡ್ನಾನಿ ಪರ ಸಾಕ್ಷಿ ಹೇಳಿದ್ದಕ್ಕೆ ಬೆಲೆ ಸಿಕ್ಕಿದೆ. ಘಟನೆ ನಡೆದ ಸಂದರ್ಭ(ಫೆಬ್ರವರಿ 28, 2002)ದಲ್ಲಿ ಮಾಯಾ ಅವರು ಗುಜರಾತಿನ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿದ್ದರು ಎಂದು ಸೆಷನ್ಸ್ ಕೋರ್ಟಿನಲ್ಲಿ ಹೇಳಿದ್ದಾರೆ.

ಗುಜರಾತಿನಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮಾಯಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ವೃತ್ತಿಯಿಂದ ಸ್ತ್ರೀರೋಗ ತಜ್ಞೆಯಾಗಿರುವ ಮಾಯಾ ಅವರು ಘಟನೆ ನಡೆದ ದಿನದಂದು ಅಹ್ಮದಾಬಾದ್ ನಗರದ ಅಸರ್ವ ಪ್ರದೇಶದಲ್ಲಿ ನರ್ಸಿಂಗ್ ಹೋಂನಲ್ಲಿದ್ದರು ಎಂದು ವಾದಿಸಲಾಗಿದ್ದು, ಇದಕ್ಕೆ ಅಮಿತ್ ಹಾಗೂ ಇತರೆ 13 ಮಂದಿಗೆ ಸಮನ್ಸ್ ನೀಡುವಂತೆ ಮಾಯಾ ಕೋರಿದ್ದರು.
ನರೋಡಾ ಪಾಟಿಯಾ ಹತ್ಯಾಕಾಂಡ: ಈ ದುರ್ಘಟನೆಯಲ್ಲಿ 11 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು. ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications