ತೌಕ್ತೆ ಚಂಡಮಾರುತ: ವೈಮಾನಿಕ ಸಮೀಕ್ಷೆ ನಡೆಸಲು ಗುಜರಾತ್ಗೆ ಪ್ರಧಾನಿ ಮೋದಿ ಆಗಮನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಗುಜರಾತ್ನ ಭಾವ್ನಗರಕ್ಕೆ ಆಗಮಿಸಿದ್ದು ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಅಮ್ರೇಲಿ, ಗಿರ್ ಸೋಮನಾಥ್, ಭಾವ್ನಗರ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆಯಲ್ಲಿ ಪ್ರಧಾನಿ ವೀಕ್ಷಿಸಲಿದ್ದಾರೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇನ್ನು ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದಿಯುಗೆ ತೆರಳಲಿದ್ದು ಅಲ್ಲಿಯೂ ಚಂಡಮಾರುತದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಲಿದ್ದಾರೆ. ಮಂಗಳವಾರ ಮುಖ್ಯಮಂತ್ರಿಗಳ ಕಛೇರಿ ನೀಡಿದ ಮಾಹಿತಿಯ ಪ್ರಕಾರ ವೈಮಾನಿಕ ಸಮೀಕ್ಷೆಯ ಬಳಿಕ ಪ್ರಧಾನಿ ಅಹಮದಾಬಾದ್ನಲ್ಲಿ ಸಮೀಕ್ಷೆಯ ಸಭೆಯನ್ನು ನಡೆಸಲಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್ಗೆ ಭೇಟಿ ನೀಡಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾಗಿರುವ ಅಮ್ರೇಲಿ, ಗಿರ್ ಸೋಮ್ನಾಥ್, ಭಾವ್ನಗರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು.
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications