Breaking: ಗುಜರಾತ್; 1,026 ಕೋಟಿ ಮೌಲ್ಯದ 513 ಕೆಜಿ ಡ್ರಗ್ಸ್ ವಶ
ಅಹಮದಾಬಾದ್, ಆಗಸ್ಟ್ 16: ಮುಂಬೈ ಆಂಟಿ ನಾರ್ಕೋಟಿಕ್ಸ್ ಸೆಲ್ನ ವರ್ಲಿ ಘಟಕವು ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಡ್ರಗ್ಸ್ ರಾಕೆಟ್ ಒಂದನ್ನು ಪತ್ತೆ ಹಚ್ಚಿದೆ. ಭರೂಚ್ನ ಅಂಕಲೇಶ್ವರ ಪ್ರದೇಶದಲ್ಲಿ ಪೊಲೀಸರು ಸುಮಾರು 513 ಕೆಜಿ ಎಂಡಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ಮಾದಕ ವಸ್ತುಗಳ ಮೌಲ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 1,026 ಕೋಟಿ ರೂಪಾಯಿಗಳು. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪೈಕಿ 5 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇಬ್ಬರು ಆರೋಪಿಗಳು ಮಾದಕ ವಸ್ತು ನಿಗ್ರಹ ಘಟಕದ ವಶದಲ್ಲಿದ್ದಾರೆ.

ಇದಕ್ಕೂ ಮುನ್ನ ಮುಂಬೈ ಪೊಲೀಸರು ಶಿವಾಜಿ ನಗರದಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಡ್ರಗ್ಸ್ ಜಾಲವನ್ನು ಹುಡುಕುವಲ್ಲಿ ತೊಡಗಿದ್ದರು. ಈ ಸರಕನ್ನು ಹಿಡಿಯಲು ಮುಂಬೈ ಪೊಲೀಸರು ಐದು ತಿಂಗಳ ಕಾಲ ಹರಸಾಹಸ ಪಟ್ಟಿದೆ.
ಮುಂಬೈ ಪೊಲೀಸರ ಮಾದಕ ವಸ್ತು ನಿಗ್ರಹ ಘಟಕ ಈ ಬಗ್ಗೆ ನಿರಂತರವಾಗಿ ಕೆಲಸ ಮಾಡುತ್ತಿತ್ತು. ಇದು ಹಲವು ರಾಜ್ಯಗಳಲ್ಲಿ ಹರಡಿರುವ ದೊಡ್ಡ ಅಂತರರಾಜ್ಯ ಡ್ರಗ್ ಗ್ಯಾಂಗ್ ಎಂದು ಪೊಲೀಸರು ಹೇಳಿದ್ದಾರೆ. ಈ ಗ್ಯಾಂಗ್ ವಿಶೇಷವಾಗಿ ಯುವಕರನ್ನು ಗುರಿಯಾಗಿಸುತ್ತದೆ. ಈ ಮಾದವ ವಸ್ತುಗಳನ್ನು ಮೇಲ್ವರ್ಗದ ಜನರಿಗೆ ಸರಬರಾಜು ಮಾಡಲಾಗುತ್ತದೆ.
ಮಾರ್ಚ್ 29 ರಂದು, ಮುಂಬೈನ ಶಿವಾಜಿ ನಗರ ಪ್ರದೇಶದಿಂದ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರ ನಾರ್ಕೋಟಿಕ್ಸ್ ಸೆಲ್ನ ವರ್ಲಿ ಘಟಕವು ಬಂಧಿಸಿದೆ.
ಬಂಧಿತರಿಂದ ಸುಮಾರು 4.5 ಕೋಟಿ ಮೌಲ್ಯದ ಎಂಡಿ (ಡ್ರಗ್ಸ್) ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂದಿನಿಂದ ಪೊಲೀಸರು ಈ ಗ್ಯಾಂಗ್ ಬಗ್ಗೆ ತನಿಖೆ ಆರಂಭಿಸಿದ್ದರು. ಆಂಟಿ ನಾರ್ಕೋಟಿಕ್ಸ್ ಸೆಲ್ ಆಗಸ್ಟ್ 3 ರಂದು ಪಾಲ್ಘರ್ ಜಿಲ್ಲೆಯ (ಮುಂಬೈನ ಹೊರವಲಯ) ನಲಸೋಪಾರಾದಿಂದ 1,403 ಕೋಟಿ ರೂಪಾಯಿ ಮೌಲ್ಯದ 701 ಕೆಜಿ ಮೆಫೆಡ್ರೋನ್ (ಎಂಡಿ) ಅನ್ನು ವಶಪಡಿಸಿಕೊಂಡಿದೆ. ಈ ವೇಳೆ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.
ಈ ಕೆಲಸದಲ್ಲಿ ತೊಡಗಿದ್ದ ಮಹಿಳೆಯನ್ನು ಜುಲೈ 27 ರಂದು ಬಂಧಿಸಲಾಗಿತ್ತು. ಮಹಿಳೆ ನೀಡಿದ ಮಾಹಿತಿಯ ಆಧಾರದ ಮೇಲೆ ಆಗಸ್ಟ್ 2 ರಂದು ಮತ್ತೊಬ್ಬ ಶಂಕಿತನನ್ನು ಬಂಧಿಸಲಾಯಿತು. ನಂತರ ಐದನೇ ಆರೋಪಿಯನ್ನು ಆಗಸ್ಟ್ 3 ರಂದು ವಶಕ್ಕೆ ಪಡೆಯಲಾಯಿತು. ಎಲ್ಲಾ ಆರೋಪಿಗಳ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ 1985 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications