ಗುಜರಾತ್ನಲ್ಲಿ 'ಶ್ರಮಿಕ್ ರೈಲು' ರದ್ದುಗೊಳಿಸಿದ್ದಕ್ಕೆ ಕಾರ್ಮಿಕರಿಂದ ಗಲಾಟೆ
ಅಹಮದಬಾದ್, ಮೇ 17: ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ದೇಶಾದ್ಯಂತ ಶ್ರಮಿಕ್ ರೈಲುಗಳು ಸಂಚಾರ ಮಾಡುತ್ತಿದೆ. ಆದರೆ, ಗುಜರಾತ್ನಲ್ಲಿ ಇಂದು ಎರಡು ಶ್ರಮಿಕ್ ರೈಲು ರದ್ದಾದ ಕಾರಣ ನೂರಾರು ಕಾರ್ಮಿಕರು ಗಲಾಟೆ ಮಾಡಿದ್ದಾರೆ.
ರಾಜ್ಕೋಟ್ನಿಂದ ಬಿಹಾರ್ ಮತ್ತು ಉತ್ತರ ಪ್ರದೇಶಕ್ಕೆ ತೆರಳಬೇಕಿದ್ದ ರೈಲನ್ನು ರದ್ದುಗೊಳಿಸಲಾಗಿದೆ. ಊರಿಗೆ ಹೋಗಲು ಸಿದ್ಧತೆಗಳೊಂದಿಗೆ ಬಂದಿದ್ದ ಕಾರ್ಮಿಕರು ರೈಲು ರದ್ದು ಎಂದು ತಿಳಿಯುತ್ತಿದ್ದಂತೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ರೈಲು ಸಂಚಾರ ರದ್ದಾಗಲು ನಿಖರವಾದ ಕಾರಣ ಇನ್ನು ಗೊತ್ತಾಗಿಲ್ಲ. ಆದರೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಗಲಭೆಗೆ ಕಾರಣವಾಗಿರುವವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಎಸ್ಪಿ ಬಲರಾಂ ಮೀನಾ ತಿಳಿಸಿದ್ದಾರೆ.

ಇನ್ನು ಹುಬ್ಬಳಿಯಿಂದ ಬಿಹಾರ್ಗೆ ಹೋಗಬೇಕಿದ್ದ ಶ್ರಮಿಕ್ ರೈಲು ಕೂಡ ಇಂದು ರದ್ದಾಗಿದೆ, ತಾಂತ್ರಿಕ ಕಾರಣದಿಂದ ಹುಬ್ಬಳ್ಳಿ-ಬಿಹಾರ್ ಎಕ್ಸ್ಪ್ರೆಸ್ ರೈಲು ಇಂದು ಪ್ರಯಾಣ ನಡೆಸಿಲ್ಲ. ಇದರಿಂದ ಸಾವಿರಾರು ಕಾರ್ಮಿಕರು ನಿರಾಸೆಯಿಂದ ರೈಲು ನಿಲ್ದಾಣದಲ್ಲಿ ಉಳಿಯಬೇಕಿದೆ.
Gujarat: Migrant workers ransack vehicles in Shapar industrial area in Rajkot following cancellation of two 'Shramik Special' trains to Bihar & Uttar Pradesh. Rajkot SP (Rural) Balram Meena says, "Action will be taken against those involved in the incident". pic.twitter.com/2oWAPQjOsb
— ANI (@ANI) May 17, 2020
ಲಾಕ್ಡೌನ್ ಕಾರಣದಿಂದ ದೇಶದ ಹಲವು ಪ್ರಮುಖ ನಗರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲಾಗದೆ ಸಿಲುಕಿಕೊಂಡಿದ್ದಾರೆ. ಎರಡು ಹಂತದ ಲಾಕ್ಡೌನ್ ಬಳಿಕ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್ ರೈಲು ಆರಂಭಿಸಿತ್ತು. ಪ್ರತಿನಿತ್ಯ ಹಲವು ರಾಜ್ಯಗಳಿಂದ ಶ್ರಮಿಕ್ ರೈಲು ಸಂಚಾರ ಮಾಡುತ್ತಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications