ಪ್ರಧಾನಿ ಮೋದಿ ಗುಜರಾತ್ ಭೇಟಿ: 21,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಯೋಜನೆಗಳ ಉದ್ಘಾಟನೆ
ಅಹ್ಮದಾಬಾದ್ ಜೂನ್ 17 : ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 17 ರಿಂದ ಗುಜರಾತ್ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ, 21,000 ಕೋಟಿ ರೂ.ಗಿಂತ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಾಸಂಗಿಕವಾಗಿ, ಮೋದಿ ಅವರ ತಾಯಿಯ ಜನ್ಮದಿನವು ಜೂನ್ 18 ರಂದು ಬರುತ್ತದೆ. ಅವರು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದು ಅವರ ಆಶೀರ್ವಾದ ಪಡೆಯಲು ಮೋದಿ ಅವರು ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 18 ರಂದು ಪಾವಗಡ ಬೆಟ್ಟದಲ್ಲಿ ಶ್ರೀ ಕಾಳಿಕಾ ಮಾತೆಯ ಪುನರಾಭಿವೃದ್ಧಿ ದೇವಾಲಯವನ್ನು ಮೋದಿ ಉದ್ಘಾಟಿಸಲಿದ್ದು, ನಂತರ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿಕೆಯಲ್ಲಿ ತಿಳಿಸಿದೆ. ಶ್ರೀ ಕಾಳಿಕಾ ಮಾತಾ ದೇವಾಲಯ ಇದು ಪ್ರದೇಶದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ದೇವಾಲಯದ ಪುನರಾಭಿವೃದ್ಧಿಯನ್ನು ಎರಡು ಹಂತಗಳಲ್ಲಿ ಮಾಡಲಾಗಿದೆ. ಮೊದಲ ಹಂತದ ಪುನರಾಭಿವೃದ್ಧಿಯ ಉದ್ಘಾಟನೆಯನ್ನು ಏಪ್ರಿಲ್ನಲ್ಲಿ ಮೋದಿ ಮಾಡಿದ್ದರು.

ಹಲವು ಯೋಜನೆಗಳ ಉದ್ಘಾಟನೆ
ಇಂದು (ಜೂನ್ 17) ಅವರು ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು 21,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ವಡೋದರಾದಲ್ಲಿ ಗುಜರಾತ್ ಗೌರವ ಅಭಿಯಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ಪಿಎಂಒ ತಿಳಿಸಿದೆ.
ಅಭಿವೃದ್ಧಿ ಯೋಜನೆಗಳು 16,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ರೈಲ್ವೆಗೆ ಸಂಬಂಧಿಸಿದ ಯೋಜನೆಗಳನ್ನು ಒಳಗೊಂಡಿರುತ್ತದೆ. ರೈಲ್ವೆ ಯೋಜನೆಗಳು ಮೀಸಲಾದ ಸರಕು ಸಾಗಣೆ ಕಾರಿಡಾರ್ನ 357-ಕಿಮೀ-ಉದ್ದದ ನ್ಯೂ ಪಾಲನ್ಪುರ್-ಮದರ್ ವಿಭಾಗ, 166-ಕಿಮೀ-ಉದ್ದದ ಅಹಮದಾಬಾದ್-ಬೋಟಾಡ್ ವಿಭಾಗದ ಗೇಜ್ ಪರಿವರ್ತನೆ ಮತ್ತು 81-ಕಿಮೀ-ಉದ್ದದ ಪಾಲನ್ಪುರ್-ಮಿಥಾ ವಿಭಾಗದ ವಿದ್ಯುದ್ದೀಕರಣವನ್ನು ಒಳಗೊಂಡಿವೆ. ಸೂರತ್, ಉದ್ನಾ, ಸೋಮನಾಥ್ ಮತ್ತು ಸಾಬರಮತಿ ನಿಲ್ದಾಣಗಳ ಪುನರಾಭಿವೃದ್ಧಿಗೆ ಇದು ಸಹಾಯಕವಾಗಿದೆ. ಜೊತೆಗೆ ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಣೆ ಮತ್ತು ಪ್ರಯಾಣಿಕರ ಸೌಕರ್ಯಗಳನ್ನು ಹೆಚ್ಚಿಸುತ್ತದೆ.

ಇತರ ಅಭಿವೃದ್ಧಿ ಕಾಮಗಾರಿಗಳು
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ, ನಗರ ಪ್ರದೇಶದಲ್ಲಿ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಮನೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ 1,530 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮನೆಗಳು ಸೇರಿದಂತೆ ಒಟ್ಟು 1.38 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿಯವರು ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಜತೆಗೆ 310 ಕೋಟಿಗೂ ಅಧಿಕ ಮೌಲ್ಯದ ಸುಮಾರು 3,000 ಮನೆಗಳ ‘ಖತ್ ಮುಹೂರ್ತ' ಕೂಡ ನಡೆಯಲಿದೆ.
ಖೇಡಾ, ಆನಂದ್, ವಡೋದರಾ, ಛೋಟಾ ಉದೇಪುರ್ ಮತ್ತು ಪಂಚಮಹಲ್ನಲ್ಲಿ 680 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ, ಇದು ಈ ಪ್ರದೇಶದಲ್ಲಿ ವಾಸಿಸಲು ಅನುಕೂಲವಾಗುವಂತೆ ಮಾಡುವ ಗುರಿಯನ್ನು ಹೊಂದಿದೆ ಎಂದು ಪಿಎಂಒ ಹೇಳಿದೆ.

2,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ
ದಾಭೋಯಿ ತಾಲೂಕಿನ ಕುಂಧೇಲಾ ಗ್ರಾಮದಲ್ಲಿ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಲಿದ್ದಾರೆ. ವಡೋದರಾ ನಗರದಿಂದ ಸುಮಾರು 20 ಕಿಮೀ ದೂರದಲ್ಲಿರುವ ಈ ವಿಶ್ವವಿದ್ಯಾನಿಲಯವನ್ನು ಸುಮಾರು 425 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದು 2,500 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಗತ್ಯಗಳನ್ನು ಪೂರೈಸುತ್ತದೆ.

ಪೋಷನ್ ಸುಧಾ ಯೋಜನೆ 120 ಕೋಟಿ ರೂ.
ಇತರ ಉಪಕ್ರಮಗಳ ಪೈಕಿ, ಪ್ರಧಾನ ಮಂತ್ರಿಗಳು 'ಮುಖ್ಯಮಂತ್ರಿ ಮಾತೃಶಕ್ತಿ ಯೋಜನೆ'ಯನ್ನು ಪ್ರಾರಂಭಿಸಲಿದ್ದು, ತಾಯಿ ಮತ್ತು ಮಗುವಿನ ಆರೋಗ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು 800 ಕೋಟಿ ರೂ. ಯೋಜನೆಯಡಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಂದ 2 ಕೆಜಿ ಕಡಲೆ, 1 ಕೆಜಿ ತೊಗರಿಬೇಳೆ ಮತ್ತು 1 ಕೆಜಿ ಖಾದ್ಯ ಎಣ್ಣೆಯನ್ನು ಉಚಿತವಾಗಿ ನೀಡಲಾಗುತ್ತದೆ. ಬುಡಕಟ್ಟು ಜಿಲ್ಲೆಗಳ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಕ್ಯಾಲ್ಸಿಯಂ ಮಾತ್ರೆಗಳನ್ನು ನೀಡುವ ಮತ್ತು ಪೌಷ್ಟಿಕಾಂಶದ ಬಗ್ಗೆ ಶಿಕ್ಷಣ ನೀಡುವ ಪ್ರಯೋಗ ಯಶಸ್ವಿಯಾದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.
ಪ್ರಧಾನ ಮಂತ್ರಿಗಳು ಸುಮಾರು 120 ಕೋಟಿ ರೂಪಾಯಿಗಳನ್ನು 'ಪೋಷನ್ ಸುಧಾ ಯೋಜನೆ'ಗೆ ವಿತರಿಸಲಿದ್ದಾರೆ, ಇದನ್ನು ಈಗ ರಾಜ್ಯದ ಎಲ್ಲಾ ಬುಡಕಟ್ಟು ಫಲಾನುಭವಿಗಳಿಗೆ ವಿಸ್ತರಿಸಲಾಗುತ್ತಿದೆ ಎಂದು ಪಿಎಂಒ ತಿಳಿಸಿದೆ.












Click it and Unblock the Notifications