ಸಿಎಎ ವಿರುದ್ಧ ಪ್ರತಿಭಟನೆ ಮಧ್ಯೆಯೇ ಪಾಕ್ ಮಹಿಳೆಗೆ ಭಾರತದ ಪೌರತ್ವ
ಅಹಮದಾಬಾದ್, ಡಿಸೆಂಬರ್ 19: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ಅನೇಕ ಕಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿದೆ. ಭಾರತದಲ್ಲಿನ ಅಲ್ಪಸಂಖ್ಯಾತ ಮುಸ್ಲಿಮರ ವಿರುದ್ಧ ಈ ಕಾಯ್ದೆ ತಾರತಮ್ಯ ಎಸಗಲಿದೆ ಎಂದು ಆರೋಪಿಸಲಾಗಿದೆ. ಇದರ ನಡುವೆಯೇ ಪಾಕಿಸ್ತಾನದಿಂದ ಬಂದ ಮುಸ್ಲಿಂ ಮಹಿಳೆಯೊಬ್ಬರು ಭಾರತದ ಪೌರತ್ವ ಪಡೆದುಕೊಂಡಿದ್ದಾರೆ.
ಭಾರತದ ಪೌರತ್ವ ನೀಡುವಂತೆ ಹಸೀನಾಬಾನು ಅಬ್ಬಾಸ್ ಅಲಿ ವರ್ಸಾರಿಯಾ ಗುಜರಾತ್ನ ದೇವಭೂಮಿ ದ್ವಾರಕಾದ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಜಿಲ್ಲಾಧಿಕಾರಿ ಬುಧವಾರ ಹಸೀನಾಬಾನು ಅವರಿಗೆ ಭಾರತದ ಪೌರತ್ವದ ಪ್ರಮಾಣಪತ್ರ ಹಸ್ತಾಂತರಿಸಿದರು. ಈ ವಿಚಾರವನ್ನು ಬಳಿಕ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
'ಅರ್ಜಿದಾರರಾದ ಹಸೀನಾಬಾನು ಅಬ್ಬಾಸ್ ಅಲಿ ವರ್ಸಾರಿಯಾ ಅವರಿಗೆ ಇಂದು ಭಾರತದ ಪೌರತ್ವವನ್ನು ನೀಡಲಾಯಿತು' ಎಂದು ದೇವಭೂಮಿಯ ಕಲೆಕ್ಟರ್ ಟ್ವೀಟ್ ಮಾಡಿದ್ದಾರೆ.

1999ರಲ್ಲಿ ಮದುವೆಯಾದ ಬಳಿಕ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದ ಹಸೀನಾ ಬಾನು, ಪತಿಯ ಮರಣದ ಬಳಿಕ ಭಾರತಕ್ಕೆ ಮರಳಿದ್ದರು. ಕೆಲವು ವರ್ಷಗಳನ್ನು ಭಾರತದಲ್ಲಿ ಕಳೆದ ಬಳಿಕ ಅವರಿಗೆ ಇಲ್ಲಿನ ಪೌರತ್ವ ನೀಡಲಾಗಿದೆ. ಕಳೆದ ಆರು ವರ್ಷಗಳಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಬಂದ ಸುಮಾರು ನಾಲ್ಕು ಸಾವಿರ ಜನರಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಹಸೀನಾ ಬಾನು ಅವರಿಗೆ ಎಲ್ಲರಿಗೂ ಅನ್ವಯವಾಗುವ ಸಾಮಾನ್ಯ ಪ್ರಕ್ರಿಯೆ ಮೂಲಕವೇ ಪೌರತ್ವ ನೀಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನರೇಂದ್ರ ಕುಮಾರ್ ಮೀನಾ ತಿಳಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications