ಸ್ವಯಂಘೋಷಿತ ದೇವಮಾನವ ನಿತ್ಯಾನಂದ ವಿದೇಶಕ್ಕೆ ಪರಾರಿ
Recommended Video
ಅಹಮದಾಬಾದ್, ನವೆಂಬರ್ 22: ಸ್ವಯಂಘೋಷಿತ ದೇವಮಾನವ ನಿತ್ಯಾನಂದಸ್ವಾಮಿ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಖುದ್ದು ಗುಜರಾತ್ ಪೊಲೀಸ್ ಹೇಳಿಕೊಂಡಿದೆ.
ಅಹಮದಾಬಾದ್ ಹೈಕೋರ್ಟ್ಗೆ ಗುಜರಾತ್ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ನಿತ್ಯಾನಂದ ಸ್ವಾಮಿಗಾಗಿ ಗುಜರಾತ್ನಲ್ಲಿ ಅಥವಾ ಭಾರತದಲ್ಲಿ ಹುಡುಕಿ ಪ್ರಯೋಜನವಿಲ್ಲ. ಈಗಾಗಲೇ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ.
ಇತ್ತೀಚೆಗಷ್ಟೆ ಗುಜರಾತ್ ಜನಾರ್ದನ ಶರ್ಮಾ ದಂಪತಿ ತಮ್ಮ ನಾಲ್ವರು ಹೆಣ್ಣು ಮಕ್ಕಳನ್ನು ನಿತ್ಯಾನಂದ ಅಕ್ರಮ ಬಂಧನಲದಲ್ಲಿಟ್ಟಿರುವ ಬಗ್ಗೆ ಗುಜರಾತ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಇದೇ ದೂರಿನಲ್ಲಿ ಆಶ್ರಮದ ಇತರ ಅಪ್ರಾಪ್ತ ಬಾಲಕರಿಯರ ರಕ್ಷಣೆ ಕುರಿತು ಮನವಿ ಸಲ್ಲಿಸಲಾಗಿತ್ತು.
ರಾಮನಗರದಲ್ಲಿ ನಿತ್ಯಾನಂದನ ಜಾಮೀನು ಅರ್ಜಿ ವಜಾ ನಂತರ ಪೊಲೀಸರ ಸಹಾಯದೊಂದಿಗೆ ಜನಾರ್ದನ ಶರ್ಮಾ ದಂಪತಿಯ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿತ್ತು.
ಆದರೆ ಇದೇ ದಂಪತಿಯ ಇಬ್ಬರು ಹಿರಿಯ ಪುತ್ರಿಯರು ಪೋಷಕರೊಂದಿಗೆ ತೆರಳಲು ನಿರಾಕರಿಸಿ ಆಶ್ರಮದಲ್ಲಿಯೇ ಇರುವುದಾಗಿ ಹೇಳಿದ್ದರು.

ಕರ್ನಾಟಕದಲ್ಲಿ ಅತ್ಯಾಚಾರ ಪ್ರಕರಣ
ಕರ್ನಾಟಕದಲ್ಲಿ ಅತ್ಯಾಚಾರ ಪ್ರಕರಣ ಹಾಗೂ ಗುಜರಾತ್ನಲ್ಲಿ ಇಬ್ಬರು ಅಪ್ರಾಪ್ತರ ಮೇಲೆ ಹಲ್ಲೆ ಹಾಗೂ ಅಪಹರಣ ಪ್ರಕರಣ ದಾಖಲಾದ ಬಳಿಕ ನಿತ್ಯಾನಂದ ಸ್ವಾಮಿ ಪರಾರಿಯಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಪೊಲೀಸ್ ಮೂಲಗಳ ಪ್ರಕಾರ ಆಸ್ಟ್ರೇಲಿಯಾ ದ್ವೀಪವೊಂದರಲ್ಲಿ ನಿತ್ಯಾನಂದ ಅಡಗಿರುವ ಸಾಧ್ಯತೆ ಇದೆ.

ಬಂಧನಕ್ಕೊಳಗಾಗುವ ಭೀತಿಯಲ್ಲಿ ಪರಾರಿ
ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗುವ ಭೀತಿಯಲ್ಲಿ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಇಂಟರ್ಪೋಲ್ ಹಾಗೂ ಇತರೆ ಏಜೆನ್ಸಿಗಳ ಮೂಲಕ ವಿದೇಶದಿಂದ ಬಂಧಿಸಿ ಭಾರತಕ್ಕೆ ಕರೆತರಲು ಪೊಲೀಸರು ಸಿದ್ಧರಿದ್ದಾರೆ ಎಂದು ಗುಜರಾತ್ ಸರ್ಕಾರ ಹೇಳಿಕೊಂಡಿದೆ.

ಡಿಸೆಂಬರ್ 9ಕ್ಕೆ ಕೋರ್ಟ್ಗೆ ಹಾಜರಾಗಬೇಕು
ಆದರೆ ಕೋರ್ಟ್ ನಿತ್ಯಾನಂದಸ್ವಾಮಿಗೆ ಕೋರ್ಟ್ ಜಾರಿ ಮಾಡಿ ಡಿಸೆಂಬರ್ 9ರ ವಿಚಾರಣೆಗೆ ಹಾಜರಾಗಿ ಉತ್ತರ ನೀಡುವಂತೆ ಸೂಚಿಸಿದೆ. ಇದರಿಂದ ಮುಂದಿನ ವಿಚಾರಣೆಯಲ್ಲಿ ನಿತ್ಯಾನಂದ ನಿಲುವು ಹಾಗೂ ಕೋರ್ಟ್ ಪ್ರತಿಕ್ರಿಯೆ ಪ್ರಾಮುಖ್ಯತೆ ಪಡೆದಿದೆ.

ನಕಲಿ ಪಾಸ್ಪೋರ್ಟ್ ಬಳಕೆ
ಗುಜರಾತ್ ಪೊಲೀಸರ ಪ್ರಕಾರ ನಿತ್ಯಾನಂದ ಪಾಸ್ಪೋರ್ಟ್ ಪೊಲೀಸರ ವಶದಲ್ಲಿದೆ. ಹಾಗಿದ್ದರೆ ವಿದೇಶಕ್ಕೆ ನಿತ್ಯಾನಂದ ಪರಾರಿಯಾಗಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ನಕಲಿ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ನಿತ್ಯಾನಂದ ಹೋಗಿರಬಹುದು ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಇದು ನಿಜವಾದರೆ ನಿತ್ಯಾನಂದ ಸ್ವಾಮಿಗೆ ಇನ್ನಷ್ಟು ಕಾನೂನು ಸಂಕಟ ಎದುರಾಗಲಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications