ಪಾಕ್ ಗೆ ನೀವು ಕಲಿಸಿದ ಪಾಠವೇನು ತಿಳಿಸಿ ಮೋದಿ ಎಂದ ಅಹ್ಮದ್ ಪಟೇಲ್
ಅಹ್ಮದಾಬಾದ್ (ಗುಜರಾತ್), ಡಿಸೆಂಬರ್ 30: ನೆಹರೂ ರೀತಿಯಲ್ಲಿ ಜಾಕೆಟ್ ಧರಿಸಿದ ಮಾತ್ರಕ್ಕೆ ನೀವು ನೆಹರೂ ಆಗಲು ಸಾಧ್ಯವಿಲ್ಲ. ವಿದೇಶಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಇಂದಿರಾಗಾಂಧಿ ಆಗಲು ಸಾಧ್ಯವಿಲ್ಲ. ಅಥವಾ ಕುರ್ತಾ ಧರಿಸಿದರೆ ರಾಜೀವ್ ಗಾಂಧಿ ಆಗಲಾರಿರಿ. ತ್ಯಾಗದ ಮೂಲಕ ಅಷ್ಟೇ ನೆಹರೂ, ಇಂದಿರಾ ಮತ್ತು ರಾಜೀವ್ ಆಗಲು ಸಾಧ್ಯ ಎಂದು ರಾಜ್ಯ ಸಭಾ ಸದಸ್ಯ ಅಹ್ಮದ್ ಪಟೇಲ್ ಹೇಳಿದ್ದಾರೆ.
ಎನ್ ಜಿಒಯಿಂದ ಗುಜರಾತ್ ನ ಅರಾವಳಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲೇ ಉತ್ತರಿಸಬೇಕು ಎಂದು, ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ಪಾಕಿಸ್ತಾನಕ್ಕೆ ಲವ್ ಲೆಟರ್ ಬರೆಯುತ್ತಾರೆ ಎಂದು ಮೋದಿ ಹೀಗಳೆದಿದ್ದರು.
ಆದರೆ, ಮೋದಿ ಪ್ರಧಾನಿಯಾದ ಮೇಲೆ ಏನು ಮಾಡಿದ್ದಾರೆ? ಪಾಕಿಸ್ತಾನಕ್ಕೆ ಪಾಠ ಕಲಿಸಿದರಾ? ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ನವಾಜ್ ಷರೀಫ್ ರನ್ನು ಆಹ್ವಾನಿಸಿದ್ದು ಎಲ್ಲರಿಗೂ ಗೊತ್ತಿದೆ. ಆಹ್ವಾನ ನೀಡದಿದ್ದರೂ ಬಿರಿಯಾನಿ ತಿನ್ನುವ ಸಲುವಾಗಿ ಮೋದಿ ಪಾಕಿಸ್ತಾನಕ್ಕೆ ತೆರಳಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಿಂದ ಪ್ರಧಾನಿ ಆಗಿದ್ದವರು ಪಾಕಿಸ್ತಾನಕ್ಕೆ ಏನು ಪಾಠ ಮಾಡಿದ್ದರು ಎಂಬುದನ್ನು ನೆನಪಿಸಬೇಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಪಾಕಿಸ್ತಾನವನ್ನು ತುಂಡು ಮಾಡಿ, ಬಾಂಗ್ಲಾದೇಶ್ ಎಂಬ ಪ್ರತ್ಯೇಕ ದೇಶ ಮಾಡಿದರು. ಆಗಿದ್ದ ಎಲ್ಲ ಅಂತರರಾಷ್ಟ್ರೀಯ ಒತ್ತಡವನ್ನೂ ಅವರು ಮೀರಿದರು. ಪಾಕಿಸ್ತಾನದ ಒಂದು ಲಕ್ಷ ಸೈನಿಕರು ಭಾರತೀಯ ಸೈನ್ಯಕ್ಕೆ ಶರಣಾಗುವಂತೆ ಮಾಡಿದರು ಎಂದ ಅವರು, ಇವೆಲ್ಲ ದಾಖಲಾಗಿರುವ ಇತಿಹಾಸ. ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications