ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ: ಬಿಜೆಪಿ ಭೀಷ್ಮ ಅಡ್ವಾಣಿಗೆ ಟಿಕೆಟ್ ಇಲ್ಲ
ಗಾಂಧಿನಗರ, ಮಾರ್ಚ್ 21: ಲೋಕಸಭಾ ಚುನಾವಣೆ 2019ಕ್ಕೆ ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಚ್ಚರಿ ಎಂಬಂತೆ ಬಿಜೆಪಿಯ ಕಟ್ಟಾಳು ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಟಿಕೆಟ್ ನೀಡಲಾಗಿಲ್ಲ.
ಮಾಜಿ ಬಿಜೆಪಿ ರಾಷ್ಟ್ರಾಧ್ಯಕ್ಷ ಲಾಲ್ ಕೃಷ್ಣ ಅಡ್ವಾಣಿ ಅವರು ಗುಜರಾತ್ನ ಗಾಂಧಿನಗರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದರು, ಆದರೆ ಈ ಬಾರಿ ಇದೇ ಕ್ಷೇತ್ರದಿಂದ ಈಗಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ಪರ್ಧಿಸುತ್ತಿದ್ದಾರೆ.
ಗಾಂಧಿ ನಗರ ಕ್ಷೇತ್ರದಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಈವರೆಗೆ ಆರು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಳೆದ ನಾಲ್ಕು ಸಾರ್ವತ್ರಿಕ ಚುನಾವಣೆಯಲ್ಲಿ ಸತತವಾಗಿ ಜಯ ಗಳಿಸಿದ್ದರು. ಕಳೆದ ಚುನಾವಣೆಯಲ್ಲಿಯೂ ಸಹ ಅವರು ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಆದರೆ ಈ ಬಾರಿ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ಪರ್ಧಿಸುತ್ತಿದ್ದಾರೆ. ಅಮಿತ್ ಶಾ ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಮುಂಚೆ ಅವರು ಐದು ವಿಧಾನಸಭೆ ಚುನಾವಣೆಗಳನ್ನು ಎದುರಿಸಿ ಗೆದ್ದಿದ್ದರು. ನಾಲ್ಕು ಬಾರಿ ಸರ್ಕೇಜ್ನಿಂದ ಹಾಗೂ ಒಂದು ಬಾರಿ ನಾರನ್ ಪುರದಿಂದ ಅವರು ಗುಜರಾತ್ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಅಡ್ವಾಣಿ ಅವರನ್ನು ಬಿಜೆಪಿಯ ಮೋದಿ-ಶಾ ಜೋಡಿ ಮೂಲೆಗುಂಪು ಮಾಡಿದೆ ಎಂಬ ಆರೋಪ ಇದೆ. ಅದಕ್ಕೆ ಪೂರಕವೆಂಬಂತೆ ಈಗ ಅಡ್ವಾಣಿ ಅವರಿಗೆ ಅವರದ್ದೇ ಕ್ಷೇತ್ರದಿಂದ ಟಿಕೆಟ್ ನೀಡಲಾಗಿಲ್ಲ. ಅಡ್ವಾಣಿ ಅವರಿಗೆ 91 ವರ್ಷ ವಯಸ್ಸಾಗಿದ್ದು, ಅವರಿಗೆ ಟಿಕೆಟ್ ತಪ್ಪಲು ಅವರ ವಯಸ್ಸೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications