ಹನುಮ ಜಯಂತಿ 2022: ಗುಜರಾತ್ನಲ್ಲಿ 108 ಅಡಿ ಎತ್ತರದ ಹನುಮನ ಪ್ರತಿಮೆ ಲೋಕಾರ್ಪಣೆ
ಗುಜರಾತ್, ಏಪ್ರಿಲ್ 16 : ದೇಶಾದ್ಯಂತ ಬಹಳ ಸಡಗರ ಸಂಭ್ರಮದಿಂದ ಹನುಮ ಜಯಂತಿಯನ್ನ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಹನುಮ ಜಯಂತಿ ಪ್ರಯುಕ್ತವಾಗಿ 108 ಅಡಿ ಎತ್ತರದ ಹನುಮನ ಪ್ರತಿಮೆಯನ್ನ ಅನಾವರಣಗೊಳಿಸಿದ್ದಾರೆ.
शक्ति, साहस और संयम के प्रतीक भगवान हनुमान की जयंती पर सभी देशवासियों को अनेकानेक शुभकामनाएं। पवनपुत्र की कृपा से हर किसी का जीवन बल, बुद्धि और विद्या से सदा परिपूर्ण रहे।
— Narendra Modi (@narendramodi) April 16, 2022
ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ 108 ಅಡಿ ಎತ್ತರದ ಹನುಮನ ಪ್ರತಿಮೆಯನ್ನ ಶನಿವಾರ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದ್ದಾರೆ. ವಿಶೇಷ ಎಂದರೆ ಹನುಮಾನ್ ಚಾರ್ಧಾಮ್ ಯೋಜನೆಯ ಭಾಗವಾಗಿ ದೇಶದ ನಾಲ್ಕು ಕಡೆ ಸ್ಥಾಪಿಸಲಾದ ನಾಲ್ಕು ಹನುಮನ ಪತ್ರಿಮೆಗಳಲ್ಲಿ ಇದು ಎರಡನೇಯ ಪ್ರತಿಮೆಯಾಗಿದೆ. ಕಳೆದ ವರ್ಷ ಶಿಮ್ಲಾದಲ್ಲಿ ಮೊದಲನೇಯ ಹನುಮನ ಪ್ರತಿಮೆ ಅನಾವರಣ ಮಾಡಲಾಗಿತ್ತು. ಇಂದು ಮೋರ್ಬಿಯಲ್ಲಿ ಎರಡನೇ ಪ್ರತಿಮೆ ಲೋಕಾರ್ಪಣೆಯಾಗಿದೆ. ಇನ್ನೆರಡು ಹನುಮನ ಪ್ರತಿಮೆ ರಾಮೇಶ್ವರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅನಾವರಣಗೊಳ್ಳಲಿದೆ.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಹನುಮನ ಜಯಂತಿಯಂದು ಭಗವಂತ ಹನುಮನ ಪ್ರತಿಮೆ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದ್ದು, ನನ್ನ ಸೌಭಾಗ್ಯ ಎಂದಿದ್ದಾರೆ. ಅಲ್ಲದೆ ರಾಮ ಭಕ್ತನ ಕಥೆಗಳನ್ನ ವಿವಿಧ ಭಾಷೆ, ಪ್ರದೇಶಗಳಲ್ಲಿ ಬೇರೆ ಬೇರೆ ರೀತಿಯಾಗಿ ಹೇಳಲಾಗಿದೆ. ಆದ್ರೆ ಎಲ್ಲಾ ಭಾಷೆಯಲ್ಲೂ ಒಂದೇ ರೀತಿಯ ಸಾರಂಶವನ್ನ ನೀಡುತ್ತದೆ. ಎಲ್ಲರನ್ನೂ ಒಟ್ಟುಗೂಡಿಸುತ್ತದೆ. ಇದು ಭಾರತೀಯ ನಂಬಿಕೆಯ ಶಕ್ತಿ, ನಮ್ಮ ಆಧ್ಮಾತ್ಮಿಕತೆ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.
Inaugurating a 108 feet statue of Hanuman ji in Morbi, Gujarat. https://t.co/6M0VOXXPmk
— Narendra Modi (@narendramodi) April 16, 2022

ಇನ್ನು ಹನುಮನ ಜಯಂತಿ ಪ್ರಯುಕ್ತ ದೇಶದ ಜನತೆಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಶಕ್ತಿ, ಧೈರ್ಯ ಮತ್ತು ಸಂಯಮದ ಸಂಕೇತವಾದ ಭಗವಾನ್ ಹನುಮಾನ್ ಜಯಂತಿಯನ್ನ ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ದೇಶದ ಜನರಿಗೆ ಪವನಪುತ್ರನ ಅನುಗ್ರಹ ದೊರೆಯಲಿ ಪ್ರತಿಯೊಬ್ಬರ ಜೀವನವು ಯಾವಾಗಲೂ ಶಕ್ತಿ, ಬುದ್ದಿವಂತಿಕೆ, ಜ್ಞಾನದಿಂದ ತುಂಬಿರಲಿ ಅಂತ ದೇಶದ ಜನರಿಗೆ ಹನುಮ ಜಯಂತಿಯ ಶುಭ ಕೋರಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications